ದೇಶದ್ಯಾಂತ ಇರುವ ಬ್ರ್ಯಾಂಚ್ಗಳಲ್ಲಿ ಹಲವು ಉನ್ನತ ಹುದ್ದೆಗಳನ್ನು ಕರ್ಣಾಟಕ ಬ್ಯಾಂಕ್ ಭರ್ತಿ ಮಾಡುತ್ತಿದೆ. ಈ ಸಂಬಂಧ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಈಗಾಗಲೇ ಅರ್ಜಿ ಆರಂಭವಾಗಿವೆ. ಹೀಗಾಗಿ ಅರ್ಹ ಎನಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ಸಂಪೂರ್ಣ ಮಾಹಿತಿ ಅರಿತುಕೊಂಡು ಆನ್ಲೈನ್ ಮೂಲಕ ಅಪ್ಲೇ ಮಾಡಬಹುದು.
ಬ್ಯಾಂಕ್ ಆಡಿಟಿಂಗ್, ಬ್ಯಾಂಕ್ ಲೀಗಲ್ ಅಡ್ವೈಸರ್ ಸೇರಿದಂತೆ ಹಲವು ಉನ್ನತ ಅಧಿಕಾರಿ ಹುದ್ದೆಗಳನ್ನು ಕರ್ಣಾಟಕ ಬ್ಯಾಂಕ್ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಿದೆ. ಬ್ಯಾಂಕ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಬೆಂಗಳೂರು, ಹೈದರಾಬಾದ್, ಚೆನ್ನೈ, ಕೋಲ್ಕತ್ತಾ, ಮುಂಬೈ, ಮೈಸೂರು, ಪುಣೆ, ಶಿವಮೊಗ್ಗ, ಮಂಗಳೂರು, ಕಲಬುರಗಿ, ಧಾರವಾಡ/ಹುಬ್ಬಳ್ಳಿ, ನವದೆಹಲಿ ಇಲ್ಲಿಯ ಕಚೇರಿಗಳಲ್ಲಿ ಆನ್ಲೈನ್ ಟೆಸ್ಟ್ಗಳನ್ನ ನಡೆಸಲಾಗುತ್ತದೆ ಎಂದು ತಿಳಿಸಲಾಗಿದೆ.
ಆನ್ಲೈನ್ ಟೆಸ್ಟ್ನಲ್ಲಿ ಪಾಸ್ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಮಂಗಳೂರು ಅಥವಾ ಬೇರೆ ಕಚೇರಿಗೆ ಆಹ್ವಾನಿಸಲಾಗುತ್ತದೆ. ಆದರೆ ಈ ವೇಳೆ ಯಾವುದೇ ವಸತಿ, ಪಾವತಿ ಬ್ಯಾಂಕ್ ಮಾಡುವುದಿಲ್ಲ. ಎಲ್ಲ ಖರ್ಚು ನಿಮ್ಮದೆ. ಇನ್ನುಳಿದಂತೆ ಈ ಉದ್ಯೋಗಗಳಿಗೆ ಸಂಬಂಧಿಸಿದ ಇತರೆ ಮಾಹಿತಿ ಈ ಕೆಳಗೆ ನೀಡಲಾಗಿದೆ. ಅರ್ಜಿ ಶುಲ್ಕ, ಯಾರು ಇವುಗಳಿಗೆ ಅಪ್ಲೇ ಮಾಡಬಹುದು, ಕೊನೆ ದಿನಾಂಕ, ಯಾವ ಪದವಿ ಪಡೆದಿರಬೇಕು ಇತ್ಯಾದಿ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ (ಇವುಗಳಲ್ಲಿ ಯಾವುದಾದರೂ ಒಂದು)
ಉದ್ಯೋಗದ ಹೆಸರು- ಪ್ರೊಬೇಷನರಿ ಅಧಿಕಾರಿಗಳು (Probationary Officers (Scale-I)
ವಯೋಮಿತಿ
28 ವರ್ಷದ ಒಳಗಿನ ಅಭ್ಯರ್ಥಿಗಳು
ಎಸ್ಸಿ, ಎಸ್ಟಿ- 5 ವರ್ಷಗಳ ಸಡಿಲಿಕೆ ಇದೆ
ಅರ್ಜಿ ಶುಲ್ಕ ಎಷ್ಟು?
ಜನರಲ್, ಒಬಿಸಿ- 800 ರೂಪಾಯಿ
ಎಸ್ಸಿ, ಎಸ್ಟಿ- 700 ರೂಪಾಯಿ
ವೇತನ ಶ್ರೇಣಿ
48,480 ದಿಂದ 85,920 ರೂಪಾಯಿಗಳು
ದಿನಾಂಕಗಳನ್ನು ನೆನಪಿಡಿ
ಸಾಮಾನ್ಯ ಪರೀಕ್ಷೆಯಲ್ಲಿ ಕಂಪ್ಯೂಟರ್ಗೆ ಸಂಬಂಧಿಸಿದ ಪ್ರಶ್ನೆಗಳು, ಇಂಗ್ಲಿಷ್ ಭಾಷೆ, ಬ್ಯಾಂಕಿಂಗ್, ಕರೆಂಟ್ ಅಫೈರ್ಸ್, ತಾರ್ಕಿಕ (Reasoning), ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ಇಂಗ್ಲಿಷ್ನಲ್ಲಿ ಪ್ರಬಂಧ ಸೇರಿ ಒಟ್ಟು 150 ನಿಮಿಷದಲ್ಲಿ 202 ಪ್ರಶ್ನೆಗಳಿಗೆ 225 ಅಂಕಗಳಿಗೆ ಆನ್ಲೈನ್ ಟೆಸ್ಟ್ ಇರುತ್ತದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…