ದೇಶದ್ಯಾಂತ ಇರುವ ಬ್ರ್ಯಾಂಚ್ಗಳಲ್ಲಿ ಹಲವು ಉನ್ನತ ಹುದ್ದೆಗಳನ್ನು ಕರ್ಣಾಟಕ ಬ್ಯಾಂಕ್ ಭರ್ತಿ ಮಾಡುತ್ತಿದೆ. ಈ ಸಂಬಂಧ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಈಗಾಗಲೇ ಅರ್ಜಿ ಆರಂಭವಾಗಿವೆ. ಹೀಗಾಗಿ ಅರ್ಹ ಎನಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ಸಂಪೂರ್ಣ ಮಾಹಿತಿ ಅರಿತುಕೊಂಡು ಆನ್ಲೈನ್ ಮೂಲಕ ಅಪ್ಲೇ ಮಾಡಬಹುದು.
ಬ್ಯಾಂಕ್ ಆಡಿಟಿಂಗ್, ಬ್ಯಾಂಕ್ ಲೀಗಲ್ ಅಡ್ವೈಸರ್ ಸೇರಿದಂತೆ ಹಲವು ಉನ್ನತ ಅಧಿಕಾರಿ ಹುದ್ದೆಗಳನ್ನು ಕರ್ಣಾಟಕ ಬ್ಯಾಂಕ್ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಿದೆ. ಬ್ಯಾಂಕ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಬೆಂಗಳೂರು, ಹೈದರಾಬಾದ್, ಚೆನ್ನೈ, ಕೋಲ್ಕತ್ತಾ, ಮುಂಬೈ, ಮೈಸೂರು, ಪುಣೆ, ಶಿವಮೊಗ್ಗ, ಮಂಗಳೂರು, ಕಲಬುರಗಿ, ಧಾರವಾಡ/ಹುಬ್ಬಳ್ಳಿ, ನವದೆಹಲಿ ಇಲ್ಲಿಯ ಕಚೇರಿಗಳಲ್ಲಿ ಆನ್ಲೈನ್ ಟೆಸ್ಟ್ಗಳನ್ನ ನಡೆಸಲಾಗುತ್ತದೆ ಎಂದು ತಿಳಿಸಲಾಗಿದೆ.
ಆನ್ಲೈನ್ ಟೆಸ್ಟ್ನಲ್ಲಿ ಪಾಸ್ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಮಂಗಳೂರು ಅಥವಾ ಬೇರೆ ಕಚೇರಿಗೆ ಆಹ್ವಾನಿಸಲಾಗುತ್ತದೆ. ಆದರೆ ಈ ವೇಳೆ ಯಾವುದೇ ವಸತಿ, ಪಾವತಿ ಬ್ಯಾಂಕ್ ಮಾಡುವುದಿಲ್ಲ. ಎಲ್ಲ ಖರ್ಚು ನಿಮ್ಮದೆ. ಇನ್ನುಳಿದಂತೆ ಈ ಉದ್ಯೋಗಗಳಿಗೆ ಸಂಬಂಧಿಸಿದ ಇತರೆ ಮಾಹಿತಿ ಈ ಕೆಳಗೆ ನೀಡಲಾಗಿದೆ. ಅರ್ಜಿ ಶುಲ್ಕ, ಯಾರು ಇವುಗಳಿಗೆ ಅಪ್ಲೇ ಮಾಡಬಹುದು, ಕೊನೆ ದಿನಾಂಕ, ಯಾವ ಪದವಿ ಪಡೆದಿರಬೇಕು ಇತ್ಯಾದಿ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ (ಇವುಗಳಲ್ಲಿ ಯಾವುದಾದರೂ ಒಂದು)
ಉದ್ಯೋಗದ ಹೆಸರು- ಪ್ರೊಬೇಷನರಿ ಅಧಿಕಾರಿಗಳು (Probationary Officers (Scale-I)
ವಯೋಮಿತಿ
28 ವರ್ಷದ ಒಳಗಿನ ಅಭ್ಯರ್ಥಿಗಳು
ಎಸ್ಸಿ, ಎಸ್ಟಿ- 5 ವರ್ಷಗಳ ಸಡಿಲಿಕೆ ಇದೆ
ಅರ್ಜಿ ಶುಲ್ಕ ಎಷ್ಟು?
ಜನರಲ್, ಒಬಿಸಿ- 800 ರೂಪಾಯಿ
ಎಸ್ಸಿ, ಎಸ್ಟಿ- 700 ರೂಪಾಯಿ
ವೇತನ ಶ್ರೇಣಿ
48,480 ದಿಂದ 85,920 ರೂಪಾಯಿಗಳು
ದಿನಾಂಕಗಳನ್ನು ನೆನಪಿಡಿ
ಸಾಮಾನ್ಯ ಪರೀಕ್ಷೆಯಲ್ಲಿ ಕಂಪ್ಯೂಟರ್ಗೆ ಸಂಬಂಧಿಸಿದ ಪ್ರಶ್ನೆಗಳು, ಇಂಗ್ಲಿಷ್ ಭಾಷೆ, ಬ್ಯಾಂಕಿಂಗ್, ಕರೆಂಟ್ ಅಫೈರ್ಸ್, ತಾರ್ಕಿಕ (Reasoning), ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ಇಂಗ್ಲಿಷ್ನಲ್ಲಿ ಪ್ರಬಂಧ ಸೇರಿ ಒಟ್ಟು 150 ನಿಮಿಷದಲ್ಲಿ 202 ಪ್ರಶ್ನೆಗಳಿಗೆ 225 ಅಂಕಗಳಿಗೆ ಆನ್ಲೈನ್ ಟೆಸ್ಟ್ ಇರುತ್ತದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…