ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಗಳನ್ನು ಸಂಪರ್ಕಿಸುವ ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನಾದುರಸ್ಥಿಯಾಗಿ ವಾಹಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅಡ್ಡಿಯಾಗಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ಡಿ.2ರ ಬೆಳಗ್ಗೆ 10 ಗಂಟೆಗೆ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರ ಎಂಬಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮತ್ತು ಲೋಕೋಪಯೋಗಿ ಇಲಾಖೆಗೆ ಬಿಸಿ ಮುಟ್ಟಿಸುವ ಕಾರ್ಯ ನಡೆಸಲಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.
ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಜನ ಸಾಮಾನ್ಯರು ನಡೆದಾಡಲೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದ
ರೂ ಲೋಕೋಪಯೋಗಿ ಇಲಾಖೆಯಾಗಲಿ, ಸರಕಾರವಾಗಲಿ ಈ ಕುರಿತು ಗಮನ ಹರಿಸದೆ ಇದ್ದ ಕಾರಣ ರಸ್ತೆಯ ಪರಿಸ್ಥಿತಿ ಶೋಚನೀಯವಾಗಿದೆ. ಇದರ ವಿರುದ್ಧ ಸಾರ್ವಜನಿಕರು ರಸ್ತೆಗಿಳಿದು ಹೋರಾಟ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಪುತ್ತೂರು-ಉಪ್ಪಿನಂಗಡಿ ರಸ್ತೆಗೆ ತಕ್ಷಣವೇ ಡಾಮರೀಕರಣ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು. ಈ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪ್ರತಿಭಟನೆಯಲ್ಲಿ ವಾಹನಗಳ ಚಾಲಕ-ಮಾಲಕರು, ಸಾರ್ವಜನಿಕರು ಪ್ರತಿಭಟನೆಯಲ್ಲಿ ಕೈಜೋಡಿಸಬೇಕು. ಮಾತ್ರವಲ್ಲದೆ, ಈ ಮೂಲಕ ಪುತ್ತೂರು-ಉಪ್ಪಿನಂಗಡಿ ರಸ್ತೆಯನ್ನು ಸರ್ವಋತು ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ಆಗ್ರಹಿಸಬೇಕು ಎಂದು ಅವರು ವಿನಂತಿಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…