ಜನ ಮನದ ನಾಡಿ ಮಿಡಿತ

Advertisement

ಪ್ರೊಬೇಷನರಿ ಐಪಿಎಸ್ ಅಧಿಕಾರಿಯ ಶ್ರಮ ಫಲಿಸುವ ಹೊತ್ತಲ್ಲಿ ಬಂದ ಜವರಾಯ

ಪ್ರೊಬೇಷನರಿ ಐಪಿಎಸ್ ಅಧಿಕಾರಿಯ ಶ್ರಮ ಫಲಿಸುವ ಹೊತ್ತಲ್ಲಿ ಬಂದ ಜವರಾಯ


ಹಾಸನ : ಹಾಸನ-ಮೈಸೂರು ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಕಿತ್ತಾನಿ ಗಡಿ ಬಳಿ ನಡೆದಿದೆ.
ಐಪಿಎಸ್ ಅಧಿಕಾರಿಯನ್ನು ಹರ್ಷಬರ್ಧನ್ ಎಂದು ಗುರ್ತಿಸಲಾಗಿದ್ದು, ಮಧ್ಯ ಪ್ರದೇಶದ ಸಿಂಗ್ರುಲಿ ಜಿಲ್ಲೆಯ ದೋಸಾರ್ ಗ್ರಾಮದವರು ಎಂದು ತಿಳಿದು ಬಂದಿದೆ. ಇವರು ಪ್ರೊಬೇಷನರಿ ಎಎಸ್ಪಿಯಾಗಿ ಮೊದಲ ದಿನ ಕರ್ತವ್ಯಕ್ಕೆ ಹಾಜರಾಗಲು ಹಾಸನಕ್ಕೆ ತೆರಳುವ ವೇಳೆ ಘಟನೆ ನಡೆದಿದ್ದು, ಜನರಲ್ಲಿ ಬೇಸರ ಮೂಡಿಸಿದೆ. ದಾರಿ ಮಧ್ಯೆ ಕಿತ್ತಾಡಿ ಗಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ವಾಹನ ರಸ್ತೆ ಪಕ್ಕದ ಮನೆಗೆ ಡಿಕ್ಕಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಎಎಸ್ಪಿ ಭಾನುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಾಲಕ ಕಾನ್ಸ್ಟೇಬಲ್ ಮಂಜೇಗೌಡರಿಗೂ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯ ಮಂತ್ರಿ ಸೇರಿ ಹಲವು ಗಣ್ಯರ ಸಂತಾಪ
ಈ ದುರ್ಘಟನೆಯ ಸುದ್ದಿ ತಿಳಿದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿ ‘ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ‌ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು. ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು.’ ಎಂದು ಎಕ್ಸ್ ನಲ್ಲಿ ಪೋಸ್ಟ್ ಹಂಚಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!