ವೆನ್ಲಾಕ್ನಲ್ಲಿ ಈಗಾಗಲೇ ಇರುವ ಹೊರ ರೋಗ ವಿಭಾಗ ಇಕ್ಕಟ್ಟಾಗಿದ್ದು, ಹೆಚ್ಚಿನ ಮೂಲ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಒಂದೊAದು ವಿಭಾಗ ಒಂದೊAದು ಕಡೆ ಇರುವ ಕಾರಣ ರೋಗಿಗಳಿಗೂ ಸಮಸ್ಯೆ ಉಂಟಾಗುತ್ತಿದೆ.
ಇದೇ ಕಾರಣಕ್ಕೆ ಇಲ್ಲಿರುವ ಕೆಲವೊಂದು ಅನ್ಯ ಸೇವೆಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈ ಮೂಲಕ ಹೊರ ರೋಗಿ ವಿಭಾಗಕ್ಕೆ ಹೆಚ್ಚಿನ ಸ್ಥಳಾವಕಾಶ ದೊರೆಯಲಿದೆ. ಒಂದೇ ಸೂರಿನಡಿ ಎಲ್ಲ ರೀತಿಯ ಸಮಸ್ಯೆಗಳಿಗೆ ಚಿಕಿತ್ಸೆ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಸದ್ಯ ವಾರ್ಡ್, ಔಷಧ ವಿಭಾಗ, ಶಸ್ತçಚಿಕಿತ್ಸಾ ಕೊಠಡಿ ಸಹಿತ ಕೆಲವೊಂದು ವಿಭಾಗ ಅಲ್ಲಲ್ಲಿ ಇದೆ. ಹಳೆ ವೆನ್ಲಾಕ್ ಆಸ್ಪತ್ರೆಯಲ್ಲಿರುವ ಔಷಧ ವಿಭಾಗ ತೀರಾ ಇಕ್ಕಟ್ಟಾಗಿದ್ದು, ಸೀಮಿತ ಸಂಖ್ಯೆಯ ಸಾರ್ವಜನಿಕರು ನಿಲ್ಲಲು ಅವಕಾಶ ಇದೆ. ವೆನ್ಲಾಕ್ ಆಸ್ಪತ್ರೆಯ ಹೊಸ ಸರ್ಜರಿ ಬ್ಲಾಕ್ ಬಳಿ ಪ್ರತ್ಯೇಕ ಸ್ಥಳಾವಕಾಶವಿದ್ದು, ಅಲ್ಲಿಗೆ ಮೆಡಿಸಿನ್ ವಿಭಾಗವನ್ನು ಸ್ಥಳಾಂತರಿಸಲು ನಿರ್ಧಾರ ಮಾಡಲಾಗಿದೆ. ಆಗ ಹೊರ ರೋಗಿ ವಿಭಾಗದಲ್ಲಿ ಹೆಚ್ಚಿನ ಸ್ಥಳಾವಕಾಶ ಸಿಗಲಿದೆ. ಇದರಿಂದ ಇಲ್ಲಿನ ಚುಚ್ಚುಮದ್ದು ಕೊಠಡಿ ಸಹಿತ ಇತರ ವಿಭಾಗವನ್ನು ವಿಸ್ತರಿಸಲು ಸಾಧ್ಯವಾಗುತ್ತದೆ. ಹಳೆ ಆಸ್ಪತ್ರೆಯಲ್ಲಿರುವ ಮೂಳೆ ವಿಭಾಗ, ಜನರಲ್ ಸರ್ಜರಿ ವಿಭಾಗವನ್ನು ಇತ್ತೀಚೆಗೆ ಉದ್ಘಾಟನೆಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಡಿಸೆಂಬರ್ನಲ್ಲಿ ಸ್ಥಳಾಂತರ ಮಾಡಲಾಗುತ್ತದೆ.ವೆಸ್ಲಾಕ್ ಆಸ್ಪತ್ರೆಗೆ ಹತ್ತಿರದ ಸುಮಾರು ಎಂಟು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗೆಂದು ಬರುತ್ತದೆ. ಪ್ರಮುಖವಾಗಿ ದ. ಕ., ಉಡುಪಿ, ಚಿಕ್ಕಮಗಳೂರು, ಕಾರವಾರ, ಕಾಸರಗೋಡು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯ ಮಂದಿಯೂ ಚಿಕಿತ್ಸೆಗೆ ಇದೇ ಆಸ್ಪತ್ರೆಗೆ ಬರುತ್ತಾರೆ. ಕ್ಲಿಷ್ಟ ಖಾಯಿಲೆ ಕಾರಣಕ್ಕೆ ತಾಲೂಕು ಆಸ್ಪತ್ರೆಗಳಿಂದ ಬಹುತೇಕ ಪ್ರಕರಣಗಳು ಇಲ್ಲಿಗೆ ಶಿಫಾರಸ್ಸು ಮಾಡಲಾಗುತ್ತದೆ. ದಿನದ 24 ಗಂಟೆಯೂ ಆಸ್ಪತ್ರೆಯನ್ನು ಚಿಕಿತ್ಸೆ ನೀಡಲಾಗುತ್ತಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಸರ್ಜಿಕಲ್ ಬ್ಲಾಕ್, ಮೆಡಿಸಿನ್ ಬ್ಲಾಕ್, ಮಕ್ಕಳ ಆಸ್ಪತ್ರೆ, ಅಡಳಿತ ವಿಭಾಗ ಪ್ರತ್ಯೇಕವಾಗಿದ್ದು, ಅದೇ ರೀತಿ, ಕೇವಲ ಹೊರ ರೋಗಿ ವಿಭಾಗಕ್ಕೆ ಪ್ರತ್ಯೇಕ ಕಟ್ಟಡದ ಬೇಡಿಕೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬೇಡಿಕೆ ಇಡಲಾಗಿದೆ. ಈ ನಿಟ್ಟಿನಲ್ಲಿ ಕೆಎಂಸಿ ಆಸ್ಪತ್ರೆಯ ಆಡಳಿತ ವಿಭಾಗದ ಜತೆ ಮಾತುಕತೆ ನಡೆಸಲಾಗಿದೆ. ಸದ್ಯದಲ್ಲೇ ಮುಖ್ಯಮಂತ್ರಿಗಳ ಜತೆ ವಿಚಾರ ಪ್ರಸ್ತಾಪಿಸಲು ನಿರ್ಧಾರ ಮಾಡಲಾಗಿದೆ ಎಂದು ಅಧಿಕಾರಿಯೋರ್ವರು ಮಾದ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…