ಜನ ಮನದ ನಾಡಿ ಮಿಡಿತ

Advertisement

ಚೇರ್ಕಾಡಿ: 2025ರ ಮೇಯಿಂದ ರಾಷ್ಟ್ರೋತ್ಥಾನ ಪರಿಷತ್ ನ ಸಿಬಿಎಸ್ಇ ಶಾಲೆ ಆರಂಭ

ಉಡುಪಿ: ರಾಷ್ಟ್ರೋತ್ಥಾನ ಪರಿಷತ್ ಗೆ 60 ತುಂಬುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸಿಬಿಎಸ್ಇ ಶಾಲೆಗಳನ್ನು ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿದೆ. ಇದರ ಭಾಗವಾಗಿ ಉಡುಪಿ ಜಿಲ್ಲೆಯ ಚೇರ್ಕಾಡಿಯಲ್ಲಿ ನೂತನ ಶಾಲೆ 2025ರ ಮೇ ಯಿಂದ ಕಾರ್ಯಾರಂಭವಾಗಲಿದೆ ಎಂದು ರಾಷ್ಟ್ರೋತ್ಥಾನ ಪರಿಷತ್ ನ ಪ್ರಧಾನ ಕಾರ್ಯದರ್ಶಿ ನಾರಾವಿ ದಿನೇಶ್ ಹೆಗ್ಡೆ ಹೇಳಿದರು.


ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ 9 ಜಿಲ್ಲೆಗಳಲ್ಲಿ ರಾಷ್ಟ್ರೋತ್ಥಾನ ಪರಿಷತ್ ನ 14 ಸಿಬಿಎಸ್ಇ ಶಾಲೆಗಳಲ್ಲಿ 15 ಸಾವಿರ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಮುಂದೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಿಬಿಎಸ್ಇ ಶಾಲೆಗಳನ್ನು ಆರಂಭಿಸುವ ಯೋಜನೆ ಇದೆ ಎಂದರು.
ಚೇರ್ಕಾಡಿ ಶಾಲೆಯಲ್ಲಿ ಪೂರ್ವ ಪ್ರಾಥಮಿಕದಿಂದ 8 ನೇ ತರಗತಿಯವರೆಗೆ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಮುಂದಿನ ವರ್ಷ ಎಪ್ರಿಲ್ 30 ರಂದು ಶಾಲಾ ಕಟ್ಟಡ ಉದ್ಘಾಟನೆಗೊಳ್ಳಲಿದ್ದು, ಮೇ ತಿಂಗಳಿನಿಂದ ಶಾಲೆ ಕಾರ್ಯಾರಂಭವಾಗಲಿದೆ. ಹುಡುಗ/ಹುಡುಗಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸ್ಥಾನೀಯ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್, ಕಾರ್ಯದರ್ಶಿ ಋಷಿ ರಾಜ್, ರವಿ ಕುಮಾರ್, ಪ್ರಾಂಶುಪಾಲೆ ಭಾಗ್ಯಶ್ರೀ ಐತಾಳ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

error: Content is protected !!