ಬಂಟ್ವಾಳ : ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.
ಸರಪಾಡಿ ಎಕ್ಕುಡೇಲು ನಿವಾಸಿ ಗಿರಿಯಪ್ಪ ( 51) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಸ್ವತಃ ಕೃಷಿಕರಾಗಿರುವ ಇವರು ನ.3 ರಂದು ಅವರ ತೋಟದ ತೆಂಗಿನ ಮರದಿಂದ ಕಾಯಿ ಕೀಳಲು ಮರಕ್ಕೆ ಹತ್ತಿದ್ದರು. ಆದರೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಸುಮಾರು 24 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇಂದು ಬೆಳಿಗ್ಗೆ ಚಿಕಿತ್ಸೆ ಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ ಹಾಗೂ ಮೂರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಅಂಗಾಂಗ ದಾನ
ಗಂಭೀರವಾಗಿ ಗಾಯಗೊಂಡಿದ್ದ ಗಿರಿಯಪ್ಪ ಅವರನ್ನು ಬದುಕಿಸಲು ವೈದ್ಯಕೀಯ ತಂಡ ಪ್ರಯತ್ನ ಮಾಡಿದೆಯಾದರೂ ಪ್ರಯತ್ನ ಫಲಿಸಲಿಲ್ಲ. ಹಾಗಾಗಿ ಕೊನೆಗಳಿಗೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದ ಗಿರಿಯಪ್ಪ ಅವರ ಅಂಗಾಂಗ ದಾನಕ್ಕೆ ಮುಂದಾದರು. ಗಿರಿಯಪ್ಪ ಅವರ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…