ಮಂಗಳೂರು: ಉನ್ನತ ಶಿಕ್ಷಣ ಇಲಾಖೆಯ ಯಾವುದೇ ಆದೇಶಗಳನ್ನು ಪಾಲಿಸದೆ “ಅಶಿಸ್ತಿನಿಂದ ನಡೆದುಕೊಳ್ಳುತ್ತಿರುವ” ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿಗೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಸರಕಾರಕ್ಕೆ ಶಿಫಾರಸು ಮಾಡಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರಿನ ಪ್ರಾದೇಶಿಕ ಜಂಟಿ ನಿರ್ದೇಶಕರು ಮೇ ದಿನಾಂಕ ೧೭ರಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಸರಕಾರದ ನಿಯಮಗಳನ್ನು ಪಾಲಿಸದಿರುವ ಎಸ್.ವಿ.ಎಸ್. ಕಾಲೇಜಿಗೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಶಿಫಾರಸು ಮಾಡಿ ಕೂಡಲೇ ಕ್ರಮ ವಹಿಸುವಂತೆ ಕೋರಿ ಬರೆದಿರುವ ಪತ್ರ ಮಾಹಿತಿ ಹಕ್ಕು ಅಧಿನಿಯಮದಡಿ ಲಭ್ಯವಾಗಿದೆ.
ಈ ಪತ್ರದಲ್ಲಿ ಜಂಟಿ ನಿರ್ದೇಶಕರು ಕಾಲೇಜು ವಾರ್ಷಿಕ ವೇತನ ತಖ್ತೆ ಅನುಮೋದನೆ ಪಡೆಯದಿರುವುದು, ನಿವೃತ್ತರಿಗೆ ಪಿಂಚಣಿ ಮಂಜೂರಾತಿಗೆ ಸಕಾಲದಲ್ಲಿ ದಾಖಲೆಗಳನ್ನು ಸಲ್ಲಿಸದಿರುವುದು, ಸೇವಾ ಪುಸ್ತಕ ನೀಡದಿರುವ ಬಗ್ಗೆ ಪತ್ರ ಬರೆದರೂ ಉತ್ತರಿಸದಿರುವುದು, ಎ.ಜಿ.ಪಿ ಬಾಕಿ ವೇತನ ಪ್ರಸ್ತಾವನೆ ಬಗ್ಗೆ ಕ್ರಮ ಕೈಗೊಳ್ಳದಿರುವುದು ಎಂಬಿತ್ಯಾದಿ ದೂರುಗಳನ್ನು ಪಟ್ಟಿ ಮಾಡಿದ್ದಾರೆ.
ಕಾಲೇಜು ನಿಗದಿತ ಕರ್ತವ್ಯ ನಿರ್ವಹಿಸಿರುವುದಿಲ್ಲ, ಅಧ್ಯಾಪಕರಿಗೆ ನಿಗದಿತ ಕಾರ್ಯಭಾರ ಇಲ್ಲದಿದ್ದರೂ ೨೦೨೩ರ ಆಗಸ್ಟ್ ನಿಂದ ವೇತನ ಪಾವತಿ ಮಾಡಲು ಕಾರಣರಾಗಿದ್ದಾರೆ ಎಂದು ಪತ್ರದಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಪ್ರಾಂಶುಪಾಲರಿಗೆ ನಿಗದಿತ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರ ಕಚೇರಿಗೆ ಹಾಜರಾಗುವಂತೆ ತಿಳಿಸಿದರೂ ಪ್ರಾಂಶುಪಾಲರು ಹಾಜರಾಗಲು ನಿರಾಕರಿಸಿದ್ದಾರೆ ಎಂದೂ ಜಂಟಿ ನಿರ್ದೇಶಕರು ಇನ್ನೊಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದಲ್ಲದೆ ಪ್ರಾಂಶುಪಾಲರ ಮೇಲೆ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂದು ನೋಟೀಸ್ ನೀಡಿರುವ ಪತ್ರವೂ ಮಾಹಿತಿ ಹಕ್ಕಿನಡಿ ಲಭ್ಯವಾಗಿದೆ.
ಏತನ್ಮಧ್ಯೆ ಕಾಲೇಜಿನ ಭವಿಷ್ಯ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಕಾರಣದಿಂದ ತಕ್ಷಣವೇ ಜಂಟಿ ನಿರ್ದೇಶಕರ ಶಿಫಾರಸು ಅನುಷ್ಠಾನ ಮಾಡಬೇಕು ಎಂದು ವಿದ್ಯಾಸಂಸ್ಥೆಯ ಸ್ಥಾಪಕರಲ್ಲೊಬ್ಬರಾದ ರವಿದಾಸ ಪೈ ಆಗ್ರಹಿಸಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…