ಕರಾವಳಿ

ಮೂಡುಬಿದಿರೆ: ಹಲವು-ಹಣ್ಣುಗಳ ಮೇಳಕ್ಕೆ ಚಾಲನೆ

ಮೂಡುಬಿದಿರೆ: ನಿರುದ್ಯೋಗಿಗಳಿಗೆ ಕೃಷಿ ತರಬೇತಿ, ಗೌರವಧನ ನೀಡಿ ಕೃಷಿ ಮಾಡಲು ಭೂಮಿಯನ್ನು ಒದಗಿಸಬೇಕು. ಅದು ದೇಶದ ಆಹಾರ ಮತ್ತು ನಿರುದ್ಯೋಗ ಸಮಸ್ಯೆಗಳಿಗೆ ಪರಿಹಾರವಾಗಲಿದೆ ಎಂದು ಮೂಡುಬಿದಿರೆ ಜೈನ ಮಠದ ಸ್ವಾಮೀಜಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸುಂದರಿ ಆನಂದ ಆಳ್ವ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಹಲಸು-ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿ ನೇತೃತ್ವದಲ್ಲಿ ಕೃಷಿಋಷಿ ಡಾ.ಎಲ್.ಸಿ. ಸೋನ್ಸ್ ಸ್ಮರಣಾರ್ಥ ಹಮ್ಮಿಕೊಳ್ಳಲಾದ ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಮತ್ತು ಕೃಷಿ ಪ್ರದರ್ಶನಗಳ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಸಮೃದ್ಧಿಯನ್ನು ಮೋಹಿನಿ ಅಪ್ಪಾಜಿ ನಾಯ್ಕ್ ಸಭಾಂಗಣದಲ್ಲಿ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಹಲಸು ಹಣ್ಣುಗಳ ರಾಜ, ಬಡವರಿಗೆ ಹಲಸೇ ಕಲ್ಪವೃಕ್ಷ. ಹಲಸಿನ ಖಾದ್ಯಗಳು ತುಳುನಾಡಿನ ವೈಶಿಷ್ಟö್ಯವಾಗಿವೆ. ದೇಶಿ ಹಣ್ಣು ಹಂಪಲು ರುಚಿಕರ ಮಾತ್ರವಲ್ಲ ಆರೋಗ್ಯಕರ. ಸಾತ್ವಿಕ ಆಹಾರಗಳು ಮನಸ್ಸನ್ನು ಪ್ರಫುಲ್ಲಗೊಳಿಸುತ್ತವೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮಾತನಾಡಿ, ನಾವು ಏನೇ ಕೆಲಸ ಮಾಡಿದರೂ, ಸಮಾಜ ಮತ್ತು ಭವಿಷ್ಯದ ದೃಷ್ಟಿಯಿದ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸಾಮಾಜಿಕ ಪರಿಕಲ್ಪನೆಯ ಸಮೃದ್ಧಿಮೇಳವನ್ನು ಹಮ್ಮಿಕೊಳ್ಳಲಾಗಿದೆ. ಡಾ.ಎಲ್.ಸಿ. ಸೋನ್ಸ್ ಅವರ ಹೆಸರು ಚಿರಸ್ಥಾಯಿ ಮಾಡುವುದು ನಮ್ಮೆಲ್ಲರ ಆಶಯ ಎಂದರು. ಡಾ.ಎಲ್.ಸಿಸೋನ್ಸ್ ಅವರ ಪತ್ನಿ ಬೆನಿಟಾ ಸೋನ್ಸ್, ಉದ್ಯಮಿ ಕೆ.ಶ್ರೀಪತಿ ಭಟ್, ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಬ್ಯಾಂಕ್‌ನ ವಿಶೇಷ ಕರ್ತವ್ಯ ಅಧಿಕಾರಿ ಚಂದ್ರಶೇಖರ್ ಎಂ., ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಎಸ್‌ಕೆಡಿಆರ್‌ಡಿಪಿ ನಿರ್ದೇಶಕ ಮಹಾಬಲ ಕುಲಾಲ್, ಧನಕೀರ್ತಿ ಬಲಿಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್.ಸತೀಶ್, ಬ್ರಹ್ಮಾವರ ಕೆವಿಕೆ ಮುಖ್ಯಸ್ಥ ಡಾ.ಬಿ ಧನಂಜಯ, ಹಿರಿಯ ಕೃಷಿ ವಿಜ್ಞಾನಿ ರವಿರಾಜ್ ಶೆಟ್ಟಿ, ಕೃಷಿ ಸಲಹಾ ಸಮಿತಿ ಸದಸ್ಯ ರಾಜವರ್ಮ ಬೈಲಂಗಡಿ, ತುಳುಕೂಟ ಅಧ್ಯಕ್ಷ ಧನಕೀರ್ತಿ ಬಲಿಪ, ಮಂಗಳೂರು ಕೆವಿಕೆ ಮಾಜಿ ಮುಖ್ಯಸ್ಥ ಸುಭಾಶ್ಚಂದ್ರ ಚೌಟ ಉಪಸ್ಥಿತರಿದ್ದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. -ಇಂದು ವಿಚಾರ ಸಂಕಿರಣ, ಸಂವಾದಜುಲೈ 15 ರಂದು 10 ಗಂಟೆಗೆ ಹಣ್ಣು ಮತ್ತು ತರಕಾರಿಗಳ ಮೌಲ್ಯವರ್ಧನೆ ಮತ್ತು ಸಂರಕ್ಷಣೆ ಕುರಿತು ವಿಚಾರ ಸಂಕಿರಣ ನಡೆಯಲಿದ್ದು ಕೊಪ್ಪದ ಪ್ರಗತಿಪರ ಕೃಷಿ ಉತ್ಪನ್ನ ತರಬೇತುದರರಾದ ಸುಮಾ ರಂಗಪ್ಪ ಮಾಹಿತಿ ನೀಡುವರು. 11 ಗಂಟೆಗೆ ಸಖರಾಯಪಟ್ಟಣದ ಹಲಸಿನ ಹಣ್ಣಿನ ಉತ್ಪನ್ನಗಳ ತರಬೇತುದಾರ ಶಿವಣ್ಣ ಹಲಸಿನ ಹಣ್ಣಿನ ಮೌಲವರ್ಧನೆ ಹಾಗೂ ಸಂರಕ್ಷಣೆಯ ವಿಧಾನಗಳ ಕುರಿತು ಉಪನ್ಯಾಸ ನೀಡುವರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…

16 hours ago

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…

16 hours ago

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…

16 hours ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…

16 hours ago

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…

16 hours ago

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

2 days ago