ಕರಾವಳಿ

ಕಡಬ ತಾಲೂಕು 4ನೇಯ ಕನ್ನಡ ಸಾಹಿತ್ಯ ಸಮ್ಮೇಳನ

ಕಡಬ: ಕನ್ನಡವೆಂದರೆ ಒಂದು ಬಾಷೆಯಲ್ಲ, ಅದರಲ್ಲಿ ನಮ್ಮ ಮಣ್ಣಿನ ಸಂಸ್ಕೃತಿ ಸಂಸ್ಕಾರ, ಸಂಪ್ರದಾಯ ಸಂರಕ್ಷಣೆ ಎಲ್ಲವೂ ಮಿಳಿತವಾಗಿದೆ. ನಾಡಿನ ಭಾಷೆ ಅರಿಯದೆ , ಉಳಿಸದೆ ಹೋದರೆ ಇವೆಲ್ಲವೂ ನಾಶವಾಗಬಹುದು. ಹಾಗಾಗಿ ಕನ್ನಡವನ್ನು ನಮ್ಮ ಹೃದಯದದ ಬಾಷೆಯನ್ನಾಗಿಸಬೇಕು. ಕನ್ನಡವನ್ನು ಉಳಿಸುವ ಕನ್ನಡ ಸರ್ಕಾರಿ ಶಾಲೆಗಳ ಅಭಿವೃದ್ದಿಯಾಗಬೇಕು ಎಂದು ಪ್ರಗತಿಪರ ಕೃಷಿಕ ಎನ್ ಕರುಣಾಕರ ಗೋಗಟೆ ಹೇಳಿದರು.


ಅವರು ಕಡಬ ತಾಲೂಕು ಕುಂತೂರು ಪದವು ಸಂತ ಜಾರ್ಜ್ ಅನುದಾನಿತ ಕನ್ನಡ ಮಾದ್ಯಮ ಪ್ರೌಢಶಾಲೆಯಲ್ಲಿ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಸಾಹಿತ್ಯ ಪರಿಷತ್ ನ ಕಡಬ ತಾಲೂಕು ಘಟಕದ ವತಿಯಿಂದ ನಡೆದ ೪ ನೇಯ ಕನ್ನಡ ಸಾಹಿತ್ಯ ಸಮ್ಮೇಳನ ದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮ್ಮೇಳನ ಉದ್ಘಾಟನೆಯನ್ನು ನೆರವೇರಸಿದ ಕವಿ ಹಾಗು ಸಾಹಿತಿ ಡಾ.ವಸಂತ ಕುಮಾರ್ ಪೆರ್ಲ ಮಾತನಾಡಿ, ನಮ್ಮ ಮಣ್ಣಿನ ಭಾಷೆ ಕನ್ನಡ ಯಾವಾಗಲೂ ಹೃದಯದ ಭಾಷೆಯಾಗಿರುತ್ತದೆ. ಅದನ್ನು ಪೋಷಿಸುವ ಕೆಲಸವಾಗಬೇಕು. ಕನ್ನಡ ಶಾಲೆಗಳನ್ನು ಬೆಳೆಸಿದಾಗ ಕನ್ನಡ ನಾಡು ನುಡಿ, ಸಾಹಿತ್ಯವನ್ನು ಸಂರಕ್ಷಿಸಿದಂತೆ . ಸರ್ಕಾರ ಬಜೆಟ್‌ನ ಶೇ.೫ ರಷ್ಟು ಭಾಗವನ್ನು ಕನ್ನಡದ ಅಭಿವೃದ್ದಿಗೆ ಮೀಸಲಿಡಬೇಕು ಎಂದರು.
ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ ಸೀತಾರಾಮ ರೈ ಸಮ್ಮೇಳವನ್ನು ದೀಪಪ್ರಜ್ವಲನೆ ಮಾಡಿ ಶುಭಹಾರೈಸಿದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರೆ.ಫಾ.ನಿತಿನ್ ಮ್ಯಾಥ್ಯೂ ಆರ್ಶೀವಚನ ನೀಡಿದರು. ಕಲಾ ಪ್ರದರ್ಶನವನ್ನು ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಕುಂತೂರು ಪದವು ಸಂತ ಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮಾಜಿ ಸಂಚಾಲಕ ರಾಯ್ ಅಬ್ರಹಾಂ ಪುಸ್ತಕ ಪ್ರದರ್ಶನ ಮಳಿಗೆಯನ್ನು ,ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಮಿತಿ ಸದಸ್ಯ ಮಹಮ್ಮದ್ ಕುಂಞÂ ಪ್ರಾಚ್ಯವಸ್ತು ಪ್ರದರ್ಶನ ಮಳಿಗೆಯನ್ನು , ಸ್ವಾಗತ ಸಮಿತಿ ಅಧ್ಯಕ್ಷ ಗುರುರಾಜ್ ರೈ ವಿಜ್ಣಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು. ಕೆ ಎಂ ಎಫ್ ಅಧ್ಯಕ್ಷ ಕೆ ಪಿ ಸುಚರಿತ ಶೆಟ್ಟಿ ಸ್ಮರಣ ಸಂಚಿಕೆ ಬಿಡುಗಡೆಗಳಿಸಿದರು. ಕ.ಸಾ.ಪ ಜಿಲ್ಲಾಧ್ಯಕ್ಷ ಡಾ. ಎಂ ಪಿ ಶ್ರೀನಾಥ ಆಶಯ ನುಡಿಗಳ್ಳನ್ನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಆಶಾತಿಮ್ಮಪ್ಪ ಗೌಡ, ಸಮ್ಮೇಳನದ ಆರ್ಥಿಕ ಸಮಿತಿ ಸಂಚಾಲಕ ವಿ ಐ ಅಬ್ರಾಹಂ, ಕ.ಸಾ.ಪ ಕಡಬ ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡ, ಗೌರವ ಕಾರ್ಯದರ್ಶಿ ನಾಗರಾಜ್ ಎನ್ ಕೆ , ಆಲಂಕಾರು ಗ್ರಾ.ಪಂ ಅಧ್ಯಕ್ಷೆ ಸುಶೀಲ, ಕÊೊಲ ಗ್ರಾ.ಪಂ ಅಧ್ಯಕ್ಷೆ ಪುಷ್ಪಾಸುಭಾಶ್ ಶೆಟ್ಟಿ, ರಾಮಕುಂಜ ಗ್ರಾ.ಪಂ ಅಧ್ಯಕ್ಷೆ ಸುಚೇತಾ, ಸಿ ಆರ್ ಪಿ ಮಹೇಶ್ , ನಿಕಪೂರ್ವ ಸಮ್ಮೇಳನಾಧ್ಯಕ್ಷ ಗಣರಾಜ ಕುಂಬ್ಲೆ ಮೊದಲಾದವರು ಕುಂತೂರು ಪದವು ಸಂತ ಜಾರ್ಜ್ ಅನುದಾನಿತ ಕನ್ನಡ ಮಾದ್ಯಮ ಪ್ರೌಢಶಾಲಾ ಮುಖ್ಯ ಶಿಕ್ಷಕ ಹರಿಶ್ಚಂದ್ರ ಕೆ ಸ್ವಾಗತಿಸಿದರು. ಬಾಲಚಂದ್ರ ಮುಚ್ಚಿಂತಾಯ ವಂದಿಸಿದರು. ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಚಂದ್ರಶೇಖರ ಕೆದ್ದೋಟೆ , ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲಾ ಶಿಕ್ಷಕಿ ಸರಿತಾಜನಾರ್ದನ , ರಾಷ್ಟ್ರ ಪ್ರಶಸ್ತಿ ಪುಸ್ಕೃತ ನಿವೃತ್ತ ಶಿಕ್ಷಕ ಟಿ.ನಾರಾಯಣ ಭಟ್, ಕೊಂಡಾಡಿಕೊಪ್ಪ ಸರ್ಕಾರಿ ಶಾಲಾಶಿಕ್ಷಕ ಜಯಂತ ವೈ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.
ಬಳಿಕ ವಿವಿಧ ವಿಚಾರಗೋಷ್ಟಿ, ಕೃತಿ ಬಿಡುಗಡೆ, ಸಾಂಸ್ಕೃತಿಕ ಕಾರ್ಯಕ್ರಮ , ಕವಿ ಗೋಷ್ಟಿ , ಸಮ್ಮೇಳಾಧ್ಯಕ್ಷರೊಂದಿಗೆ ಸಂವಾದ ,ಸಾಧಕರಿಗೆ ಸನ್ಮಾನ, ನಡೆಯಿತು.
ಕನ್ನಡ ಭುವನೇಶ್ವರಿಯ ವೈಭವದ ಮೆರವಣಿಗೆ
ಸಮ್ಮೇಳನದ ಉದ್ಘಾಟನೆಗೆ ಮೊದಲು ಕನ್ನಡ ಭುವನೇಶ್ವರಿಯ ವೈಭವದ ಮೆರವಣಿಗೆ ನಡೆಯಿತು. ಪದವು ಸೈಂಟ್ ಜಾರ್ಜ್ ಆರ್ಥೋಡಾಕ್ಸ್ ಚರ್ಚ್ನ ಮುಂಭಾಗದಿಂದ ಸಮ್ಮೇಳನದ ವೇದಿಕೆ ತನಕ ಮೆರವಣಿಗೆ ನಡೆಯಿತು. ಯಕ್ಷ ಪಾಂಡವ ಮಹಾದ್ವಾರದ ಮೂಲಕ ಮೆರವಣಿಗೆ ಸಮ್ಮೇಳನದ ವೇದಿಕೆಗೆ ಆಗಮಿಸಿತು. ಪೆರಾಬೆ ಗ್ರಾಮ ಪಂಚಾಯಿತಿ ಸದಸ್ಯ ಪಿ.ಜಿ.ರಾಜು ಮೆರವಣಿಗೆ ಉದ್ಘಾಟಿಸಿದರು. ದ.ಕ.ಜಿ.ಪಂ.ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಿದರು. ಸಮ್ಮೇಳನಾಧ್ಯಕ್ಷ ಎನ್.ಕರುಣಾಕರ ಗೋಗಟೆ ಹೊಸಮಠ, ಕನ್ನಡ ಸಾಹಿತ್ಯ ಪರಿಷತ್ ದ ಕ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಕಡಬ ತಾಲೂಕು ಅಧ್ಯಕ್ಷ ಕೆ.ಸೇಸಪ್ಪ ರೈ ಅವರನ್ನು ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಕರೆತರಲಾಯಿತು. ಕಲಶ ಹೊತ್ತ ಮಹಿಳೆಯರು, ಚೆಂಡೆ ಸದ್ದು, ಗೊಂಬೆ ಕುಣಿತ ಮೆರವಣಿಗೆಗೆ ಮೆರುಗು ನೀಡಿತು. ಸಮ್ಮೇಳನದ ಆತಿಥ್ಯ ವಹಿಸಿಕೊಂಡ ಕುಂತೂರುಪದವು ಸಂತ ಜಾರ್ಜ್ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳ ಜೊತೆಗೆ ಕುಂತೂರು ಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರಾಮಕುಂಜ ಆಂಗ್ಲ ಮಾಧ್ಯಮ ಶಾಲೆ, ಕಡಬ ಸೈಂಟ್ ಆನ್ಸ್, ಆಲಂಕಾರು ದುರ್ಗಾಂಬಾ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಓಂತ್ರಡ್ಕ ಶಾಲಾ ಪದವಿಧರ ಶಿಕ್ಷಕ ದಿಲೀಪ್ ಎಸ್ ಸ್ವಾಗತಿಸಿ, ಸ್ವಾಗತ ಸಮಿತಿ ಕಾರ್ಯದರ್ಶಿ ಬಿ.ಪದ್ಮನಾಭ ಗೌಡ ಎರ್ಮಳ ವಂದಿಸಿದರು. ಶಿಕ್ಷಕ ಮಹೇಶ್ ಪಾಟಾಳಿ ನಿರೂಪಿಸಿದರು. ಕುಂತೂರು ಪದವು ಸಂತ ಜಾರ್ಜ್ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜೇಶ್ ಕುಮಾರ್ ಡಿ.ಜೆ. ಮೆರವಣಿಗೆ ಸಂಯೋಜಿಸಿದರು.
ಬೆಳಿಗ್ಗೆ ರಾಷ್ಟ್ರ, ಪರಿಷತ್ತು ಹಾಗೂ ನಾಡ ಧ್ವಜಾರೋಹಣ ನೆರವೇರಿಸಲಾಯಿತು. ಪೆರಾಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಂಧ್ಯಾ ಕೆ., ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಮಮತಾ ಶೆಟ್ಟಿ ಅಂಬರಾಜೆ ಸ್ವಾಗತಿಸಿ, ಕುಂತೂರು ಪದವು ಸಂತ ಜಾರ್ಜ್ ಅನುದಾನಿತ ಪ್ರೌಢಶಾಲೆಯ ಶಿಕ್ಷಕಿ ಭುವನೇಶ್ವರಿ ಪಿ ಯಂ ವಂದಿಸಿದರು. ಶಿಕ್ಷಕ ಕೇಶವ ಗೌಡ ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

23 hours ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

23 hours ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

23 hours ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

23 hours ago

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…

23 hours ago

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…

23 hours ago