ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೇರೂರಿನಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತರಗತಿ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೆರವೇರಿಸಿದರು.
ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಅವರು, ಶತಮಾನೋತ್ಸವ ಆಚರಣೆಯ ಸಂಭ್ರಮದಲ್ಲಿರುವ ಶಾಲೆಯ ಶಿಕ್ಷಕರು ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳ ಮನವಿಯ ಮೇರೆಗೆ 2 ಕೊಠಡಿಗಳನ್ನು 20 ಲಕ್ಷ ವೆಚ್ಚದಲ್ಲಿ ಶಾಸಕರ ನಿಧಿ ಹಾಗೂ ದಾನಿಗಳ ಸಹಕಾರದಿಂದ ಶೀಘ್ರದಲ್ಲಿ ನಿರ್ಮಾಣಗೊಳ್ಳಲಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿಶೇಷ ಆದ್ಯತೆಯೊಂದಿಗೆ ಸದಾ ಸಹಕಾರ ನೀಡುವ ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶತಮಾನೋತ್ಸವ ಸಂಭ್ರಮದ ವಿಜ್ಞಾಪನೆ ಪತ್ರವನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶತಮಾನೋತ್ಸವ ಸಂಭ್ರಮದ ಅಧ್ಯಕ್ಷರಾದ ಸಂತೋಷ್ ಜತ್ತನ್ , ದಾನಿಗಳಾದ ನ್ಯೂ ಕರ್ನಾಟಕ ಬಿಲ್ಡರ್ಸ್ ನ ಚೇತನ್ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸದಾನಂದ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಮಂಜುಳಾ ಜಯಕರ್, ಹೇರೂರು ಎಜುಕೇಷನ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ದೀಪಾ ಚೇತನ್ ಕುಮಾರ್ ಶೆಟ್ಟಿ, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಚಂದ್ರಕಲಾ , ಶತಮಾನೋತ್ಸವ ಸಂಭ್ರಮದ ಕಾರ್ಯದರ್ಶಿ ಅಶೋಕ್ ಹೇರೂರು, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಶೋಕ್ ಅಮೀನ್, ಗ್ರಾಮ ಪಂಚಾಯತ್ ಸದಸ್ಯರಾದ ಉದಯ ಕಾಮತ್, ಮೀರಾ ಸದಾನಂದ, ಹೇಮ ಅಶೋಕ್, ಆನಂದ ಪೂಜಾರಿ, ಆರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜೀವ್ ಕುಲಾಲ್, ಸಚಿನ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…