ಜೊತೆಯಲ್ಲಿ ವಾಸಿಸುತ್ತಿದ್ದ ಸಂಗಾತಿಯನ್ನು ಬರ್ಬರವಾಗಿ ಕೊಂದ ಘಟನೆ ಜಾರ್ಕಂಡ್ ನಲ್ಲಿ ನಡೆದಿದೆ. ಕೊಂದ ಬಳಿಕ 40ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದಿದ್ದು, ದೆಹಲಿಯ ಶ್ರದ್ಧಾ ವಾಕರ್ ನ ಹತ್ಯೆಯನ್ನು ಹೋಲಿಸುವ ಇನ್ನೊಂದು ಕೃತ್ಯಕ್ಕೆ ಆರೋಪಿ ನರೇಶ್ ಭೇಂಗ್ರ ಕಾರಣನಾಗಿದ್ದಾನೆ.
ನರೇಶ್ ಮತ್ತು ಹತ್ಯೆಯಾದ ಗಂಗಿ ಮೂಲತಃ ಝಾರ್ಖಂಡ್ ನಿವಾಸಿಗಳಾಗಿದ್ದು, ಎರಡು ವರ್ಷಗಳಿಂದ ತಮಿಳುನಾಡಿನಲ್ಲಿ ವಾಸವಾಗಿದ್ದರು. ನರೇಶ್ ಈ ನಡುವೆ ಝಾರ್ಖಂಡ್ ನಲ್ಲಿ ಮದುವೆಯಾಗಿದ್ದು, ಪತ್ನಿಯನ್ನು ಊರಿನಲ್ಲಿ ಬಿಟ್ಟು ಬಂದು ಗಂಗಿಯೊಂದಿಗೆ ವಾಸವಾಗಿದ್ದ. ಎರಡು ವಾರಗಳ ಹಿಂದೆ ಇಬ್ಬರು ಊರಿಗೆ ಮರಳಿದ್ದಾರೆ. ಈ ವೇಳೆ ಗಂಗಿ ಆತನ ಮನೆಗೆ ಕರೆದುಕೊಂಡು ಹೋಗಲು ಒತ್ತಾಯಿಸಿದ್ದಾಳೆ. ತನ್ನ ಮದುವೆಯ ವಿಷಯ ತಿಳಿಯುವ ಭಯದಲ್ಲಿ ನರೇಶ್ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಂಡಿದ್ದಾನೆ. ನರೇಶ್ ಮಾಂಸದಂಗಡಿಯಲ್ಲಿ ಕೆಲಸ ಮಾಡುತ್ತಿದ್ದರಿಂದ ತನ್ನ ಕೌಶಲ್ಯ ಬಳಸಿ ಮಹಿಳೆಯ ದೇಹವನ್ನು 40ಕ್ಕೂ ಹೆಚ್ಚು ಭಾಗಗಳಾಗಿ ಕತ್ತರಿಸಿದ್ದಾನೆ.
ಘಟನೆ ನಡೆದು ಎರಡು ವಾರಗಳು ಕಳೆದಿದ್ದು, ನ. 24ರಂದು ನಾಯಿಯೊಂದು ದೇಹದ ಭಾಗವನ್ನು ಕಚ್ಚಿಕೊಂಡು ಬಂದಿರುವುದು ಗ್ರಾಮಸ್ಥರ ಗಮನಕ್ಕೆ ಬಂದಿದೆ. ಈ ವೇಳೆ ಪೊಲೀಸರು ಶೋಧಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಖುಂಟಿ ಪೊಲೀಸ್ ವರಿಷ್ಟಾಧಿಕಾರಿ ಅಮನ್ ಕುಮಾರ್ ತಿಳಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…