ಕರಾವಳಿ

ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ; ಎಲ್ಲ ಆರೋಗ್ಯ ಸಮಸ್ಯೆಗಳ ತಪಾಸಣೆಗೆ ಇನ್ನು ಒಂದೇ ಸೂರಿನಡಿ ಅವಕಾಶ

ವೆನ್ಲಾಕ್‌ನಲ್ಲಿ ಈಗಾಗಲೇ ಇರುವ ಹೊರ ರೋಗ ವಿಭಾಗ ಇಕ್ಕಟ್ಟಾಗಿದ್ದು, ಹೆಚ್ಚಿನ ಮೂಲ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಒಂದೊAದು ವಿಭಾಗ ಒಂದೊAದು ಕಡೆ ಇರುವ ಕಾರಣ ರೋಗಿಗಳಿಗೂ ಸಮಸ್ಯೆ ಉಂಟಾಗುತ್ತಿದೆ.

ಇದೇ ಕಾರಣಕ್ಕೆ ಇಲ್ಲಿರುವ ಕೆಲವೊಂದು ಅನ್ಯ ಸೇವೆಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈ ಮೂಲಕ ಹೊರ ರೋಗಿ ವಿಭಾಗಕ್ಕೆ ಹೆಚ್ಚಿನ ಸ್ಥಳಾವಕಾಶ ದೊರೆಯಲಿದೆ. ಒಂದೇ ಸೂರಿನಡಿ ಎಲ್ಲ ರೀತಿಯ ಸಮಸ್ಯೆಗಳಿಗೆ ಚಿಕಿತ್ಸೆ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಸದ್ಯ ವಾರ್ಡ್, ಔಷಧ ವಿಭಾಗ, ಶಸ್ತçಚಿಕಿತ್ಸಾ ಕೊಠಡಿ ಸಹಿತ ಕೆಲವೊಂದು ವಿಭಾಗ ಅಲ್ಲಲ್ಲಿ ಇದೆ. ಹಳೆ ವೆನ್ಲಾಕ್ ಆಸ್ಪತ್ರೆಯಲ್ಲಿರುವ ಔಷಧ ವಿಭಾಗ ತೀರಾ ಇಕ್ಕಟ್ಟಾಗಿದ್ದು, ಸೀಮಿತ ಸಂಖ್ಯೆಯ ಸಾರ್ವಜನಿಕರು ನಿಲ್ಲಲು ಅವಕಾಶ ಇದೆ. ವೆನ್ಲಾಕ್ ಆಸ್ಪತ್ರೆಯ ಹೊಸ ಸರ್ಜರಿ ಬ್ಲಾಕ್ ಬಳಿ ಪ್ರತ್ಯೇಕ ಸ್ಥಳಾವಕಾಶವಿದ್ದು, ಅಲ್ಲಿಗೆ ಮೆಡಿಸಿನ್ ವಿಭಾಗವನ್ನು ಸ್ಥಳಾಂತರಿಸಲು ನಿರ್ಧಾರ ಮಾಡಲಾಗಿದೆ. ಆಗ ಹೊರ ರೋಗಿ ವಿಭಾಗದಲ್ಲಿ ಹೆಚ್ಚಿನ ಸ್ಥಳಾವಕಾಶ ಸಿಗಲಿದೆ. ಇದರಿಂದ ಇಲ್ಲಿನ ಚುಚ್ಚುಮದ್ದು ಕೊಠಡಿ ಸಹಿತ ಇತರ ವಿಭಾಗವನ್ನು ವಿಸ್ತರಿಸಲು ಸಾಧ್ಯವಾಗುತ್ತದೆ. ಹಳೆ ಆಸ್ಪತ್ರೆಯಲ್ಲಿರುವ ಮೂಳೆ ವಿಭಾಗ, ಜನರಲ್ ಸರ್ಜರಿ ವಿಭಾಗವನ್ನು ಇತ್ತೀಚೆಗೆ ಉದ್ಘಾಟನೆಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಡಿಸೆಂಬರ್ನಲ್ಲಿ ಸ್ಥಳಾಂತರ ಮಾಡಲಾಗುತ್ತದೆ.ವೆಸ್ಲಾಕ್ ಆಸ್ಪತ್ರೆಗೆ ಹತ್ತಿರದ ಸುಮಾರು ಎಂಟು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗೆಂದು ಬರುತ್ತದೆ. ಪ್ರಮುಖವಾಗಿ ದ. ಕ., ಉಡುಪಿ, ಚಿಕ್ಕಮಗಳೂರು, ಕಾರವಾರ, ಕಾಸರಗೋಡು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯ ಮಂದಿಯೂ ಚಿಕಿತ್ಸೆಗೆ ಇದೇ ಆಸ್ಪತ್ರೆಗೆ ಬರುತ್ತಾರೆ. ಕ್ಲಿಷ್ಟ ಖಾಯಿಲೆ ಕಾರಣಕ್ಕೆ ತಾಲೂಕು ಆಸ್ಪತ್ರೆಗಳಿಂದ ಬಹುತೇಕ ಪ್ರಕರಣಗಳು ಇಲ್ಲಿಗೆ ಶಿಫಾರಸ್ಸು ಮಾಡಲಾಗುತ್ತದೆ. ದಿನದ 24 ಗಂಟೆಯೂ ಆಸ್ಪತ್ರೆಯನ್ನು ಚಿಕಿತ್ಸೆ ನೀಡಲಾಗುತ್ತಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಸರ್ಜಿಕಲ್ ಬ್ಲಾಕ್, ಮೆಡಿಸಿನ್ ಬ್ಲಾಕ್, ಮಕ್ಕಳ ಆಸ್ಪತ್ರೆ, ಅಡಳಿತ ವಿಭಾಗ ಪ್ರತ್ಯೇಕವಾಗಿದ್ದು, ಅದೇ ರೀತಿ, ಕೇವಲ ಹೊರ ರೋಗಿ ವಿಭಾಗಕ್ಕೆ ಪ್ರತ್ಯೇಕ ಕಟ್ಟಡದ ಬೇಡಿಕೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬೇಡಿಕೆ ಇಡಲಾಗಿದೆ. ಈ ನಿಟ್ಟಿನಲ್ಲಿ ಕೆಎಂಸಿ ಆಸ್ಪತ್ರೆಯ ಆಡಳಿತ ವಿಭಾಗದ ಜತೆ ಮಾತುಕತೆ ನಡೆಸಲಾಗಿದೆ. ಸದ್ಯದಲ್ಲೇ ಮುಖ್ಯಮಂತ್ರಿಗಳ ಜತೆ ವಿಚಾರ ಪ್ರಸ್ತಾಪಿಸಲು ನಿರ್ಧಾರ ಮಾಡಲಾಗಿದೆ ಎಂದು ಅಧಿಕಾರಿಯೋರ್ವರು ಮಾದ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

3 mins ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

14 mins ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

18 mins ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

23 mins ago

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

23 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

4 days ago