ಹಾಸನ: ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಏನಾದರೂ ಸ್ವೀಕಾರಗೊಂಡರೆ ಮುಂದೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಬಹುದು, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಮುಂಜಾಗೃತೆವಹಿಸುವಂತೆ ಆಗ್ರಹಿಸಿ ಶ್ರೀರಾಮಸೇನೆಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಸಲ್ಲಿಸಿದರು.
ಇದೆ ವೇಳೆ ಶ್ರೀರಾಮಸೇನೆ ಬೆಂಗಳೂರು ಮಹಾನಗರ ಪ್ರಧಾನ ಕಾರ್ಯದರ್ಶಿ ಸುಂದರೇಶ್ ಮತ್ತು ಜಿಲ್ಲಾಧ್ಯಕ್ಷ ಹೇಮಂತ್ ಜಾನೆಕೆರೆ ಮಾಧ್ಯಮದೊಂದಿಗೆ ಮಾತನಾಡಿ, ಇಡೀ ದೇಶದಲ್ಲಿ ವಕ್ಫ್ ಬೋರ್ಡ್ ತಿದ್ದುಪಡಿಯ ಬಗ್ಗೆ ಪರ, ವಿರೋಧ ಚರ್ಚೆ ಕಾವೇರುತ್ತಿದೆ. ಕೆಲವು ಮೌಲ್ವಿಗಳು ತಿದ್ದುಪಡಿ ಆದ್ರೆ ದೇಶದಲ್ಲಿ ರಕ್ತಪಾತ ಆಗುತ್ತೆ ಅನ್ನೋ ಹೇಳಿಕೆ ಕೊಡುತ್ತಿದ್ದಾರೆ ಎಂದು ದೂರಿದರು. ಇದು ಗಲಭೆಗೆ ಪ್ರಚೋದನೆ ನೀಡುವ ಮುನ್ಸೂಚನೆ. ಹಿಂದೆಯೂ ಸಿಎಎ ಮತ್ತು ಎನ್.ಆರ್.ಸಿ. ಕೃಷಿ ಮಸೂದೆ ಮಂಡನೆಯದಾಗ ಇಂತಹ ಪ್ರಚೋದನೆಕಾರಿ ಹೇಳಿಕೆಗಳೇ ಗಲಭೆಗೆ ಕಾರಣವಾಗಿದ್ದವು. ಈಗಲೂ ಅದೇ ವಾತಾವರಣ ಸೃಷ್ಟಿಸುವ ಸಂಶಯವಿದ್ದು, ತಾವು ಜಿಲ್ಲೆಯದ್ಯಂತ ತಕ್ಷಣ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಿ ಪ್ರಚೋದನೆ ನೀಡುವವರನ್ನು, ಸಮಾಜ ಘಾತುಕರನ್ನು ಬಂಧಿಸಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ರಕ್ಷಣೆ ಹೆಚ್ಚಿಸಲು ಮನವಿ ಸಲ್ಲಿಸಿದರು. ಈ ಸಾರಿ ಯಾರಾದ್ರೂ ಉದ್ಧಟತನ, ಕಾನೂನು ಸುವ್ಯವಸ್ಥೆ ಕೈಗೆತ್ತಿಕೊಂಡು ಸಾರ್ವಜನಿಕ ಶಾಂತಿ ಭಂಗ, ದೇವಸ್ಥಾನ, ಮಠ ಮಂದಿರ ಮೇಲೆ ದಾಳಿ ಮುಂತಾದ ಅಹಿತಕರ ಘಟನೆ ಜರುಗದಂತೆ ತಾವು ಜಿಲ್ಲೆಯದ್ಯಾಂತ ಸೂಕ್ತ ರಕ್ಷಣಾ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ, ಆಸ್ತಿಪಾಸ್ತಿಗೆ,ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು ಎಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ಹೇಳಿದರು.
ಇದೆ ವೇಳೆ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಜಾನೆಕೆರೆ ಹೇಮಂತ್, ಗೌರವಾಧ್ಯಕ್ಷ ಕುಮಾರ್ ಯಡಿಯೂರ್, ಕಾರ್ಯಾಧ್ಯಕ್ಷರು ಮಹೇಶ್ ಕುಮಾರ್, ದುರ್ಗಾಸೇನೆ ಮಹಿಳಾ ಅಧ್ಯಕ್ಷೆ ನಾಗವೇಣಿ, ತಾಲೂಕ ಅಧ್ಯಕ್ಷ ಉಮೇಶ್ ಸಕಲೇಶಪುರ, ಜಿಲ್ಲಾ ಉಪಾಧ್ಯಕ್ಷರು ಪುನೀತ್, ಕಾರ್ಯದರ್ಶಿ ಮನು ಜಗತ್, ತಾಲೂಕ ಅಧ್ಯಕ್ಷರು ಪ್ರದೀಪ್ ಹಾಸನ್, ಅರಕಲಗೂಡು ತಾಲೂಕು ಅಧ್ಯಕ್ಷ ಅಮಿತ್ ಅರಕಲಗೂಡು, ಹೊಳೆನರಸೀಪುರ ತಾಲೂಕು ಅಧ್ಯಕ್ಷ ಪ್ರಕಾಶ್, ಅರಸೀಕೆರೆ ತಾಲೂಕು ಅಧ್ಯಕ್ಷ ವರುಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಮುಗುಳುರ್, ಜಿಲ್ಲಾ ಉಪಾಧ್ಯಕ್ಷರು ಪುನೀತ್ ಇತರರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…