ಜೊತೆಯಲ್ಲಿ ವಾಸಿಸುತ್ತಿದ್ದ ಸಂಗಾತಿಯನ್ನು ಬರ್ಬರವಾಗಿ ಕೊಂದ ಘಟನೆ ಜಾರ್ಕಂಡ್ ನಲ್ಲಿ ನಡೆದಿದೆ. ಕೊಂದ ಬಳಿಕ 40ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದಿದ್ದು, ದೆಹಲಿಯ ಶ್ರದ್ಧಾ ವಾಕರ್ ನ ಹತ್ಯೆಯನ್ನು ಹೋಲಿಸುವ ಇನ್ನೊಂದು ಕೃತ್ಯಕ್ಕೆ ಆರೋಪಿ ನರೇಶ್ ಭೇಂಗ್ರ ಕಾರಣನಾಗಿದ್ದಾನೆ.
ನರೇಶ್ ಮತ್ತು ಹತ್ಯೆಯಾದ ಗಂಗಿ ಮೂಲತಃ ಝಾರ್ಖಂಡ್ ನಿವಾಸಿಗಳಾಗಿದ್ದು, ಎರಡು ವರ್ಷಗಳಿಂದ ತಮಿಳುನಾಡಿನಲ್ಲಿ ವಾಸವಾಗಿದ್ದರು. ನರೇಶ್ ಈ ನಡುವೆ ಝಾರ್ಖಂಡ್ ನಲ್ಲಿ ಮದುವೆಯಾಗಿದ್ದು, ಪತ್ನಿಯನ್ನು ಊರಿನಲ್ಲಿ ಬಿಟ್ಟು ಬಂದು ಗಂಗಿಯೊಂದಿಗೆ ವಾಸವಾಗಿದ್ದ. ಎರಡು ವಾರಗಳ ಹಿಂದೆ ಇಬ್ಬರು ಊರಿಗೆ ಮರಳಿದ್ದಾರೆ. ಈ ವೇಳೆ ಗಂಗಿ ಆತನ ಮನೆಗೆ ಕರೆದುಕೊಂಡು ಹೋಗಲು ಒತ್ತಾಯಿಸಿದ್ದಾಳೆ. ತನ್ನ ಮದುವೆಯ ವಿಷಯ ತಿಳಿಯುವ ಭಯದಲ್ಲಿ ನರೇಶ್ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಂಡಿದ್ದಾನೆ. ನರೇಶ್ ಮಾಂಸದಂಗಡಿಯಲ್ಲಿ ಕೆಲಸ ಮಾಡುತ್ತಿದ್ದರಿಂದ ತನ್ನ ಕೌಶಲ್ಯ ಬಳಸಿ ಮಹಿಳೆಯ ದೇಹವನ್ನು 40ಕ್ಕೂ ಹೆಚ್ಚು ಭಾಗಗಳಾಗಿ ಕತ್ತರಿಸಿದ್ದಾನೆ.
ಘಟನೆ ನಡೆದು ಎರಡು ವಾರಗಳು ಕಳೆದಿದ್ದು, ನ. 24ರಂದು ನಾಯಿಯೊಂದು ದೇಹದ ಭಾಗವನ್ನು ಕಚ್ಚಿಕೊಂಡು ಬಂದಿರುವುದು ಗ್ರಾಮಸ್ಥರ ಗಮನಕ್ಕೆ ಬಂದಿದೆ. ಈ ವೇಳೆ ಪೊಲೀಸರು ಶೋಧಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಖುಂಟಿ ಪೊಲೀಸ್ ವರಿಷ್ಟಾಧಿಕಾರಿ ಅಮನ್ ಕುಮಾರ್ ತಿಳಿಸಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…