ಜನ ಮನದ ನಾಡಿ ಮಿಡಿತ

Advertisement

ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ; ಎಲ್ಲ ಆರೋಗ್ಯ ಸಮಸ್ಯೆಗಳ ತಪಾಸಣೆಗೆ ಇನ್ನು ಒಂದೇ ಸೂರಿನಡಿ ಅವಕಾಶ

ವೆನ್ಲಾಕ್‌ನಲ್ಲಿ ಈಗಾಗಲೇ ಇರುವ ಹೊರ ರೋಗ ವಿಭಾಗ ಇಕ್ಕಟ್ಟಾಗಿದ್ದು, ಹೆಚ್ಚಿನ ಮೂಲ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಒಂದೊAದು ವಿಭಾಗ ಒಂದೊAದು ಕಡೆ ಇರುವ ಕಾರಣ ರೋಗಿಗಳಿಗೂ ಸಮಸ್ಯೆ ಉಂಟಾಗುತ್ತಿದೆ.

ಇದೇ ಕಾರಣಕ್ಕೆ ಇಲ್ಲಿರುವ ಕೆಲವೊಂದು ಅನ್ಯ ಸೇವೆಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈ ಮೂಲಕ ಹೊರ ರೋಗಿ ವಿಭಾಗಕ್ಕೆ ಹೆಚ್ಚಿನ ಸ್ಥಳಾವಕಾಶ ದೊರೆಯಲಿದೆ. ಒಂದೇ ಸೂರಿನಡಿ ಎಲ್ಲ ರೀತಿಯ ಸಮಸ್ಯೆಗಳಿಗೆ ಚಿಕಿತ್ಸೆ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಸದ್ಯ ವಾರ್ಡ್, ಔಷಧ ವಿಭಾಗ, ಶಸ್ತçಚಿಕಿತ್ಸಾ ಕೊಠಡಿ ಸಹಿತ ಕೆಲವೊಂದು ವಿಭಾಗ ಅಲ್ಲಲ್ಲಿ ಇದೆ. ಹಳೆ ವೆನ್ಲಾಕ್ ಆಸ್ಪತ್ರೆಯಲ್ಲಿರುವ ಔಷಧ ವಿಭಾಗ ತೀರಾ ಇಕ್ಕಟ್ಟಾಗಿದ್ದು, ಸೀಮಿತ ಸಂಖ್ಯೆಯ ಸಾರ್ವಜನಿಕರು ನಿಲ್ಲಲು ಅವಕಾಶ ಇದೆ. ವೆನ್ಲಾಕ್ ಆಸ್ಪತ್ರೆಯ ಹೊಸ ಸರ್ಜರಿ ಬ್ಲಾಕ್ ಬಳಿ ಪ್ರತ್ಯೇಕ ಸ್ಥಳಾವಕಾಶವಿದ್ದು, ಅಲ್ಲಿಗೆ ಮೆಡಿಸಿನ್ ವಿಭಾಗವನ್ನು ಸ್ಥಳಾಂತರಿಸಲು ನಿರ್ಧಾರ ಮಾಡಲಾಗಿದೆ. ಆಗ ಹೊರ ರೋಗಿ ವಿಭಾಗದಲ್ಲಿ ಹೆಚ್ಚಿನ ಸ್ಥಳಾವಕಾಶ ಸಿಗಲಿದೆ. ಇದರಿಂದ ಇಲ್ಲಿನ ಚುಚ್ಚುಮದ್ದು ಕೊಠಡಿ ಸಹಿತ ಇತರ ವಿಭಾಗವನ್ನು ವಿಸ್ತರಿಸಲು ಸಾಧ್ಯವಾಗುತ್ತದೆ. ಹಳೆ ಆಸ್ಪತ್ರೆಯಲ್ಲಿರುವ ಮೂಳೆ ವಿಭಾಗ, ಜನರಲ್ ಸರ್ಜರಿ ವಿಭಾಗವನ್ನು ಇತ್ತೀಚೆಗೆ ಉದ್ಘಾಟನೆಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಡಿಸೆಂಬರ್ನಲ್ಲಿ ಸ್ಥಳಾಂತರ ಮಾಡಲಾಗುತ್ತದೆ.ವೆಸ್ಲಾಕ್ ಆಸ್ಪತ್ರೆಗೆ ಹತ್ತಿರದ ಸುಮಾರು ಎಂಟು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗೆಂದು ಬರುತ್ತದೆ. ಪ್ರಮುಖವಾಗಿ ದ. ಕ., ಉಡುಪಿ, ಚಿಕ್ಕಮಗಳೂರು, ಕಾರವಾರ, ಕಾಸರಗೋಡು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯ ಮಂದಿಯೂ ಚಿಕಿತ್ಸೆಗೆ ಇದೇ ಆಸ್ಪತ್ರೆಗೆ ಬರುತ್ತಾರೆ. ಕ್ಲಿಷ್ಟ ಖಾಯಿಲೆ ಕಾರಣಕ್ಕೆ ತಾಲೂಕು ಆಸ್ಪತ್ರೆಗಳಿಂದ ಬಹುತೇಕ ಪ್ರಕರಣಗಳು ಇಲ್ಲಿಗೆ ಶಿಫಾರಸ್ಸು ಮಾಡಲಾಗುತ್ತದೆ. ದಿನದ 24 ಗಂಟೆಯೂ ಆಸ್ಪತ್ರೆಯನ್ನು ಚಿಕಿತ್ಸೆ ನೀಡಲಾಗುತ್ತಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಸರ್ಜಿಕಲ್ ಬ್ಲಾಕ್, ಮೆಡಿಸಿನ್ ಬ್ಲಾಕ್, ಮಕ್ಕಳ ಆಸ್ಪತ್ರೆ, ಅಡಳಿತ ವಿಭಾಗ ಪ್ರತ್ಯೇಕವಾಗಿದ್ದು, ಅದೇ ರೀತಿ, ಕೇವಲ ಹೊರ ರೋಗಿ ವಿಭಾಗಕ್ಕೆ ಪ್ರತ್ಯೇಕ ಕಟ್ಟಡದ ಬೇಡಿಕೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬೇಡಿಕೆ ಇಡಲಾಗಿದೆ. ಈ ನಿಟ್ಟಿನಲ್ಲಿ ಕೆಎಂಸಿ ಆಸ್ಪತ್ರೆಯ ಆಡಳಿತ ವಿಭಾಗದ ಜತೆ ಮಾತುಕತೆ ನಡೆಸಲಾಗಿದೆ. ಸದ್ಯದಲ್ಲೇ ಮುಖ್ಯಮಂತ್ರಿಗಳ ಜತೆ ವಿಚಾರ ಪ್ರಸ್ತಾಪಿಸಲು ನಿರ್ಧಾರ ಮಾಡಲಾಗಿದೆ ಎಂದು ಅಧಿಕಾರಿಯೋರ್ವರು ಮಾದ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

 

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!