ಜನ ಮನದ ನಾಡಿ ಮಿಡಿತ

Advertisement

ವಕ್ಫ್ ತಿದ್ದುಪಡಿ, ಕಾನೂನು ಸುವ್ಯವಸ್ಥೆಗೆ ಮುಂಜಾಗೃತೆವಹಿಸಿ ; ಶ್ರೀರಾಮಸೇನೆಯಿಂದ ಎಸ್ಪಿಗೆ ಮನವಿ

ಹಾಸನ: ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಏನಾದರೂ ಸ್ವೀಕಾರಗೊಂಡರೆ ಮುಂದೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಬಹುದು, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಮುಂಜಾಗೃತೆವಹಿಸುವಂತೆ ಆಗ್ರಹಿಸಿ ಶ್ರೀರಾಮಸೇನೆಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಸಲ್ಲಿಸಿದರು.

ಇದೆ ವೇಳೆ ಶ್ರೀರಾಮಸೇನೆ ಬೆಂಗಳೂರು ಮಹಾನಗರ ಪ್ರಧಾನ ಕಾರ್ಯದರ್ಶಿ ಸುಂದರೇಶ್ ಮತ್ತು ಜಿಲ್ಲಾಧ್ಯಕ್ಷ ಹೇಮಂತ್ ಜಾನೆಕೆರೆ ಮಾಧ್ಯಮದೊಂದಿಗೆ ಮಾತನಾಡಿ, ಇಡೀ ದೇಶದಲ್ಲಿ ವಕ್ಫ್ ಬೋರ್ಡ್ ತಿದ್ದುಪಡಿಯ ಬಗ್ಗೆ ಪರ, ವಿರೋಧ ಚರ್ಚೆ ಕಾವೇರುತ್ತಿದೆ. ಕೆಲವು ಮೌಲ್ವಿಗಳು ತಿದ್ದುಪಡಿ ಆದ್ರೆ ದೇಶದಲ್ಲಿ ರಕ್ತಪಾತ ಆಗುತ್ತೆ ಅನ್ನೋ ಹೇಳಿಕೆ ಕೊಡುತ್ತಿದ್ದಾರೆ ಎಂದು ದೂರಿದರು. ಇದು ಗಲಭೆಗೆ ಪ್ರಚೋದನೆ ನೀಡುವ ಮುನ್ಸೂಚನೆ. ಹಿಂದೆಯೂ ಸಿಎಎ ಮತ್ತು ಎನ್.ಆರ್.ಸಿ. ಕೃಷಿ ಮಸೂದೆ ಮಂಡನೆಯದಾಗ ಇಂತಹ ಪ್ರಚೋದನೆಕಾರಿ ಹೇಳಿಕೆಗಳೇ ಗಲಭೆಗೆ ಕಾರಣವಾಗಿದ್ದವು. ಈಗಲೂ ಅದೇ ವಾತಾವರಣ ಸೃಷ್ಟಿಸುವ ಸಂಶಯವಿದ್ದು, ತಾವು ಜಿಲ್ಲೆಯದ್ಯಂತ ತಕ್ಷಣ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಿ ಪ್ರಚೋದನೆ ನೀಡುವವರನ್ನು, ಸಮಾಜ ಘಾತುಕರನ್ನು ಬಂಧಿಸಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ರಕ್ಷಣೆ ಹೆಚ್ಚಿಸಲು ಮನವಿ ಸಲ್ಲಿಸಿದರು. ಈ ಸಾರಿ ಯಾರಾದ್ರೂ ಉದ್ಧಟತನ, ಕಾನೂನು ಸುವ್ಯವಸ್ಥೆ ಕೈಗೆತ್ತಿಕೊಂಡು ಸಾರ್ವಜನಿಕ ಶಾಂತಿ ಭಂಗ, ದೇವಸ್ಥಾನ, ಮಠ ಮಂದಿರ ಮೇಲೆ ದಾಳಿ ಮುಂತಾದ ಅಹಿತಕರ ಘಟನೆ ಜರುಗದಂತೆ ತಾವು ಜಿಲ್ಲೆಯದ್ಯಾಂತ ಸೂಕ್ತ ರಕ್ಷಣಾ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ, ಆಸ್ತಿಪಾಸ್ತಿಗೆ,ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು ಎಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ಹೇಳಿದರು.

ಇದೆ ವೇಳೆ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಜಾನೆಕೆರೆ ಹೇಮಂತ್, ಗೌರವಾಧ್ಯಕ್ಷ ಕುಮಾರ್ ಯಡಿಯೂರ್, ಕಾರ್ಯಾಧ್ಯಕ್ಷರು ಮಹೇಶ್ ಕುಮಾರ್, ದುರ್ಗಾಸೇನೆ ಮಹಿಳಾ ಅಧ್ಯಕ್ಷೆ ನಾಗವೇಣಿ, ತಾಲೂಕ ಅಧ್ಯಕ್ಷ ಉಮೇಶ್ ಸಕಲೇಶಪುರ, ಜಿಲ್ಲಾ ಉಪಾಧ್ಯಕ್ಷರು ಪುನೀತ್, ಕಾರ್ಯದರ್ಶಿ ಮನು ಜಗತ್, ತಾಲೂಕ ಅಧ್ಯಕ್ಷರು ಪ್ರದೀಪ್ ಹಾಸನ್, ಅರಕಲಗೂಡು ತಾಲೂಕು ಅಧ್ಯಕ್ಷ ಅಮಿತ್ ಅರಕಲಗೂಡು, ಹೊಳೆನರಸೀಪುರ ತಾಲೂಕು ಅಧ್ಯಕ್ಷ ಪ್ರಕಾಶ್, ಅರಸೀಕೆರೆ ತಾಲೂಕು ಅಧ್ಯಕ್ಷ ವರುಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಮುಗುಳುರ್, ಜಿಲ್ಲಾ ಉಪಾಧ್ಯಕ್ಷರು ಪುನೀತ್ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!