ಜನ ಮನದ ನಾಡಿ ಮಿಡಿತ

Advertisement

ಕರ್ಣಾಟಕ ಬ್ಯಾಂಕ್​ನಿಂದ ಗುಡ್​ನ್ಯೂಸ್; ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ದೇಶದ್ಯಾಂತ ಇರುವ ಬ್ರ್ಯಾಂಚ್​ಗಳಲ್ಲಿ​ ಹಲವು ಉನ್ನತ ಹುದ್ದೆಗಳನ್ನು ಕರ್ಣಾಟಕ ಬ್ಯಾಂಕ್ ಭರ್ತಿ ಮಾಡುತ್ತಿದೆ. ಈ ಸಂಬಂಧ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಈಗಾಗಲೇ ಅರ್ಜಿ ಆರಂಭವಾಗಿವೆ. ಹೀಗಾಗಿ ಅರ್ಹ ಎನಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ಸಂಪೂರ್ಣ ಮಾಹಿತಿ ಅರಿತುಕೊಂಡು ಆನ್​ಲೈನ್ ಮೂಲಕ ಅಪ್ಲೇ ಮಾಡಬಹುದು.

ಬ್ಯಾಂಕ್ ಆಡಿಟಿಂಗ್, ಬ್ಯಾಂಕ್ ಲೀಗಲ್ ಅಡ್ವೈಸರ್ ಸೇರಿದಂತೆ ಹಲವು ಉನ್ನತ ಅಧಿಕಾರಿ ಹುದ್ದೆಗಳನ್ನು ಕರ್ಣಾಟಕ ಬ್ಯಾಂಕ್ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಿದೆ. ಬ್ಯಾಂಕ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಬೆಂಗಳೂರು, ಹೈದರಾಬಾದ್, ಚೆನ್ನೈ, ಕೋಲ್ಕತ್ತಾ, ಮುಂಬೈ, ಮೈಸೂರು, ಪುಣೆ, ಶಿವಮೊಗ್ಗ, ಮಂಗಳೂರು, ಕಲಬುರಗಿ, ಧಾರವಾಡ/ಹುಬ್ಬಳ್ಳಿ, ನವದೆಹಲಿ ಇಲ್ಲಿಯ ಕಚೇರಿಗಳಲ್ಲಿ ಆನ್​ಲೈನ್ ಟೆಸ್ಟ್​ಗಳನ್ನ ನಡೆಸಲಾಗುತ್ತದೆ ಎಂದು ತಿಳಿಸಲಾಗಿದೆ.

ಆನ್​ಲೈನ್​ ಟೆಸ್ಟ್​​ನಲ್ಲಿ ಪಾಸ್ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಮಂಗಳೂರು ಅಥವಾ ಬೇರೆ ಕಚೇರಿಗೆ ಆಹ್ವಾನಿಸಲಾಗುತ್ತದೆ. ಆದರೆ ಈ ವೇಳೆ ಯಾವುದೇ ವಸತಿ, ಪಾವತಿ ಬ್ಯಾಂಕ್ ಮಾಡುವುದಿಲ್ಲ. ಎಲ್ಲ ಖರ್ಚು ನಿಮ್ಮದೆ. ಇನ್ನುಳಿದಂತೆ ಈ ಉದ್ಯೋಗಗಳಿಗೆ ಸಂಬಂಧಿಸಿದ ಇತರೆ ಮಾಹಿತಿ ಈ ಕೆಳಗೆ ನೀಡಲಾಗಿದೆ. ಅರ್ಜಿ ಶುಲ್ಕ, ಯಾರು ಇವುಗಳಿಗೆ ಅಪ್ಲೇ ಮಾಡಬಹುದು, ಕೊನೆ ದಿನಾಂಕ, ಯಾವ ಪದವಿ ಪಡೆದಿರಬೇಕು ಇತ್ಯಾದಿ ಮಾಹಿತಿ ಇಲ್ಲಿದೆ.

ವಿದ್ಯಾರ್ಹತೆ (ಇವುಗಳಲ್ಲಿ ಯಾವುದಾದರೂ ಒಂದು)

  • ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವಿ
  • ಕೃಷಿ ವಿಜ್ಞಾನದಲ್ಲಿ ಪದವಿ
  • ಕಾನೂನು ಪದವಿ (5 ವರ್ಷ ಇಂಟಿಗ್ರೇಟೆಡ್ ಕೋರ್ಸ್)
  • ಸಿಎ, ಸಿಎಸ್, ಸಿಎಂಎಸ್, ಐಸಿಡಬ್ಲುಎ

ಉದ್ಯೋಗದ ಹೆಸರು- ಪ್ರೊಬೇಷನರಿ ಅಧಿಕಾರಿಗಳು (Probationary Officers (Scale-I)

ವಯೋಮಿತಿ
28 ವರ್ಷದ ಒಳಗಿನ ಅಭ್ಯರ್ಥಿಗಳು
ಎಸ್​​ಸಿ, ಎಸ್​ಟಿ- 5 ವರ್ಷಗಳ ಸಡಿಲಿಕೆ ಇದೆ

ಅರ್ಜಿ ಶುಲ್ಕ ಎಷ್ಟು?
ಜನರಲ್, ಒಬಿಸಿ- 800 ರೂಪಾಯಿ
ಎಸ್​​ಸಿ, ಎಸ್​ಟಿ- 700 ರೂಪಾಯಿ

ವೇತನ ಶ್ರೇಣಿ
48,480 ದಿಂದ 85,920 ರೂಪಾಯಿಗಳು

ದಿನಾಂಕಗಳನ್ನು ನೆನಪಿಡಿ

  • ನೋಟಿಫಿಕೇಶನ್ ರಿಲೀಸ್ ದಿನ- 30 ನವೆಂಬರ್ 2024
  • ಅರ್ಜಿ ಸಲ್ಲಿಕೆಯ ಕೊನೆ ದಿನ- 10 ಡಿಸೆಂಬರ್ 2024
  • ಪರೀಕ್ಷೆ ನಡೆಸುವ ದಿನ (ಸಾಧ್ಯತೆ ಇದೆ)- 22 ಡಿಸೆಂಬರ್ 2024

ಸಾಮಾನ್ಯ ಪರೀಕ್ಷೆಯಲ್ಲಿ ಕಂಪ್ಯೂಟರ್​ಗೆ ಸಂಬಂಧಿಸಿದ ಪ್ರಶ್ನೆಗಳು, ಇಂಗ್ಲಿಷ್ ಭಾಷೆ, ಬ್ಯಾಂಕಿಂಗ್, ಕರೆಂಟ್ ಅಫೈರ್ಸ್, ತಾರ್ಕಿಕ (Reasoning), ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ಇಂಗ್ಲಿಷ್​​ನಲ್ಲಿ ಪ್ರಬಂಧ ಸೇರಿ ಒಟ್ಟು 150 ನಿಮಿಷದಲ್ಲಿ 202 ಪ್ರಶ್ನೆಗಳಿಗೆ 225 ಅಂಕಗಳಿಗೆ ಆನ್​ಲೈನ್ ಟೆಸ್ಟ್ ಇರುತ್ತದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!