ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಾಧು ಸಂತರು ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರದ ನಿಲುವಿನ ವಿರುದ್ಧ ಮಾತನಾಡುವವರ ಮೇಲೆ ಕೇಸ್ ದಾಖಲಾಗುತ್ತೆ. ಚಂದ್ರಶೇಖರ ಸ್ವಾಮೀಜಿ ಭಾಷಣದಲ್ಲಿ ಹೇಳಿದ್ದ ತುಣುಕು ಇಟ್ಟುಕೊಂಡು ಕೇಸ್ ಹಾಕಲಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಚಂದ್ರಶೇಖರ ಸ್ವಾಮೀಜಿ ವಿರುದ್ಧ ಕೇಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ತನ್ನ ನೆಲುವಿನಿಂದ ಹೊರಬಂದು ಸಾಧು ಸಂತರಿಗೆ ಗೌರವ ಕೊಡಬೇಕು ಎಂದರು.
ಆಯೋಗಗಳು ಬಂದು ನಕ್ಸಲ್ ಎನ್ಕೌಂಟರ್ ತಪ್ಪು ಅನ್ನುತ್ತದೆ. ನಕ್ಸಲ್ ಪರವಾಗಿ ಮಾತನಾಡುವವರ ಬಗ್ಗೆ ಸರ್ಕಾರ ಮೃದು ಧೋರಣೆ ತಾಳುತ್ತದೆ. ಹೇಳಿಕೆ ಕೊಟ್ಟರೆ ಹಿಂದು ಕಾರ್ಯಕರ್ತರ ಮೇಲೆ ಸುಮೋಟೋ ಕೇಸ್ ಮಾಡುತ್ತಾರೆ. ನಕ್ಸಲರು ಬಂದು ಎನ್ಕೌಂಟರ್ ತಪ್ಪು ಎಂದರೆ ಸರ್ಕಾರ ಅದನ್ನು ಪೋಷಿಸುತ್ತದೆ. ನಿಯೋಗಗಳನ್ನು ಪೊಲೀಸ್ ಭದ್ರತೆಯಲ್ಲಿ ಕರೆದುಕೊಂಡು ಹೋಗುತ್ತಾರೆ. ನಗರ ನಕ್ಸಲರು ಅಂತ ಯಾರನ್ನು ಕರೆಯುವುದು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಬಾಂಗ್ಲಾದೇಶ ಇಸ್ಕಾನ್ ಮುಖ್ಯಸ್ಥರ ಮೇಲೆ ದೌರ್ಜನ್ಯ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಇಸ್ಕಾನ್ ಬಾಂಗ್ಲಾ ವನ್ನು ಬಂದ್ ಮಾಡಲು ಹೊರಟಿದ್ದಾರೆ. ಬಾಂಗ್ಲಾದ ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಬಾಂಗ್ಲಾದ ಹಿಂದುಗಳಿಗೆ ನೈತಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಡಿಸೆಂಬರ್ 4 ಮತ್ತು 5 ರಾಜ್ಯ ವ್ಯಾಪಿ ಪ್ರತಿಭಟನೆ ಮಾಡಲು ನಿರ್ಧಾರ ಮಾಡಲಾಗಿದೆ. ಡಿಸೆಂಬರ್ ನಾಲ್ಕರಂದು ಉಡುಪಿ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಸಾವಿರಾರು ಹಿಂದುಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಬೇಕು ಎಂದು ನಾನು ಕರೆ ಕೊಡುತ್ತೇನೆ ಎಂದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…