ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ರಾಜ್ಯದ ಎಲ್ಲಾ ಜನತೆಗಾಗಿ ಐದು ಗ್ಯಾರಂಟಿಗಳನ್ನು ತಂದಿದೆ. ಇವುಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಶಕ್ತಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಉಚಿತವಾಗಿ ಸರಕಾರಿ ಬಸ್ಸಿನಲ್ಲಿ ತೆರಳುವ ಬಿಜೆಪಿಯವರು ಬಸ್ಸಿನಿಂದ ಇಳಿದು ಶಕ್ತಿ ಯೋಜನೆಯೇ ಸರಿಯಿಲ್ಲ ಇದರಿಂದ ಕೆಎಸ್ಆರ್ಟಿಸಿ ದಿವಾಳಿಯಾಗಲಿದೆ ಎಂದು ದೂಷಣೆ ಮಾಡುತ್ತಾರೆ, ದಿವಾಳಿಯಾಗುವ ಭಯ ಬಿಜೆಪಿಗರಿಗೆ ಇದ್ದಲ್ಲಿ ಟಿಕೆಟ್ ಪಡೆದು ಪ್ರಯಾಣಿಸಲಿ ನಮ್ಮದೇನು ಅಭ್ಯಂಥರವಿಲ್ಲ ಎಂದು ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ ಹೇಳಿದರು. ಕಾವಿನಲ್ಲಿ ಸೇವಾ ಸಿಂಧು ನೋಂದಣಿ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಐದು ಗ್ಯಾರಂಟಿಗಳನ್ನು ಬಡವರಿಗಾಗಿ ಕಾಂಗ್ರೆಸ್ ಜಾರಿಗೆ ತಂದಿದೆ. ಇಷ್ಟವಿದ್ದವರು ಪಡೆದುಕೊಳ್ಳಬಹುದು ಬೇಡವಾದವರು ಬಿಡಬಹುದು. ಯೋಜನೆಯ ಹೆಸರಿನಲ್ಲಿ ಬಡವರನ್ನು ಹಿಯಾಳಿಸುವ ಕೆಲಸವನ್ನು ಬಿಜೆಪಿ ನಿಲ್ಲಿಸಬೇಕು, ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು. ಸರಕರದ ಐದು ಗ್ಯಾರಂಟಿಯನ್ನು ಕರ್ನಾಟಕದ ಜನತೆ ಸ್ವಾಗತಿಸಿದ್ದಾರೆ. ಜನತೆಯ ಸ್ವಾಗತಕ್ಕೆ ಬಿಜೆಪಿ ಬೆಚ್ಚಿ ಬಿದ್ದಿದೆ, ಕಳೆದ ಐದು ವರ್ಷದಲ್ಲಿ ಭೃಷ್ಟ ಆಡಳಿತ ನಡೆಸಿದ ಬಿಜೆಪಿಗೆ ಈ ಬರಿ ಜನ ತಕ್ಕ ಪಾಠ ಕಲಿಸಿಯೂ ಅವರಿಗೆ ಬುದ್ದಿ ಬಂದಿಲ್ಲ ಎಂದು ಹೇಳಿದ ಅವರು ಗ್ಯಾರಂಟಿ ಯೋಜನೆ ಕಾಂಗ್ರೆಸ್ ಯೋಜನೆಯಾಗಿದೆ ನೀವು ಇಷ್ಟವಿದ್ದಲ್ಲಿ ಸ್ವೀಕರಿಸಿ ಇಲ್ಲವಾದಲ್ಲಿ ಮೌನವಾಗಿರಿ ಎಂದು ಬಿಜೆಪಿಗರಿಗೆ ಮಾತಿನ ಮೂಲಕ ತಿವಿದಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…