ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ರಾಜ್ಯದ ಎಲ್ಲಾ ಜನತೆಗಾಗಿ ಐದು ಗ್ಯಾರಂಟಿಗಳನ್ನು ತಂದಿದೆ. ಇವುಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಶಕ್ತಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಉಚಿತವಾಗಿ ಸರಕಾರಿ ಬಸ್ಸಿನಲ್ಲಿ ತೆರಳುವ ಬಿಜೆಪಿಯವರು ಬಸ್ಸಿನಿಂದ ಇಳಿದು ಶಕ್ತಿ ಯೋಜನೆಯೇ ಸರಿಯಿಲ್ಲ ಇದರಿಂದ ಕೆಎಸ್ಆರ್ಟಿಸಿ ದಿವಾಳಿಯಾಗಲಿದೆ ಎಂದು ದೂಷಣೆ ಮಾಡುತ್ತಾರೆ, ದಿವಾಳಿಯಾಗುವ ಭಯ ಬಿಜೆಪಿಗರಿಗೆ ಇದ್ದಲ್ಲಿ ಟಿಕೆಟ್ ಪಡೆದು ಪ್ರಯಾಣಿಸಲಿ ನಮ್ಮದೇನು ಅಭ್ಯಂಥರವಿಲ್ಲ ಎಂದು ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ ಹೇಳಿದರು. ಕಾವಿನಲ್ಲಿ ಸೇವಾ ಸಿಂಧು ನೋಂದಣಿ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಐದು ಗ್ಯಾರಂಟಿಗಳನ್ನು ಬಡವರಿಗಾಗಿ ಕಾಂಗ್ರೆಸ್ ಜಾರಿಗೆ ತಂದಿದೆ. ಇಷ್ಟವಿದ್ದವರು ಪಡೆದುಕೊಳ್ಳಬಹುದು ಬೇಡವಾದವರು ಬಿಡಬಹುದು. ಯೋಜನೆಯ ಹೆಸರಿನಲ್ಲಿ ಬಡವರನ್ನು ಹಿಯಾಳಿಸುವ ಕೆಲಸವನ್ನು ಬಿಜೆಪಿ ನಿಲ್ಲಿಸಬೇಕು, ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು. ಸರಕರದ ಐದು ಗ್ಯಾರಂಟಿಯನ್ನು ಕರ್ನಾಟಕದ ಜನತೆ ಸ್ವಾಗತಿಸಿದ್ದಾರೆ. ಜನತೆಯ ಸ್ವಾಗತಕ್ಕೆ ಬಿಜೆಪಿ ಬೆಚ್ಚಿ ಬಿದ್ದಿದೆ, ಕಳೆದ ಐದು ವರ್ಷದಲ್ಲಿ ಭೃಷ್ಟ ಆಡಳಿತ ನಡೆಸಿದ ಬಿಜೆಪಿಗೆ ಈ ಬರಿ ಜನ ತಕ್ಕ ಪಾಠ ಕಲಿಸಿಯೂ ಅವರಿಗೆ ಬುದ್ದಿ ಬಂದಿಲ್ಲ ಎಂದು ಹೇಳಿದ ಅವರು ಗ್ಯಾರಂಟಿ ಯೋಜನೆ ಕಾಂಗ್ರೆಸ್ ಯೋಜನೆಯಾಗಿದೆ ನೀವು ಇಷ್ಟವಿದ್ದಲ್ಲಿ ಸ್ವೀಕರಿಸಿ ಇಲ್ಲವಾದಲ್ಲಿ ಮೌನವಾಗಿರಿ ಎಂದು ಬಿಜೆಪಿಗರಿಗೆ ಮಾತಿನ ಮೂಲಕ ತಿವಿದಿದ್ದಾರೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…