ಜನ ಮನದ ನಾಡಿ ಮಿಡಿತ

Advertisement

ಮೊಡಂಕಾಪು ನಲ್ಲಿ ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಹಾಗೂ ಹೆಣ್ಣು ಮಕ್ಕಳ ದೌರ್ಜನ್ಯ ತಡೆಯುವ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ – ಬಂಟ್ವಾಳ ಉಪವಿಭಾಗ ದ ಆಶ್ರಯದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆ , ರೋಟರಿ ಕ್ಲಬ್ ಮೊಡಂಕಾಪು, ನಮ್ಮ ನಾಡ ಒಕ್ಕೂಟ(ರಿ) ಬಂಟ್ವಾಳ ಘಟಕ ಮತ್ತು ಕಾರ್ಮೆಲ್ ಕಾಲೇಜು ಮೊಡಂಕಾಪು ಇವರ ಸಹಯೋಗದೊಂದಿಗೆ  ಕಾರ್ಮೆಲ್ ಕಾಲೇಜು ಮೊಡಂಕಾಪು ನಲ್ಲಿ ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಹಾಗೂ ಹೆಣ್ಣು ಮಕ್ಕಳ ದೌರ್ಜನ್ಯ ತಡೆಯುವ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ನಡೆದಿರುತ್ತದೆ.


ಕಾರ್ಯಕ್ರಮದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಎಸ್ ವಿಜಯ ಪ್ರಸಾದ್ ರವರು ಸೈಬರ್ ಅಪರಾಧಗಳು, ಮಾದಕ ದ್ರವ್ಯದ ಪರಿಣಾಮಗಳು, ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟಿರುತ್ತಾರೆ. ಈ ಕಾರ್ಯಕ್ರಮದಲ್ಲಿ ರೋಟರಿ ಮೊಡಂಕಾಪು ಅಧ್ಯಕ್ಷರಾದ ಶ್ರೀ. ಕ್ಯಾಪ್ಟನ್ ಅಲೆಕ್ಸಾಂಡರ್, ರೋಟರಿ ಗವರ್ನರ್ ರೋ| ಡಾ. ಗೋವರ್ಧನ್, ನಮ್ಮ ನಾಡ ಒಕ್ಕೂಟದ ಅಧ್ಯಕ್ಷರಾದ ಶ್ರೀ ರಹೀಂ , ನಮ್ಮ ನಾಡ ಒಕ್ಕೂಟದ ಉಪಾಧ್ಯಕ್ಷರಾದ ಶ್ರೀ ಇಬ್ರಾಹಿಂರವರು ಹಾಜರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಬಗಿನಿ ನವೀನ ಎ.ಸಿ. ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ,ಸಂಸ್ಥೆಯ ಉಪನ್ಯಾಸಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!