ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಪರ್ಲಡ್ಕದ ಯುವಕ ನಾಪತ್ತೆ-ಪುತ್ತೂರು ನಗರ ಠಾಣೆಯಲ್ಲಿ ದೂರು.

ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಡಿ.1ರಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ. ಬಿಬಿಎ ಪದವಿ ಪಡೆದಿರುವ ಲೋಕೇಂದರ್ ಸಿಂಗ್ ಕಳೆದ ಎರಡು ತಿಂಗಳ ಹಿಂದೆ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದ. ನ.30ರಂದು ಎಂದಿನಂತೆ ಮನೆಯಲ್ಲಿ ಊಟ ಮಾಡಿ ಟಿವಿ ನೋಡಿಕೊಂಡಿದ್ದ. ಬೆಳಿಗ್ಗೆ ನೋಡುವಾಗ ಆತ ಮನೆಯಲ್ಲಿಲ್ಲದೆ ನಾಪತ್ತೆಯಾಗಿದ್ದಾನೆ. ಆತನ ಉಡುಪುಗಳು ತುಂಬಿದ್ದ ಬ್ಯಾಗ್‌, ದಾಖಲೆ ಪತ್ರಗಳು ಹಾಗೂ ಪಾಸ್‌ಪೋರ್ಟ್‌ ಸಹಿತ ಆತ ನಾಪತ್ತೆಯಾಗಿದ್ದಾನೆ. ಮೊಬೈಲ್ ಸ್ವಿಚ್ ಆಫ್ ಆಗಿದೆ. ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ಲೋಕೇಂದರ್ ಸಿಂಗ್ ತಂದೆ ರತನ್ ಸಿಂಗ್ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ಯುವಕ ಸುಮಾರು 6 ಅಡಿ ಉದ್ದ, ಗೋದಿ ಮೈಬಣ್ಣ, ಉದ್ದನೆಯ ಕೂದಲು, ಗಡ್ಡಮೀಸೆ ಹೊಂದಿದ್ದು ಕನ್ನಡಕ ಧರಿಸಿರುತ್ತಾನೆ. ಕನ್ನಡ, ಹಿಂದಿ, ಇಂಗ್ಲಿಷ್, ಮಾರ್ವಾಡಿ ಭಾಷೆ ಬಲ್ಲವನಾಗಿದ್ದು ಆತನ ಗುರುತು ಪತ್ತೆಯಾದಲ್ಲಿ ನಗರ ಠಾಣೆಗೆ ಮಾಹಿತಿ ನೀಡುಂತೆ ಪೊಲೀಸ್‌ ಠಾಣೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!