ನೈಜೀರಿಯದ ಉತ್ತರ ಭಾಗದಲ್ಲಿ ಸಂಭವಿಸಿದ ಬೋಟ್ ಅಪಘಾತದಲ್ಲಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಇನ್ನೂ ಕಾಣೆಯಾಗಿದ್ದಾರೆ. ನೈಜೀರಿಯದ ಕೋಗಿ ರಾಜ್ಯದಿಂದ ಹೊರಟ ಬೋಟ್, ನೈಜರ್ ನದಿಯಲ್ಲಿ ಮುಳುಗಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಬೋಟ್ನಲ್ಲಿ ಸುಮಾರು 200 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಶುಕ್ರವಾರ ಸಂಜೆ ವೇಳೆಗೆ 27 ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದು, ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ.
ಸ್ಥಳೀಯ ಸ್ಕೂಬಾ ತಜ್ಞರು ಮತ್ತು ಸೇನಾಬಲದ ಸಿಬ್ಬಂದಿ ಸೇರಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ಕೋಗಿಯ ರಕ್ಷಣಾ ಪ್ರತಿನಿಧಿ ತಿಳಿಸಿದ್ದಾರೆ. ಘಟನೆ ಸಂಭವಿಸಿದ 12 ಗಂಟೆಗೂ ಹೆಚ್ಚಿನ ಸಮಯದಲ್ಲಿ ಯಾವುದೇ ಪ್ರಯಾಣಿಕರನ್ನು ಜೀವಿತಾವಸ್ಥೆಯಲ್ಲಿ ರಕ್ಷಿಸಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಗಾಯಾಳುಗಳಲ್ಲಿ ಬಹುಮಟ್ಟಿಗೆ ಮಹಿಳೆಯರೇ ಇದ್ದು, ಮತ್ತು ಅವರಲ್ಲಿ ಕೆಲವರು ಮಾರ್ಕೆಟಿಗೆ ಹೋಗುತ್ತಿದ್ದವರು ಎಂದು ವರದಿಯಾಗಿದೆ.
ಬೋಟ್ ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸಿರುವುದು ಮತ್ತು ಬೋಟ್ ನಿರ್ವಹಣೆ ಕೊರತೆಯಿಂದ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ. ಮುಳುಗಿದ ಬೋಟನ್ನು ಹುಡುಕಲು ತಡವಾದ ಕಾರಣ ಸಾವಿನ ಸಂಖ್ಯೆ ಹೆಚ್ಚಾಯಿತು ಎಂದು ವಿಶ್ಲೇಷಣೆ ಮಾಡಲಾಗಿದೆ.
ನೈಜೀರಿಯಾ ಭಾಗದಲ್ಲಿ ಸಮರ್ಪಕ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಜನರು ಹೆಚ್ಚಾಗಿ ಜಲ ಸಾರಿಗೆಯನ್ನು ಬಳಸುತ್ತಿದ್ದು, ಹೀಗಾಗಿ ಅಲ್ಲಿ ಬೋಟ್ ಅಪಘಾತಗಳು ಸಾಮಾನ್ಯವಾಗುತ್ತಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…