ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಡಿ.1ರಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ. ಬಿಬಿಎ ಪದವಿ ಪಡೆದಿರುವ ಲೋಕೇಂದರ್ ಸಿಂಗ್ ಕಳೆದ ಎರಡು ತಿಂಗಳ ಹಿಂದೆ ಪಾಸ್ಪೋರ್ಟ್ ಮಾಡಿಸಿಕೊಂಡಿದ್ದ. ನ.30ರಂದು ಎಂದಿನಂತೆ ಮನೆಯಲ್ಲಿ ಊಟ ಮಾಡಿ ಟಿವಿ ನೋಡಿಕೊಂಡಿದ್ದ. ಬೆಳಿಗ್ಗೆ ನೋಡುವಾಗ ಆತ ಮನೆಯಲ್ಲಿಲ್ಲದೆ ನಾಪತ್ತೆಯಾಗಿದ್ದಾನೆ. ಆತನ ಉಡುಪುಗಳು ತುಂಬಿದ್ದ ಬ್ಯಾಗ್, ದಾಖಲೆ ಪತ್ರಗಳು ಹಾಗೂ ಪಾಸ್ಪೋರ್ಟ್ ಸಹಿತ ಆತ ನಾಪತ್ತೆಯಾಗಿದ್ದಾನೆ. ಮೊಬೈಲ್ ಸ್ವಿಚ್ ಆಫ್ ಆಗಿದೆ. ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ಲೋಕೇಂದರ್ ಸಿಂಗ್ ತಂದೆ ರತನ್ ಸಿಂಗ್ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವಕ ಸುಮಾರು 6 ಅಡಿ ಉದ್ದ, ಗೋದಿ ಮೈಬಣ್ಣ, ಉದ್ದನೆಯ ಕೂದಲು, ಗಡ್ಡಮೀಸೆ ಹೊಂದಿದ್ದು ಕನ್ನಡಕ ಧರಿಸಿರುತ್ತಾನೆ. ಕನ್ನಡ, ಹಿಂದಿ, ಇಂಗ್ಲಿಷ್, ಮಾರ್ವಾಡಿ ಭಾಷೆ ಬಲ್ಲವನಾಗಿದ್ದು ಆತನ ಗುರುತು ಪತ್ತೆಯಾದಲ್ಲಿ ನಗರ ಠಾಣೆಗೆ ಮಾಹಿತಿ ನೀಡುಂತೆ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…