ವೆನ್ಲಾಕ್ನಲ್ಲಿ ಈಗಾಗಲೇ ಇರುವ ಹೊರ ರೋಗ ವಿಭಾಗ ಇಕ್ಕಟ್ಟಾಗಿದ್ದು, ಹೆಚ್ಚಿನ ಮೂಲ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಒಂದೊAದು ವಿಭಾಗ ಒಂದೊAದು ಕಡೆ ಇರುವ ಕಾರಣ ರೋಗಿಗಳಿಗೂ ಸಮಸ್ಯೆ ಉಂಟಾಗುತ್ತಿದೆ.
ಇದೇ ಕಾರಣಕ್ಕೆ ಇಲ್ಲಿರುವ ಕೆಲವೊಂದು ಅನ್ಯ ಸೇವೆಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈ ಮೂಲಕ ಹೊರ ರೋಗಿ ವಿಭಾಗಕ್ಕೆ ಹೆಚ್ಚಿನ ಸ್ಥಳಾವಕಾಶ ದೊರೆಯಲಿದೆ. ಒಂದೇ ಸೂರಿನಡಿ ಎಲ್ಲ ರೀತಿಯ ಸಮಸ್ಯೆಗಳಿಗೆ ಚಿಕಿತ್ಸೆ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಸದ್ಯ ವಾರ್ಡ್, ಔಷಧ ವಿಭಾಗ, ಶಸ್ತçಚಿಕಿತ್ಸಾ ಕೊಠಡಿ ಸಹಿತ ಕೆಲವೊಂದು ವಿಭಾಗ ಅಲ್ಲಲ್ಲಿ ಇದೆ. ಹಳೆ ವೆನ್ಲಾಕ್ ಆಸ್ಪತ್ರೆಯಲ್ಲಿರುವ ಔಷಧ ವಿಭಾಗ ತೀರಾ ಇಕ್ಕಟ್ಟಾಗಿದ್ದು, ಸೀಮಿತ ಸಂಖ್ಯೆಯ ಸಾರ್ವಜನಿಕರು ನಿಲ್ಲಲು ಅವಕಾಶ ಇದೆ. ವೆನ್ಲಾಕ್ ಆಸ್ಪತ್ರೆಯ ಹೊಸ ಸರ್ಜರಿ ಬ್ಲಾಕ್ ಬಳಿ ಪ್ರತ್ಯೇಕ ಸ್ಥಳಾವಕಾಶವಿದ್ದು, ಅಲ್ಲಿಗೆ ಮೆಡಿಸಿನ್ ವಿಭಾಗವನ್ನು ಸ್ಥಳಾಂತರಿಸಲು ನಿರ್ಧಾರ ಮಾಡಲಾಗಿದೆ. ಆಗ ಹೊರ ರೋಗಿ ವಿಭಾಗದಲ್ಲಿ ಹೆಚ್ಚಿನ ಸ್ಥಳಾವಕಾಶ ಸಿಗಲಿದೆ. ಇದರಿಂದ ಇಲ್ಲಿನ ಚುಚ್ಚುಮದ್ದು ಕೊಠಡಿ ಸಹಿತ ಇತರ ವಿಭಾಗವನ್ನು ವಿಸ್ತರಿಸಲು ಸಾಧ್ಯವಾಗುತ್ತದೆ. ಹಳೆ ಆಸ್ಪತ್ರೆಯಲ್ಲಿರುವ ಮೂಳೆ ವಿಭಾಗ, ಜನರಲ್ ಸರ್ಜರಿ ವಿಭಾಗವನ್ನು ಇತ್ತೀಚೆಗೆ ಉದ್ಘಾಟನೆಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಡಿಸೆಂಬರ್ನಲ್ಲಿ ಸ್ಥಳಾಂತರ ಮಾಡಲಾಗುತ್ತದೆ.ವೆಸ್ಲಾಕ್ ಆಸ್ಪತ್ರೆಗೆ ಹತ್ತಿರದ ಸುಮಾರು ಎಂಟು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗೆಂದು ಬರುತ್ತದೆ. ಪ್ರಮುಖವಾಗಿ ದ. ಕ., ಉಡುಪಿ, ಚಿಕ್ಕಮಗಳೂರು, ಕಾರವಾರ, ಕಾಸರಗೋಡು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯ ಮಂದಿಯೂ ಚಿಕಿತ್ಸೆಗೆ ಇದೇ ಆಸ್ಪತ್ರೆಗೆ ಬರುತ್ತಾರೆ. ಕ್ಲಿಷ್ಟ ಖಾಯಿಲೆ ಕಾರಣಕ್ಕೆ ತಾಲೂಕು ಆಸ್ಪತ್ರೆಗಳಿಂದ ಬಹುತೇಕ ಪ್ರಕರಣಗಳು ಇಲ್ಲಿಗೆ ಶಿಫಾರಸ್ಸು ಮಾಡಲಾಗುತ್ತದೆ. ದಿನದ 24 ಗಂಟೆಯೂ ಆಸ್ಪತ್ರೆಯನ್ನು ಚಿಕಿತ್ಸೆ ನೀಡಲಾಗುತ್ತಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಸರ್ಜಿಕಲ್ ಬ್ಲಾಕ್, ಮೆಡಿಸಿನ್ ಬ್ಲಾಕ್, ಮಕ್ಕಳ ಆಸ್ಪತ್ರೆ, ಅಡಳಿತ ವಿಭಾಗ ಪ್ರತ್ಯೇಕವಾಗಿದ್ದು, ಅದೇ ರೀತಿ, ಕೇವಲ ಹೊರ ರೋಗಿ ವಿಭಾಗಕ್ಕೆ ಪ್ರತ್ಯೇಕ ಕಟ್ಟಡದ ಬೇಡಿಕೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬೇಡಿಕೆ ಇಡಲಾಗಿದೆ. ಈ ನಿಟ್ಟಿನಲ್ಲಿ ಕೆಎಂಸಿ ಆಸ್ಪತ್ರೆಯ ಆಡಳಿತ ವಿಭಾಗದ ಜತೆ ಮಾತುಕತೆ ನಡೆಸಲಾಗಿದೆ. ಸದ್ಯದಲ್ಲೇ ಮುಖ್ಯಮಂತ್ರಿಗಳ ಜತೆ ವಿಚಾರ ಪ್ರಸ್ತಾಪಿಸಲು ನಿರ್ಧಾರ ಮಾಡಲಾಗಿದೆ ಎಂದು ಅಧಿಕಾರಿಯೋರ್ವರು ಮಾದ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…