ನೈಜೀರಿಯದ ಉತ್ತರ ಭಾಗದಲ್ಲಿ ಸಂಭವಿಸಿದ ಬೋಟ್ ಅಪಘಾತದಲ್ಲಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಇನ್ನೂ ಕಾಣೆಯಾಗಿದ್ದಾರೆ. ನೈಜೀರಿಯದ ಕೋಗಿ ರಾಜ್ಯದಿಂದ ಹೊರಟ ಬೋಟ್, ನೈಜರ್ ನದಿಯಲ್ಲಿ ಮುಳುಗಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಬೋಟ್ನಲ್ಲಿ ಸುಮಾರು 200 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಶುಕ್ರವಾರ ಸಂಜೆ ವೇಳೆಗೆ 27 ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದು, ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ.
ಸ್ಥಳೀಯ ಸ್ಕೂಬಾ ತಜ್ಞರು ಮತ್ತು ಸೇನಾಬಲದ ಸಿಬ್ಬಂದಿ ಸೇರಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ಕೋಗಿಯ ರಕ್ಷಣಾ ಪ್ರತಿನಿಧಿ ತಿಳಿಸಿದ್ದಾರೆ. ಘಟನೆ ಸಂಭವಿಸಿದ 12 ಗಂಟೆಗೂ ಹೆಚ್ಚಿನ ಸಮಯದಲ್ಲಿ ಯಾವುದೇ ಪ್ರಯಾಣಿಕರನ್ನು ಜೀವಿತಾವಸ್ಥೆಯಲ್ಲಿ ರಕ್ಷಿಸಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಗಾಯಾಳುಗಳಲ್ಲಿ ಬಹುಮಟ್ಟಿಗೆ ಮಹಿಳೆಯರೇ ಇದ್ದು, ಮತ್ತು ಅವರಲ್ಲಿ ಕೆಲವರು ಮಾರ್ಕೆಟಿಗೆ ಹೋಗುತ್ತಿದ್ದವರು ಎಂದು ವರದಿಯಾಗಿದೆ.
ಬೋಟ್ ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸಿರುವುದು ಮತ್ತು ಬೋಟ್ ನಿರ್ವಹಣೆ ಕೊರತೆಯಿಂದ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ. ಮುಳುಗಿದ ಬೋಟನ್ನು ಹುಡುಕಲು ತಡವಾದ ಕಾರಣ ಸಾವಿನ ಸಂಖ್ಯೆ ಹೆಚ್ಚಾಯಿತು ಎಂದು ವಿಶ್ಲೇಷಣೆ ಮಾಡಲಾಗಿದೆ.
ನೈಜೀರಿಯಾ ಭಾಗದಲ್ಲಿ ಸಮರ್ಪಕ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಜನರು ಹೆಚ್ಚಾಗಿ ಜಲ ಸಾರಿಗೆಯನ್ನು ಬಳಸುತ್ತಿದ್ದು, ಹೀಗಾಗಿ ಅಲ್ಲಿ ಬೋಟ್ ಅಪಘಾತಗಳು ಸಾಮಾನ್ಯವಾಗುತ್ತಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…