ಹಾಸನ: ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಏನಾದರೂ ಸ್ವೀಕಾರಗೊಂಡರೆ ಮುಂದೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಬಹುದು, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಮುಂಜಾಗೃತೆವಹಿಸುವಂತೆ ಆಗ್ರಹಿಸಿ ಶ್ರೀರಾಮಸೇನೆಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಸಲ್ಲಿಸಿದರು.
ಇದೆ ವೇಳೆ ಶ್ರೀರಾಮಸೇನೆ ಬೆಂಗಳೂರು ಮಹಾನಗರ ಪ್ರಧಾನ ಕಾರ್ಯದರ್ಶಿ ಸುಂದರೇಶ್ ಮತ್ತು ಜಿಲ್ಲಾಧ್ಯಕ್ಷ ಹೇಮಂತ್ ಜಾನೆಕೆರೆ ಮಾಧ್ಯಮದೊಂದಿಗೆ ಮಾತನಾಡಿ, ಇಡೀ ದೇಶದಲ್ಲಿ ವಕ್ಫ್ ಬೋರ್ಡ್ ತಿದ್ದುಪಡಿಯ ಬಗ್ಗೆ ಪರ, ವಿರೋಧ ಚರ್ಚೆ ಕಾವೇರುತ್ತಿದೆ. ಕೆಲವು ಮೌಲ್ವಿಗಳು ತಿದ್ದುಪಡಿ ಆದ್ರೆ ದೇಶದಲ್ಲಿ ರಕ್ತಪಾತ ಆಗುತ್ತೆ ಅನ್ನೋ ಹೇಳಿಕೆ ಕೊಡುತ್ತಿದ್ದಾರೆ ಎಂದು ದೂರಿದರು. ಇದು ಗಲಭೆಗೆ ಪ್ರಚೋದನೆ ನೀಡುವ ಮುನ್ಸೂಚನೆ. ಹಿಂದೆಯೂ ಸಿಎಎ ಮತ್ತು ಎನ್.ಆರ್.ಸಿ. ಕೃಷಿ ಮಸೂದೆ ಮಂಡನೆಯದಾಗ ಇಂತಹ ಪ್ರಚೋದನೆಕಾರಿ ಹೇಳಿಕೆಗಳೇ ಗಲಭೆಗೆ ಕಾರಣವಾಗಿದ್ದವು. ಈಗಲೂ ಅದೇ ವಾತಾವರಣ ಸೃಷ್ಟಿಸುವ ಸಂಶಯವಿದ್ದು, ತಾವು ಜಿಲ್ಲೆಯದ್ಯಂತ ತಕ್ಷಣ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಿ ಪ್ರಚೋದನೆ ನೀಡುವವರನ್ನು, ಸಮಾಜ ಘಾತುಕರನ್ನು ಬಂಧಿಸಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ರಕ್ಷಣೆ ಹೆಚ್ಚಿಸಲು ಮನವಿ ಸಲ್ಲಿಸಿದರು. ಈ ಸಾರಿ ಯಾರಾದ್ರೂ ಉದ್ಧಟತನ, ಕಾನೂನು ಸುವ್ಯವಸ್ಥೆ ಕೈಗೆತ್ತಿಕೊಂಡು ಸಾರ್ವಜನಿಕ ಶಾಂತಿ ಭಂಗ, ದೇವಸ್ಥಾನ, ಮಠ ಮಂದಿರ ಮೇಲೆ ದಾಳಿ ಮುಂತಾದ ಅಹಿತಕರ ಘಟನೆ ಜರುಗದಂತೆ ತಾವು ಜಿಲ್ಲೆಯದ್ಯಾಂತ ಸೂಕ್ತ ರಕ್ಷಣಾ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ, ಆಸ್ತಿಪಾಸ್ತಿಗೆ,ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು ಎಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ಹೇಳಿದರು.
ಇದೆ ವೇಳೆ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಜಾನೆಕೆರೆ ಹೇಮಂತ್, ಗೌರವಾಧ್ಯಕ್ಷ ಕುಮಾರ್ ಯಡಿಯೂರ್, ಕಾರ್ಯಾಧ್ಯಕ್ಷರು ಮಹೇಶ್ ಕುಮಾರ್, ದುರ್ಗಾಸೇನೆ ಮಹಿಳಾ ಅಧ್ಯಕ್ಷೆ ನಾಗವೇಣಿ, ತಾಲೂಕ ಅಧ್ಯಕ್ಷ ಉಮೇಶ್ ಸಕಲೇಶಪುರ, ಜಿಲ್ಲಾ ಉಪಾಧ್ಯಕ್ಷರು ಪುನೀತ್, ಕಾರ್ಯದರ್ಶಿ ಮನು ಜಗತ್, ತಾಲೂಕ ಅಧ್ಯಕ್ಷರು ಪ್ರದೀಪ್ ಹಾಸನ್, ಅರಕಲಗೂಡು ತಾಲೂಕು ಅಧ್ಯಕ್ಷ ಅಮಿತ್ ಅರಕಲಗೂಡು, ಹೊಳೆನರಸೀಪುರ ತಾಲೂಕು ಅಧ್ಯಕ್ಷ ಪ್ರಕಾಶ್, ಅರಸೀಕೆರೆ ತಾಲೂಕು ಅಧ್ಯಕ್ಷ ವರುಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಮುಗುಳುರ್, ಜಿಲ್ಲಾ ಉಪಾಧ್ಯಕ್ಷರು ಪುನೀತ್ ಇತರರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…