ದೇಶದ್ಯಾಂತ ಇರುವ ಬ್ರ್ಯಾಂಚ್ಗಳಲ್ಲಿ ಹಲವು ಉನ್ನತ ಹುದ್ದೆಗಳನ್ನು ಕರ್ಣಾಟಕ ಬ್ಯಾಂಕ್ ಭರ್ತಿ ಮಾಡುತ್ತಿದೆ. ಈ ಸಂಬಂಧ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಈಗಾಗಲೇ ಅರ್ಜಿ ಆರಂಭವಾಗಿವೆ. ಹೀಗಾಗಿ ಅರ್ಹ ಎನಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ಸಂಪೂರ್ಣ ಮಾಹಿತಿ ಅರಿತುಕೊಂಡು ಆನ್ಲೈನ್ ಮೂಲಕ ಅಪ್ಲೇ ಮಾಡಬಹುದು.
ಬ್ಯಾಂಕ್ ಆಡಿಟಿಂಗ್, ಬ್ಯಾಂಕ್ ಲೀಗಲ್ ಅಡ್ವೈಸರ್ ಸೇರಿದಂತೆ ಹಲವು ಉನ್ನತ ಅಧಿಕಾರಿ ಹುದ್ದೆಗಳನ್ನು ಕರ್ಣಾಟಕ ಬ್ಯಾಂಕ್ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಿದೆ. ಬ್ಯಾಂಕ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಬೆಂಗಳೂರು, ಹೈದರಾಬಾದ್, ಚೆನ್ನೈ, ಕೋಲ್ಕತ್ತಾ, ಮುಂಬೈ, ಮೈಸೂರು, ಪುಣೆ, ಶಿವಮೊಗ್ಗ, ಮಂಗಳೂರು, ಕಲಬುರಗಿ, ಧಾರವಾಡ/ಹುಬ್ಬಳ್ಳಿ, ನವದೆಹಲಿ ಇಲ್ಲಿಯ ಕಚೇರಿಗಳಲ್ಲಿ ಆನ್ಲೈನ್ ಟೆಸ್ಟ್ಗಳನ್ನ ನಡೆಸಲಾಗುತ್ತದೆ ಎಂದು ತಿಳಿಸಲಾಗಿದೆ.
ಆನ್ಲೈನ್ ಟೆಸ್ಟ್ನಲ್ಲಿ ಪಾಸ್ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಮಂಗಳೂರು ಅಥವಾ ಬೇರೆ ಕಚೇರಿಗೆ ಆಹ್ವಾನಿಸಲಾಗುತ್ತದೆ. ಆದರೆ ಈ ವೇಳೆ ಯಾವುದೇ ವಸತಿ, ಪಾವತಿ ಬ್ಯಾಂಕ್ ಮಾಡುವುದಿಲ್ಲ. ಎಲ್ಲ ಖರ್ಚು ನಿಮ್ಮದೆ. ಇನ್ನುಳಿದಂತೆ ಈ ಉದ್ಯೋಗಗಳಿಗೆ ಸಂಬಂಧಿಸಿದ ಇತರೆ ಮಾಹಿತಿ ಈ ಕೆಳಗೆ ನೀಡಲಾಗಿದೆ. ಅರ್ಜಿ ಶುಲ್ಕ, ಯಾರು ಇವುಗಳಿಗೆ ಅಪ್ಲೇ ಮಾಡಬಹುದು, ಕೊನೆ ದಿನಾಂಕ, ಯಾವ ಪದವಿ ಪಡೆದಿರಬೇಕು ಇತ್ಯಾದಿ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ (ಇವುಗಳಲ್ಲಿ ಯಾವುದಾದರೂ ಒಂದು)
ಉದ್ಯೋಗದ ಹೆಸರು- ಪ್ರೊಬೇಷನರಿ ಅಧಿಕಾರಿಗಳು (Probationary Officers (Scale-I)
ವಯೋಮಿತಿ
28 ವರ್ಷದ ಒಳಗಿನ ಅಭ್ಯರ್ಥಿಗಳು
ಎಸ್ಸಿ, ಎಸ್ಟಿ- 5 ವರ್ಷಗಳ ಸಡಿಲಿಕೆ ಇದೆ
ಅರ್ಜಿ ಶುಲ್ಕ ಎಷ್ಟು?
ಜನರಲ್, ಒಬಿಸಿ- 800 ರೂಪಾಯಿ
ಎಸ್ಸಿ, ಎಸ್ಟಿ- 700 ರೂಪಾಯಿ
ವೇತನ ಶ್ರೇಣಿ
48,480 ದಿಂದ 85,920 ರೂಪಾಯಿಗಳು
ದಿನಾಂಕಗಳನ್ನು ನೆನಪಿಡಿ
ಸಾಮಾನ್ಯ ಪರೀಕ್ಷೆಯಲ್ಲಿ ಕಂಪ್ಯೂಟರ್ಗೆ ಸಂಬಂಧಿಸಿದ ಪ್ರಶ್ನೆಗಳು, ಇಂಗ್ಲಿಷ್ ಭಾಷೆ, ಬ್ಯಾಂಕಿಂಗ್, ಕರೆಂಟ್ ಅಫೈರ್ಸ್, ತಾರ್ಕಿಕ (Reasoning), ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ಇಂಗ್ಲಿಷ್ನಲ್ಲಿ ಪ್ರಬಂಧ ಸೇರಿ ಒಟ್ಟು 150 ನಿಮಿಷದಲ್ಲಿ 202 ಪ್ರಶ್ನೆಗಳಿಗೆ 225 ಅಂಕಗಳಿಗೆ ಆನ್ಲೈನ್ ಟೆಸ್ಟ್ ಇರುತ್ತದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…