ಜನ ಮನದ ನಾಡಿ ಮಿಡಿತ

Advertisement

ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ; ಎಲ್ಲ ಆರೋಗ್ಯ ಸಮಸ್ಯೆಗಳ ತಪಾಸಣೆಗೆ ಇನ್ನು ಒಂದೇ ಸೂರಿನಡಿ ಅವಕಾಶ

ವೆನ್ಲಾಕ್‌ನಲ್ಲಿ ಈಗಾಗಲೇ ಇರುವ ಹೊರ ರೋಗ ವಿಭಾಗ ಇಕ್ಕಟ್ಟಾಗಿದ್ದು, ಹೆಚ್ಚಿನ ಮೂಲ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಒಂದೊAದು ವಿಭಾಗ ಒಂದೊAದು ಕಡೆ ಇರುವ ಕಾರಣ ರೋಗಿಗಳಿಗೂ ಸಮಸ್ಯೆ ಉಂಟಾಗುತ್ತಿದೆ.

ಇದೇ ಕಾರಣಕ್ಕೆ ಇಲ್ಲಿರುವ ಕೆಲವೊಂದು ಅನ್ಯ ಸೇವೆಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈ ಮೂಲಕ ಹೊರ ರೋಗಿ ವಿಭಾಗಕ್ಕೆ ಹೆಚ್ಚಿನ ಸ್ಥಳಾವಕಾಶ ದೊರೆಯಲಿದೆ. ಒಂದೇ ಸೂರಿನಡಿ ಎಲ್ಲ ರೀತಿಯ ಸಮಸ್ಯೆಗಳಿಗೆ ಚಿಕಿತ್ಸೆ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಸದ್ಯ ವಾರ್ಡ್, ಔಷಧ ವಿಭಾಗ, ಶಸ್ತçಚಿಕಿತ್ಸಾ ಕೊಠಡಿ ಸಹಿತ ಕೆಲವೊಂದು ವಿಭಾಗ ಅಲ್ಲಲ್ಲಿ ಇದೆ. ಹಳೆ ವೆನ್ಲಾಕ್ ಆಸ್ಪತ್ರೆಯಲ್ಲಿರುವ ಔಷಧ ವಿಭಾಗ ತೀರಾ ಇಕ್ಕಟ್ಟಾಗಿದ್ದು, ಸೀಮಿತ ಸಂಖ್ಯೆಯ ಸಾರ್ವಜನಿಕರು ನಿಲ್ಲಲು ಅವಕಾಶ ಇದೆ. ವೆನ್ಲಾಕ್ ಆಸ್ಪತ್ರೆಯ ಹೊಸ ಸರ್ಜರಿ ಬ್ಲಾಕ್ ಬಳಿ ಪ್ರತ್ಯೇಕ ಸ್ಥಳಾವಕಾಶವಿದ್ದು, ಅಲ್ಲಿಗೆ ಮೆಡಿಸಿನ್ ವಿಭಾಗವನ್ನು ಸ್ಥಳಾಂತರಿಸಲು ನಿರ್ಧಾರ ಮಾಡಲಾಗಿದೆ. ಆಗ ಹೊರ ರೋಗಿ ವಿಭಾಗದಲ್ಲಿ ಹೆಚ್ಚಿನ ಸ್ಥಳಾವಕಾಶ ಸಿಗಲಿದೆ. ಇದರಿಂದ ಇಲ್ಲಿನ ಚುಚ್ಚುಮದ್ದು ಕೊಠಡಿ ಸಹಿತ ಇತರ ವಿಭಾಗವನ್ನು ವಿಸ್ತರಿಸಲು ಸಾಧ್ಯವಾಗುತ್ತದೆ. ಹಳೆ ಆಸ್ಪತ್ರೆಯಲ್ಲಿರುವ ಮೂಳೆ ವಿಭಾಗ, ಜನರಲ್ ಸರ್ಜರಿ ವಿಭಾಗವನ್ನು ಇತ್ತೀಚೆಗೆ ಉದ್ಘಾಟನೆಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಡಿಸೆಂಬರ್ನಲ್ಲಿ ಸ್ಥಳಾಂತರ ಮಾಡಲಾಗುತ್ತದೆ.ವೆಸ್ಲಾಕ್ ಆಸ್ಪತ್ರೆಗೆ ಹತ್ತಿರದ ಸುಮಾರು ಎಂಟು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗೆಂದು ಬರುತ್ತದೆ. ಪ್ರಮುಖವಾಗಿ ದ. ಕ., ಉಡುಪಿ, ಚಿಕ್ಕಮಗಳೂರು, ಕಾರವಾರ, ಕಾಸರಗೋಡು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯ ಮಂದಿಯೂ ಚಿಕಿತ್ಸೆಗೆ ಇದೇ ಆಸ್ಪತ್ರೆಗೆ ಬರುತ್ತಾರೆ. ಕ್ಲಿಷ್ಟ ಖಾಯಿಲೆ ಕಾರಣಕ್ಕೆ ತಾಲೂಕು ಆಸ್ಪತ್ರೆಗಳಿಂದ ಬಹುತೇಕ ಪ್ರಕರಣಗಳು ಇಲ್ಲಿಗೆ ಶಿಫಾರಸ್ಸು ಮಾಡಲಾಗುತ್ತದೆ. ದಿನದ 24 ಗಂಟೆಯೂ ಆಸ್ಪತ್ರೆಯನ್ನು ಚಿಕಿತ್ಸೆ ನೀಡಲಾಗುತ್ತಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಸರ್ಜಿಕಲ್ ಬ್ಲಾಕ್, ಮೆಡಿಸಿನ್ ಬ್ಲಾಕ್, ಮಕ್ಕಳ ಆಸ್ಪತ್ರೆ, ಅಡಳಿತ ವಿಭಾಗ ಪ್ರತ್ಯೇಕವಾಗಿದ್ದು, ಅದೇ ರೀತಿ, ಕೇವಲ ಹೊರ ರೋಗಿ ವಿಭಾಗಕ್ಕೆ ಪ್ರತ್ಯೇಕ ಕಟ್ಟಡದ ಬೇಡಿಕೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬೇಡಿಕೆ ಇಡಲಾಗಿದೆ. ಈ ನಿಟ್ಟಿನಲ್ಲಿ ಕೆಎಂಸಿ ಆಸ್ಪತ್ರೆಯ ಆಡಳಿತ ವಿಭಾಗದ ಜತೆ ಮಾತುಕತೆ ನಡೆಸಲಾಗಿದೆ. ಸದ್ಯದಲ್ಲೇ ಮುಖ್ಯಮಂತ್ರಿಗಳ ಜತೆ ವಿಚಾರ ಪ್ರಸ್ತಾಪಿಸಲು ನಿರ್ಧಾರ ಮಾಡಲಾಗಿದೆ ಎಂದು ಅಧಿಕಾರಿಯೋರ್ವರು ಮಾದ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!