ಜನ ಮನದ ನಾಡಿ ಮಿಡಿತ

Advertisement

ಕತ್ತು ಹಿಸುಕಿ ಲಿವ್ ಇನ್ ಸಂಗಾತಿಯ ಬರ್ಬರ ಹತ್ಯೆ..! ಕಾಡಿನಲ್ಲಿ 40 ತುಂಡುಗಳಾಗಿ ಬಿದ್ದಿದ್ದ ಯುವತಿಯ ದೇಹ

ಜೊತೆಯಲ್ಲಿ ವಾಸಿಸುತ್ತಿದ್ದ ಸಂಗಾತಿಯನ್ನು ಬರ್ಬರವಾಗಿ ಕೊಂದ ಘಟನೆ ಜಾರ್ಕಂಡ್ ನಲ್ಲಿ ನಡೆದಿದೆ. ಕೊಂದ ಬಳಿಕ 40ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದಿದ್ದು, ದೆಹಲಿಯ ಶ್ರದ್ಧಾ ವಾಕರ್ ನ ಹತ್ಯೆಯನ್ನು ಹೋಲಿಸುವ ಇನ್ನೊಂದು ಕೃತ್ಯಕ್ಕೆ ಆರೋಪಿ ನರೇಶ್ ಭೇಂಗ್ರ ಕಾರಣನಾಗಿದ್ದಾನೆ.


ನರೇಶ್ ಮತ್ತು ಹತ್ಯೆಯಾದ ಗಂಗಿ ಮೂಲತಃ ಝಾರ್ಖಂಡ್ ನಿವಾಸಿಗಳಾಗಿದ್ದು, ಎರಡು ವರ್ಷಗಳಿಂದ ತಮಿಳುನಾಡಿನಲ್ಲಿ ವಾಸವಾಗಿದ್ದರು. ನರೇಶ್ ಈ ನಡುವೆ ಝಾರ್ಖಂಡ್ ನಲ್ಲಿ ಮದುವೆಯಾಗಿದ್ದು, ಪತ್ನಿಯನ್ನು ಊರಿನಲ್ಲಿ ಬಿಟ್ಟು ಬಂದು ಗಂಗಿಯೊಂದಿಗೆ ವಾಸವಾಗಿದ್ದ. ಎರಡು ವಾರಗಳ ಹಿಂದೆ ಇಬ್ಬರು ಊರಿಗೆ ಮರಳಿದ್ದಾರೆ. ಈ ವೇಳೆ ಗಂಗಿ ಆತನ ಮನೆಗೆ ಕರೆದುಕೊಂಡು ಹೋಗಲು ಒತ್ತಾಯಿಸಿದ್ದಾಳೆ. ತನ್ನ ಮದುವೆಯ ವಿಷಯ ತಿಳಿಯುವ ಭಯದಲ್ಲಿ ನರೇಶ್ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಂಡಿದ್ದಾನೆ. ನರೇಶ್ ಮಾಂಸದಂಗಡಿಯಲ್ಲಿ ಕೆಲಸ ಮಾಡುತ್ತಿದ್ದರಿಂದ ತನ್ನ ಕೌಶಲ್ಯ ಬಳಸಿ ಮಹಿಳೆಯ ದೇಹವನ್ನು 40ಕ್ಕೂ ಹೆಚ್ಚು ಭಾಗಗಳಾಗಿ ಕತ್ತರಿಸಿದ್ದಾನೆ.
ಘಟನೆ ನಡೆದು ಎರಡು ವಾರಗಳು ಕಳೆದಿದ್ದು, ನ. 24ರಂದು ನಾಯಿಯೊಂದು ದೇಹದ ಭಾಗವನ್ನು ಕಚ್ಚಿಕೊಂಡು ಬಂದಿರುವುದು ಗ್ರಾಮಸ್ಥರ ಗಮನಕ್ಕೆ ಬಂದಿದೆ. ಈ ವೇಳೆ ಪೊಲೀಸರು ಶೋಧಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಖುಂಟಿ ಪೊಲೀಸ್ ವರಿಷ್ಟಾಧಿಕಾರಿ ಅಮನ್ ಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!