ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ವಕ್ಫ್ ತಿದ್ದುಪಡಿ, ಕಾನೂನು ಸುವ್ಯವಸ್ಥೆಗೆ ಮುಂಜಾಗೃತೆವಹಿಸಿ ; ಶ್ರೀರಾಮಸೇನೆಯಿಂದ ಎಸ್ಪಿಗೆ ಮನವಿ

ಹಾಸನ: ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಏನಾದರೂ ಸ್ವೀಕಾರಗೊಂಡರೆ ಮುಂದೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಬಹುದು, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಮುಂಜಾಗೃತೆವಹಿಸುವಂತೆ ಆಗ್ರಹಿಸಿ ಶ್ರೀರಾಮಸೇನೆಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಸಲ್ಲಿಸಿದರು.

ಇದೆ ವೇಳೆ ಶ್ರೀರಾಮಸೇನೆ ಬೆಂಗಳೂರು ಮಹಾನಗರ ಪ್ರಧಾನ ಕಾರ್ಯದರ್ಶಿ ಸುಂದರೇಶ್ ಮತ್ತು ಜಿಲ್ಲಾಧ್ಯಕ್ಷ ಹೇಮಂತ್ ಜಾನೆಕೆರೆ ಮಾಧ್ಯಮದೊಂದಿಗೆ ಮಾತನಾಡಿ, ಇಡೀ ದೇಶದಲ್ಲಿ ವಕ್ಫ್ ಬೋರ್ಡ್ ತಿದ್ದುಪಡಿಯ ಬಗ್ಗೆ ಪರ, ವಿರೋಧ ಚರ್ಚೆ ಕಾವೇರುತ್ತಿದೆ. ಕೆಲವು ಮೌಲ್ವಿಗಳು ತಿದ್ದುಪಡಿ ಆದ್ರೆ ದೇಶದಲ್ಲಿ ರಕ್ತಪಾತ ಆಗುತ್ತೆ ಅನ್ನೋ ಹೇಳಿಕೆ ಕೊಡುತ್ತಿದ್ದಾರೆ ಎಂದು ದೂರಿದರು. ಇದು ಗಲಭೆಗೆ ಪ್ರಚೋದನೆ ನೀಡುವ ಮುನ್ಸೂಚನೆ. ಹಿಂದೆಯೂ ಸಿಎಎ ಮತ್ತು ಎನ್.ಆರ್.ಸಿ. ಕೃಷಿ ಮಸೂದೆ ಮಂಡನೆಯದಾಗ ಇಂತಹ ಪ್ರಚೋದನೆಕಾರಿ ಹೇಳಿಕೆಗಳೇ ಗಲಭೆಗೆ ಕಾರಣವಾಗಿದ್ದವು. ಈಗಲೂ ಅದೇ ವಾತಾವರಣ ಸೃಷ್ಟಿಸುವ ಸಂಶಯವಿದ್ದು, ತಾವು ಜಿಲ್ಲೆಯದ್ಯಂತ ತಕ್ಷಣ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಿ ಪ್ರಚೋದನೆ ನೀಡುವವರನ್ನು, ಸಮಾಜ ಘಾತುಕರನ್ನು ಬಂಧಿಸಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ರಕ್ಷಣೆ ಹೆಚ್ಚಿಸಲು ಮನವಿ ಸಲ್ಲಿಸಿದರು. ಈ ಸಾರಿ ಯಾರಾದ್ರೂ ಉದ್ಧಟತನ, ಕಾನೂನು ಸುವ್ಯವಸ್ಥೆ ಕೈಗೆತ್ತಿಕೊಂಡು ಸಾರ್ವಜನಿಕ ಶಾಂತಿ ಭಂಗ, ದೇವಸ್ಥಾನ, ಮಠ ಮಂದಿರ ಮೇಲೆ ದಾಳಿ ಮುಂತಾದ ಅಹಿತಕರ ಘಟನೆ ಜರುಗದಂತೆ ತಾವು ಜಿಲ್ಲೆಯದ್ಯಾಂತ ಸೂಕ್ತ ರಕ್ಷಣಾ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ, ಆಸ್ತಿಪಾಸ್ತಿಗೆ,ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು ಎಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ಹೇಳಿದರು.

ಇದೆ ವೇಳೆ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಜಾನೆಕೆರೆ ಹೇಮಂತ್, ಗೌರವಾಧ್ಯಕ್ಷ ಕುಮಾರ್ ಯಡಿಯೂರ್, ಕಾರ್ಯಾಧ್ಯಕ್ಷರು ಮಹೇಶ್ ಕುಮಾರ್, ದುರ್ಗಾಸೇನೆ ಮಹಿಳಾ ಅಧ್ಯಕ್ಷೆ ನಾಗವೇಣಿ, ತಾಲೂಕ ಅಧ್ಯಕ್ಷ ಉಮೇಶ್ ಸಕಲೇಶಪುರ, ಜಿಲ್ಲಾ ಉಪಾಧ್ಯಕ್ಷರು ಪುನೀತ್, ಕಾರ್ಯದರ್ಶಿ ಮನು ಜಗತ್, ತಾಲೂಕ ಅಧ್ಯಕ್ಷರು ಪ್ರದೀಪ್ ಹಾಸನ್, ಅರಕಲಗೂಡು ತಾಲೂಕು ಅಧ್ಯಕ್ಷ ಅಮಿತ್ ಅರಕಲಗೂಡು, ಹೊಳೆನರಸೀಪುರ ತಾಲೂಕು ಅಧ್ಯಕ್ಷ ಪ್ರಕಾಶ್, ಅರಸೀಕೆರೆ ತಾಲೂಕು ಅಧ್ಯಕ್ಷ ವರುಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಮುಗುಳುರ್, ಜಿಲ್ಲಾ ಉಪಾಧ್ಯಕ್ಷರು ಪುನೀತ್ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!