ಕರಾವಳಿ

ಪುಸ್ತಕ ಓದುವ ಸಂಸ್ಕೃತಿ​ ಮುಂದುವರಿಯಲಿ​: ಜಿಲ್ಲಾಧಿಕಾರಿ ​ಡಾ .ಕೆ. ವಿದ್ಯಾಕುಮಾರಿ ​

ಉಡುಪಿ: ಡಿಜಿಟಲ್​ ಮಾಧ್ಯಮಗಳಿಂದಾಗಿ ಇಂದು ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗುತ್ತಿದೆ. ಕೈಯಲ್ಲಿ ಪುಸ್ತಕ ಹಿಡಿದು ಓದುವಾಗ ಲಭಿಸುವ ಸಂತಸ ಮೊಬೈಲ್​ ನೋಡಿ ಓದುವಾಗ ಲಭಿಸದು. ಯುವ ಸಮುದಾಯ ಸೇರಿದಂತೆ ಎಲ್ಲ ವಯೋಮಾನದವರೂ ಸಹ ಪುಸ್ತಕ ಓದುವ ಮೂಲಕ ಸಂಸ್ಕೃತಿ ಮುಂದುವರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆಶಯ ವ್ಯಕ್ತಪಡಿಸಿದರು.

 


ಉಡುಪಿ​ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ​ಘಟಕದ ‘ಮನೆಯೇ ಗ್ರಂಥಾಲಯ’ ಅಭಿಯಾನದ 125ನೇ ಕೇಂದ್ರವನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಉದ್ಘಾಟಿಸಿ ಮಾತನಾಡಿ, ಜಿಲ್ಲಾಡಳಿತದಲ್ಲಿ ಎಲ್ಲ ಇಲಾಖೆ ಇರುವುದರಿಂದ ಸದ್ಯ ಸ್ಥಳಾವಕಾಶದ ಕೊರತೆ ಇದೆ. ಮುಂದಿನ ದಿನಗಳಲ್ಲಿ ಗ್ರಂಥಾಲಯಕ್ಕಾಗಿಯೇ ಒಂದು ಕೊಠಡಿ ಮೀಸಲಿಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
​ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್​ ಎಚ್​.ಪಿ. ಸ್ವಾಗತಿಸಿ, ಪ್ರಾಸ್ತಾವಿಕ​ವಾಗಿ ಮಾತನಾಡಿ, ಘಟಕದ ಎಲ್ಲ ಉತ್ಸಾಹಿ ಪದಾಧಿಕಾರಿಗಳ ಸಹಕಾರದಲ್ಲಿ ಕನ್ನಡದ ಸೇವೆಗಾಗಿ​ ಜಿಲ್ಲಾ ಘಟಕದ ಸಹಕಾರದಿಂದ ವಿನೂತನ ಕಾರ್ಯ​ಕ್ರಮ ಆಯೋಜಿಸುತ್ತಿದ್ದೇವೆ.​ ಮಣಿಪಾಲ ರೇಡಿಯೋದಲ್ಲಿ ‘ಕಥೆ ಕೇಳೋಣ’ ಸರಣಿ, ಎಲ್ಲರೂ ಪುಸ್ತಕ ಓದುವಂತಾಗ​ ಬೇಕು ಎಂದು ‘ಮನೆಯೇ ಗ್ರಂಥಾಲಯ’ ಅಭಿಯಾನ ಕೈಗೊಂಡಿದ್ದೇವೆ. ಕನ್ನಡಕ್ಕಾಗಿ ಹಾಗೂ ಕನ್ನಡಾಂಬೆಯ ಸೇವೆಗೆ ಲಭಿಸಿದ ಅವಕಾಶದ ಸದುಪಯೋಗ ಮಾಡುತ್ತಿ​ ದ್ದೇವೆ. ಕನ್ನಡದ ಸಂಸ್ಕೃತಿ ಉಳಿಸಲು ಎಲ್ಲರೂ ಶ್ರಮಿಸೋಣ ಎಂದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಡಿಸಿ ಕಚೇರಿಯ ಗ್ರಂಥಾಲಯಕ್ಕಾಗಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸಿ, ಶುಭ ಕೋರಿದರು. ಅನೇಕ ಸಾಹಿತಿಗಳು ಗ್ರಂಥಾಲಯಕ್ಕೆ ತಮ್ಮ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
​ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರಿಂದ ಪುಸ್ತಕ ಸ್ವೀಕರಿಸುವ ಮೂಲಕ ‘ಮನೆಯೇ ಗ್ರಂಥಾಲಯ’ದ 125ನೇ ಕೇಂದ್ರವನ್ನು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉದ್ಘಾಟಿಸಿದರು. ​
ಈ ಸಂದರ್ಭ ದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ​ಸ್ಥಾಪಕ ಉಡುಪಿ ವಿಶ್ವನಾಥ ಶೆಣ್ಣೆ,​ ಉಡುಪಿ ನಗರ ಗ್ರಂಥಾಲಯದ ಮುಖ್ಯಸ್ಥೆ ನಳಿನಿ, ಕಸಾಪ ಘಟಕದ ಗೌರವ ಕಾರ್ಯದರ್ಶಿ ರಂಜಿನಿ ವಸಂತ್​, ಜಿಲ್ಲಾ ​ಗ್ರಂಥಾಲಯದ ಮುಖ್ಯಸ್ಥೆ ಜಯಶ್ರೀ, ಕಸಾಪ ಜಿಲ್ಲಾ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ, ಕಸಾಪ ಉಡುಪಿ ತಾಲೂಕು ಸಮಿತಿಯ ಪ್ರಚಾರ ಸಮಿತಿಯ ಕಿರಣ್ ಮಂಜನ ಬೈಲು, ಆಸ್ಟ್ರೋ ಮೋಹನ್, ​ಜಾಲತಾಣ ಸಂಚಾಲಕ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ, ಕಥೆ ಕೇಳೋಣ ಸರಣಿ ಸಂಚಾಲಕ ಸತೀಶ್ ಕೊಡವೂರು, ನಾಗರಾಜ್ ಹೆಬ್ಬಾರ್, ವಸಂತ್, ಪ್ರೊ. ಶಂಕರ್, ರಾಮಾಂಜಿ ನಮ್ಮ ಭೂಮಿ, ಶ್ರೀನಿವಾಸ ಉಪಾಧ್ಯ, ದೀಪ ಕರ್ಕಿ , ಪ್ರಭಾಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ವಂದಿಸಿದರು. ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

3 hours ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

3 hours ago

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…

3 hours ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

23 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

1 day ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

1 day ago