ಮಂಗಳೂರು: ಉನ್ನತ ಶಿಕ್ಷಣ ಇಲಾಖೆಯ ಯಾವುದೇ ಆದೇಶಗಳನ್ನು ಪಾಲಿಸದೆ “ಅಶಿಸ್ತಿನಿಂದ ನಡೆದುಕೊಳ್ಳುತ್ತಿರುವ” ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿಗೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಸರಕಾರಕ್ಕೆ ಶಿಫಾರಸು ಮಾಡಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರಿನ ಪ್ರಾದೇಶಿಕ ಜಂಟಿ ನಿರ್ದೇಶಕರು ಮೇ ದಿನಾಂಕ ೧೭ರಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಸರಕಾರದ ನಿಯಮಗಳನ್ನು ಪಾಲಿಸದಿರುವ ಎಸ್.ವಿ.ಎಸ್. ಕಾಲೇಜಿಗೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಶಿಫಾರಸು ಮಾಡಿ ಕೂಡಲೇ ಕ್ರಮ ವಹಿಸುವಂತೆ ಕೋರಿ ಬರೆದಿರುವ ಪತ್ರ ಮಾಹಿತಿ ಹಕ್ಕು ಅಧಿನಿಯಮದಡಿ ಲಭ್ಯವಾಗಿದೆ.
ಈ ಪತ್ರದಲ್ಲಿ ಜಂಟಿ ನಿರ್ದೇಶಕರು ಕಾಲೇಜು ವಾರ್ಷಿಕ ವೇತನ ತಖ್ತೆ ಅನುಮೋದನೆ ಪಡೆಯದಿರುವುದು, ನಿವೃತ್ತರಿಗೆ ಪಿಂಚಣಿ ಮಂಜೂರಾತಿಗೆ ಸಕಾಲದಲ್ಲಿ ದಾಖಲೆಗಳನ್ನು ಸಲ್ಲಿಸದಿರುವುದು, ಸೇವಾ ಪುಸ್ತಕ ನೀಡದಿರುವ ಬಗ್ಗೆ ಪತ್ರ ಬರೆದರೂ ಉತ್ತರಿಸದಿರುವುದು, ಎ.ಜಿ.ಪಿ ಬಾಕಿ ವೇತನ ಪ್ರಸ್ತಾವನೆ ಬಗ್ಗೆ ಕ್ರಮ ಕೈಗೊಳ್ಳದಿರುವುದು ಎಂಬಿತ್ಯಾದಿ ದೂರುಗಳನ್ನು ಪಟ್ಟಿ ಮಾಡಿದ್ದಾರೆ.
ಕಾಲೇಜು ನಿಗದಿತ ಕರ್ತವ್ಯ ನಿರ್ವಹಿಸಿರುವುದಿಲ್ಲ, ಅಧ್ಯಾಪಕರಿಗೆ ನಿಗದಿತ ಕಾರ್ಯಭಾರ ಇಲ್ಲದಿದ್ದರೂ ೨೦೨೩ರ ಆಗಸ್ಟ್ ನಿಂದ ವೇತನ ಪಾವತಿ ಮಾಡಲು ಕಾರಣರಾಗಿದ್ದಾರೆ ಎಂದು ಪತ್ರದಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಪ್ರಾಂಶುಪಾಲರಿಗೆ ನಿಗದಿತ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರ ಕಚೇರಿಗೆ ಹಾಜರಾಗುವಂತೆ ತಿಳಿಸಿದರೂ ಪ್ರಾಂಶುಪಾಲರು ಹಾಜರಾಗಲು ನಿರಾಕರಿಸಿದ್ದಾರೆ ಎಂದೂ ಜಂಟಿ ನಿರ್ದೇಶಕರು ಇನ್ನೊಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದಲ್ಲದೆ ಪ್ರಾಂಶುಪಾಲರ ಮೇಲೆ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂದು ನೋಟೀಸ್ ನೀಡಿರುವ ಪತ್ರವೂ ಮಾಹಿತಿ ಹಕ್ಕಿನಡಿ ಲಭ್ಯವಾಗಿದೆ.
ಏತನ್ಮಧ್ಯೆ ಕಾಲೇಜಿನ ಭವಿಷ್ಯ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಕಾರಣದಿಂದ ತಕ್ಷಣವೇ ಜಂಟಿ ನಿರ್ದೇಶಕರ ಶಿಫಾರಸು ಅನುಷ್ಠಾನ ಮಾಡಬೇಕು ಎಂದು ವಿದ್ಯಾಸಂಸ್ಥೆಯ ಸ್ಥಾಪಕರಲ್ಲೊಬ್ಬರಾದ ರವಿದಾಸ ಪೈ ಆಗ್ರಹಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…