ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನಲ್ಲಿ ಮಿಶ್ರ ಮೀನುಗಾರಿಕೆ ಬಗ್ಗೆ ತರಬೇತಿ

ದಕ್ಷಿಣ ಕನ್ನಡ :ಮಿಶ್ರ ಮೀನುಸಾಕಣೆ ಪದ್ಧತಿಗಳು ಕುರಿತು ತರಬೇತಿ ಕಾರ್ಯಕ್ರಮವು ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ , ಹೈದರಾಬಾದ್ ಇವರ ಸಹಯೋಗದೊಂದಿಗೆ ಮೀನುಗಾರಿಕೆ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ, ಮತ್ತು ವಿಸ್ತರಣಾ ವಿಭಾಗ, ಮೀನುಗಾರಿಕಾ ಮಹಾವಿದ್ಯಾಲಯ, ಮಂಗಳೂರು ಇಲ್ಲಿ ಮಿಶ್ರ ಮೀನುಸಾಕಣೆ ಪದ್ಧತಿಗಳ ಕುರಿತು 3 ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ 26 ರಂದು ಆರಂಭಗೊಂಡಿತು.


ಭಾರತ ದೇಶದಲ್ಲಿ ಮೀನು ಸಂಪನ್ಮೂಲವು ಹೇರಳವಾಗಿದ್ದು, ಮೀನು ಕೃಷಿಕರ ಆರ್ಥಿಕ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮವು ಸಹಕಾರಿಯಾಗಲಿದೆ ಎಂದು ಮುಖ್ಯ ಅತಿಥಿಗಳಾದ ಸಿದ್ಧಯ್ಯ ಡಿ. ಜಂಟಿ ನಿರ್ದೇಶಕರು, ಮೀನುಗಾರಿಕೆ ಇಲಾಖೆ, ಮಂಗಳೂರು ಇವರು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದ ಗೌರವಾನ್ವಿತ ಅತಿಥಿಯಾಗಿ ಡಾ. ಎಸ್. ಎಂ. ಶಿವಪ್ರಕಾಶ್, ವಿಶ್ರಾಂತ ವಿಸ್ತರಣಾ ನಿರ್ದೇಶಕರು, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ಅವರು ಶಿಭಿರಾರ್ಥಿಗಳಿಗೆ ಮೀನಿನ ಮಾರುಕಟ್ಟೆ ವ್ಯವಸ್ಥೆ ಕುರಿತು ಕಿರು ಪರಿಚಯ ನೀಡಿದರು.
ಮೀನುಗಾರಿಕಾ ಮಹಾವಿದ್ಯಾಲಯದ ಡೀನ್ ರವರಾದ ಡಾ. ಹೆಚ್.ಏನ್. ಆಂಜನೇಯಪ್ಪರವರು ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ಹಾಗೂ ಸಂಯೋಜಕರಾದ ಡಾ. ಎಸ್. ಆರ್. ಸೋಮಶೇಖರ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.
ಕಾರ್ಯಕ್ರಮದ ನಿರೂಪಕಿಯಾದ ಶ್ರೀಮತಿ ವಂದನಾ ಕೆ. ಅವರು ಮೀನುಕೃಷಿಕರು ಈ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿಸಿಕೊಂಡರು. ಡಾ. ಅಮೋಘ ಕೆ.ಆರ್. ಅವರು ಧನ್ಯವಾದ ಅರ್ಪಿಸಿದರು. ಈ ಕಾರ್ಯಕ್ರಮವು ನುರಿತ ಮೀನುಗಾರಿಕಾ ಸಂಪನ್ಮೂಲ ವ್ಯಕ್ತಿಗಳು, ಮೂಡುಬಿದಿರೆಯ ದೇವರಾಜ್ ಕೋಟ್ಯಾನ್ ಮತ್ತು ರಾಜೇಶ್ ಕೋಟ್ಯಾನ್ ಇವರ ಸಮಗ್ರ ಕೃಷಿ ಪದ್ಧತಿ ಕ್ಷೇತ್ರ ವೀಕ್ಷಣೆಯನ್ನು ಒಳಗೊಂಡಿದ್ದು ಯಶಸ್ವಿಯಾಗಿ ಮೂರು ದಿನಗಳು ಕಾಲ ಪೂರೈಸಿ 28ರಂದು ಮುಕ್ತಾಯವಾಯಿತು.
ವಂದನಾರ್ಪಣ ಕಾರ್ಯಕ್ರಮದಲ್ಲಿ ಮಹೇಶ್ ಕುಮಾರ್, ಜನರಲ್ ಮ್ಯಾನೇಜರ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ, ಮಂಗಳೂರು, ಡಾ ದೇವಿಪ್ರಸಾದ್, ಅಧ್ಯಕ್ಷರು,ರಾಜ್ಯ ಮೀನು ಕೃಷಿಕರ ಸಂಘ ಹಾಗೂ ಡಾ.ಟಿ.ಜೆ.ರಮೇಶ, ಹಿರಿಯ ವಿಜ್ಞಾನಗಳು, ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇವರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!