ಜೊತೆಯಲ್ಲಿ ವಾಸಿಸುತ್ತಿದ್ದ ಸಂಗಾತಿಯನ್ನು ಬರ್ಬರವಾಗಿ ಕೊಂದ ಘಟನೆ ಜಾರ್ಕಂಡ್ ನಲ್ಲಿ ನಡೆದಿದೆ. ಕೊಂದ ಬಳಿಕ 40ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದಿದ್ದು, ದೆಹಲಿಯ ಶ್ರದ್ಧಾ ವಾಕರ್ ನ ಹತ್ಯೆಯನ್ನು ಹೋಲಿಸುವ ಇನ್ನೊಂದು ಕೃತ್ಯಕ್ಕೆ ಆರೋಪಿ ನರೇಶ್ ಭೇಂಗ್ರ ಕಾರಣನಾಗಿದ್ದಾನೆ.
ನರೇಶ್ ಮತ್ತು ಹತ್ಯೆಯಾದ ಗಂಗಿ ಮೂಲತಃ ಝಾರ್ಖಂಡ್ ನಿವಾಸಿಗಳಾಗಿದ್ದು, ಎರಡು ವರ್ಷಗಳಿಂದ ತಮಿಳುನಾಡಿನಲ್ಲಿ ವಾಸವಾಗಿದ್ದರು. ನರೇಶ್ ಈ ನಡುವೆ ಝಾರ್ಖಂಡ್ ನಲ್ಲಿ ಮದುವೆಯಾಗಿದ್ದು, ಪತ್ನಿಯನ್ನು ಊರಿನಲ್ಲಿ ಬಿಟ್ಟು ಬಂದು ಗಂಗಿಯೊಂದಿಗೆ ವಾಸವಾಗಿದ್ದ. ಎರಡು ವಾರಗಳ ಹಿಂದೆ ಇಬ್ಬರು ಊರಿಗೆ ಮರಳಿದ್ದಾರೆ. ಈ ವೇಳೆ ಗಂಗಿ ಆತನ ಮನೆಗೆ ಕರೆದುಕೊಂಡು ಹೋಗಲು ಒತ್ತಾಯಿಸಿದ್ದಾಳೆ. ತನ್ನ ಮದುವೆಯ ವಿಷಯ ತಿಳಿಯುವ ಭಯದಲ್ಲಿ ನರೇಶ್ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಂಡಿದ್ದಾನೆ. ನರೇಶ್ ಮಾಂಸದಂಗಡಿಯಲ್ಲಿ ಕೆಲಸ ಮಾಡುತ್ತಿದ್ದರಿಂದ ತನ್ನ ಕೌಶಲ್ಯ ಬಳಸಿ ಮಹಿಳೆಯ ದೇಹವನ್ನು 40ಕ್ಕೂ ಹೆಚ್ಚು ಭಾಗಗಳಾಗಿ ಕತ್ತರಿಸಿದ್ದಾನೆ.
ಘಟನೆ ನಡೆದು ಎರಡು ವಾರಗಳು ಕಳೆದಿದ್ದು, ನ. 24ರಂದು ನಾಯಿಯೊಂದು ದೇಹದ ಭಾಗವನ್ನು ಕಚ್ಚಿಕೊಂಡು ಬಂದಿರುವುದು ಗ್ರಾಮಸ್ಥರ ಗಮನಕ್ಕೆ ಬಂದಿದೆ. ಈ ವೇಳೆ ಪೊಲೀಸರು ಶೋಧಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಖುಂಟಿ ಪೊಲೀಸ್ ವರಿಷ್ಟಾಧಿಕಾರಿ ಅಮನ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…