ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿಗೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಸರಕಾರಕ್ಕೆ ಶಿಫಾರಸು..!

ಮಂಗಳೂರು: ಉನ್ನತ ಶಿಕ್ಷಣ ಇಲಾಖೆಯ ಯಾವುದೇ ಆದೇಶಗಳನ್ನು ಪಾಲಿಸದೆ “ಅಶಿಸ್ತಿನಿಂದ ನಡೆದುಕೊಳ್ಳುತ್ತಿರುವ” ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿಗೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಸರಕಾರಕ್ಕೆ ಶಿಫಾರಸು ಮಾಡಲಾಗಿದೆ.


ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರಿನ ಪ್ರಾದೇಶಿಕ ಜಂಟಿ ನಿರ್ದೇಶಕರು ಮೇ ದಿನಾಂಕ ೧೭ರಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಸರಕಾರದ ನಿಯಮಗಳನ್ನು ಪಾಲಿಸದಿರುವ ಎಸ್.ವಿ.ಎಸ್. ಕಾಲೇಜಿಗೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಶಿಫಾರಸು ಮಾಡಿ ಕೂಡಲೇ ಕ್ರಮ ವಹಿಸುವಂತೆ ಕೋರಿ ಬರೆದಿರುವ ಪತ್ರ ಮಾಹಿತಿ ಹಕ್ಕು ಅಧಿನಿಯಮದಡಿ ಲಭ್ಯವಾಗಿದೆ.
ಈ ಪತ್ರದಲ್ಲಿ ಜಂಟಿ ನಿರ್ದೇಶಕರು ಕಾಲೇಜು ವಾರ್ಷಿಕ ವೇತನ ತಖ್ತೆ ಅನುಮೋದನೆ ಪಡೆಯದಿರುವುದು, ನಿವೃತ್ತರಿಗೆ ಪಿಂಚಣಿ ಮಂಜೂರಾತಿಗೆ ಸಕಾಲದಲ್ಲಿ ದಾಖಲೆಗಳನ್ನು ಸಲ್ಲಿಸದಿರುವುದು, ಸೇವಾ ಪುಸ್ತಕ ನೀಡದಿರುವ ಬಗ್ಗೆ ಪತ್ರ ಬರೆದರೂ ಉತ್ತರಿಸದಿರುವುದು, ಎ.ಜಿ.ಪಿ ಬಾಕಿ ವೇತನ ಪ್ರಸ್ತಾವನೆ ಬಗ್ಗೆ ಕ್ರಮ ಕೈಗೊಳ್ಳದಿರುವುದು ಎಂಬಿತ್ಯಾದಿ ದೂರುಗಳನ್ನು ಪಟ್ಟಿ ಮಾಡಿದ್ದಾರೆ.


ಕಾಲೇಜು ನಿಗದಿತ ಕರ್ತವ್ಯ ನಿರ್ವಹಿಸಿರುವುದಿಲ್ಲ, ಅಧ್ಯಾಪಕರಿಗೆ ನಿಗದಿತ ಕಾರ್ಯಭಾರ ಇಲ್ಲದಿದ್ದರೂ ೨೦೨೩ರ ಆಗಸ್ಟ್ ನಿಂದ ವೇತನ ಪಾವತಿ ಮಾಡಲು ಕಾರಣರಾಗಿದ್ದಾರೆ ಎಂದು ಪತ್ರದಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಪ್ರಾಂಶುಪಾಲರಿಗೆ ನಿಗದಿತ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರ ಕಚೇರಿಗೆ ಹಾಜರಾಗುವಂತೆ ತಿಳಿಸಿದರೂ ಪ್ರಾಂಶುಪಾಲರು ಹಾಜರಾಗಲು ನಿರಾಕರಿಸಿದ್ದಾರೆ ಎಂದೂ ಜಂಟಿ ನಿರ್ದೇಶಕರು ಇನ್ನೊಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದಲ್ಲದೆ ಪ್ರಾಂಶುಪಾಲರ ಮೇಲೆ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂದು ನೋಟೀಸ್ ನೀಡಿರುವ ಪತ್ರವೂ ಮಾಹಿತಿ ಹಕ್ಕಿನಡಿ ಲಭ್ಯವಾಗಿದೆ.
ಏತನ್ಮಧ್ಯೆ ಕಾಲೇಜಿನ ಭವಿಷ್ಯ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಕಾರಣದಿಂದ ತಕ್ಷಣವೇ ಜಂಟಿ ನಿರ್ದೇಶಕರ ಶಿಫಾರಸು ಅನುಷ್ಠಾನ ಮಾಡಬೇಕು ಎಂದು ವಿದ್ಯಾಸಂಸ್ಥೆಯ ಸ್ಥಾಪಕರಲ್ಲೊಬ್ಬರಾದ ರವಿದಾಸ ಪೈ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!