ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ರಾಜ್ಯದ ಎಲ್ಲಾ ಜನತೆಗಾಗಿ ಐದು ಗ್ಯಾರಂಟಿಗಳನ್ನು ತಂದಿದೆ. ಇವುಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಶಕ್ತಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಉಚಿತವಾಗಿ ಸರಕಾರಿ ಬಸ್ಸಿನಲ್ಲಿ ತೆರಳುವ ಬಿಜೆಪಿಯವರು ಬಸ್ಸಿನಿಂದ ಇಳಿದು ಶಕ್ತಿ ಯೋಜನೆಯೇ ಸರಿಯಿಲ್ಲ ಇದರಿಂದ ಕೆಎಸ್ಆರ್ಟಿಸಿ ದಿವಾಳಿಯಾಗಲಿದೆ ಎಂದು ದೂಷಣೆ ಮಾಡುತ್ತಾರೆ, ದಿವಾಳಿಯಾಗುವ ಭಯ ಬಿಜೆಪಿಗರಿಗೆ ಇದ್ದಲ್ಲಿ ಟಿಕೆಟ್ ಪಡೆದು ಪ್ರಯಾಣಿಸಲಿ ನಮ್ಮದೇನು ಅಭ್ಯಂಥರವಿಲ್ಲ ಎಂದು ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ ಹೇಳಿದರು. ಕಾವಿನಲ್ಲಿ ಸೇವಾ ಸಿಂಧು ನೋಂದಣಿ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಐದು ಗ್ಯಾರಂಟಿಗಳನ್ನು ಬಡವರಿಗಾಗಿ ಕಾಂಗ್ರೆಸ್ ಜಾರಿಗೆ ತಂದಿದೆ. ಇಷ್ಟವಿದ್ದವರು ಪಡೆದುಕೊಳ್ಳಬಹುದು ಬೇಡವಾದವರು ಬಿಡಬಹುದು. ಯೋಜನೆಯ ಹೆಸರಿನಲ್ಲಿ ಬಡವರನ್ನು ಹಿಯಾಳಿಸುವ ಕೆಲಸವನ್ನು ಬಿಜೆಪಿ ನಿಲ್ಲಿಸಬೇಕು, ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು. ಸರಕರದ ಐದು ಗ್ಯಾರಂಟಿಯನ್ನು ಕರ್ನಾಟಕದ ಜನತೆ ಸ್ವಾಗತಿಸಿದ್ದಾರೆ. ಜನತೆಯ ಸ್ವಾಗತಕ್ಕೆ ಬಿಜೆಪಿ ಬೆಚ್ಚಿ ಬಿದ್ದಿದೆ, ಕಳೆದ ಐದು ವರ್ಷದಲ್ಲಿ ಭೃಷ್ಟ ಆಡಳಿತ ನಡೆಸಿದ ಬಿಜೆಪಿಗೆ ಈ ಬರಿ ಜನ ತಕ್ಕ ಪಾಠ ಕಲಿಸಿಯೂ ಅವರಿಗೆ ಬುದ್ದಿ ಬಂದಿಲ್ಲ ಎಂದು ಹೇಳಿದ ಅವರು ಗ್ಯಾರಂಟಿ ಯೋಜನೆ ಕಾಂಗ್ರೆಸ್ ಯೋಜನೆಯಾಗಿದೆ ನೀವು ಇಷ್ಟವಿದ್ದಲ್ಲಿ ಸ್ವೀಕರಿಸಿ ಇಲ್ಲವಾದಲ್ಲಿ ಮೌನವಾಗಿರಿ ಎಂದು ಬಿಜೆಪಿಗರಿಗೆ ಮಾತಿನ ಮೂಲಕ ತಿವಿದಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…