ಬಂಟ್ವಾಳ: ರಾಜಕೀಯ ಕಾರ್ಯದ ಜೊತೆ ಇಡೀ ದ.ಕ.ಜಿಲ್ಲೆಯ ಜನರಿಗೆ ಆಸ್ಪತ್ರೆ ವಿಚಾರದಲ್ಲಿ ದೊಡ್ಡ ಮಟ್ಟದ ಸ್ಪಂದನೆ ನೀಡುವ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ವಿದೇಶದಲ್ಲಿ ಉದ್ಯೋಗಿಯಾಗಿರುವ ಬಂಟ್ವಾಳದ ಯುವಕನ ಚಿಕಿತ್ಸೆಗೆ ಸ್ಪಂದಿಸಿದ ಬಗ್ಗೆ ವರದಿಯೊಂದು ಇಲ್ಲಿದೆ….
ಮೂರು ತಿಂಗಳ ಹಿಂದಷ್ಟೇ ಉದ್ಯೋಗಕ್ಕಾಗಿ ಕುವೈಟ್ ಗೆ ತೆರಳಿ ಅಲ್ಲಿವಾಹನ ಅಪಘಾತಕ್ಕೊಳಗಾಗಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ವಾಮದಪದವು ಪಿಲಿಮೊಗರಿನ ವಿರಾಜ್ ಈಗ ಗುಣಮುಖರಾಗಿ ಊರಿಗೆ ಮರಳಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನ್ಯಾಕ್ ಅವರ ಮನವಿಗೆ ಸ್ಪಂದಿಸಿದ ಕುವೈಟ್ನಲ್ಲಿರುವ ನಮ್ಮೂರಿನವರು ಯುವಕನನ್ನು ಊರಿಗೆ ಕಳುಹಿಸಿಕೊಟ್ಟಿದ್ದಾರೆ.
ಅಪಘಾತಕ್ಕೀಡಾಗಿದ್ದ ವಿರಾಜ್ನ ಕೈ ಹಾಗೂ ತಲೆಗೆ ಗಂಭೀರ ಗಾಯವಾಗಿತ್ತು. ಅವರು 25 ದಿನಗಳ ಕಾಲ ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಹುತೇಕ ಗುಣಮುಖರಾಗಿದ್ದಾರೆ. ತಲೆಗೆ ಗಾಯವಾಗಿದ್ದ ಕಾರಣ ನೆನಪು ಶಕ್ತಿಯ ತೊಂದರೆ ಇದೆ ಸರಿಯಾದ ಚಿಕಿತ್ಸೆ ನೀಡಿದರೆ ಮೂರು ತಿಂಗಳಲ್ಲಿ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ.
ಬಸ್ಸು ಚಾಲಕರಾಗಿ ಕುವೈಟ್ಗೆ ಉದ್ಯೋಗಕ್ಕೆ ತೆರಳಿದ್ದ ವಿರಾಜ್ ಮೊದಲ ದಿನದ ಕೆಲಸ ಮುಗಿಸಿ 2ನೇ ದಿನದ ಕರ್ತವ್ಯದಲ್ಲಿದ್ದರು. ಈ ವೇಳೆ ಬಸ್ಸಿನ ಟಿಕೆಟ್ ಮೆಷಿನ್ ಹಾಳಾಗಿದೆ ಎಂದು ಕಂಪೆನಿಗೆ ತಿಳಿಸಿ ಬಸ್ಸನ್ನು ನಿಲ್ದಾಣದಲ್ಲಿ ನಿಲ್ಲಿಸಿ ಕೆಳಗಿಳಿದಿದ್ದರು. ಈ ವೇಳೆ ಕಾರೊಂದು ಅವರಿಗೆ ಢಿಕ್ಕಿಯಾಗಿತ್ತು. ಗಂಭೀರ
ಗಾಯಗೊಂಡಿದ್ದ ಅವರನ್ನು ಅಪರಿಚಿತ ವ್ಯಕ್ತಿ ಎಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ವಿಷಯ ಸ್ನೇಹಿತರ ಮೂಲಕ ವಿರಾಜ್ ಸಹೋದರ ವಿನೋದ್ಗೆ ತಿಳಿದರೂ, ಅವರ ಆರೋಗ್ಯದ ವಿವರ ಸಿಗಲಿಲ್ಲ ಬಳಿಕ ವಿನೋದ್ ಅವರು ಈ ಬಗ್ಗೆ ಬಂಟ್ವಾಳ ಶಾಸಕರಿಗೆ ತಿಳಿಸಿದರು. ಶಾಸಕರು ತತ್ಕ್ಷಣ ಕುವೈಟ್ನ ತುಳುಕೂಟದ ಮಾಜಿ ಅಧ್ಯಕ್ಷ ರಾಜ್ ಭಂಡಾರಿ ತಿರುಮಲೆಗುತ್ತು ಹಾಗೂ ಸನತ್ ಶೆಟ್ಟಿ ಅವರಿಗೆ ತಿಳಿಸಿದರು. ಅವರು ಅಲ್ಲಿನ ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ, ವಿರಾಜ್ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲೇ ಉದ್ಯೋಗದಲ್ಲಿರುವ ಪ್ರಶಾಂತ್ ಪೂಜಾರಿಗೆ ತಿಳಿಸಿದರು.
ಆಸ್ಪತ್ರೆಯಲ್ಲಿ ವಿರಾಜ್ ಅವರನ್ನು ಪ್ರಶಾಂತ್ ಚೆನ್ನಾಗಿ ನೋಡಿಕೊಂಡಿದ್ದರು. ವಿರಾಜ್ನ ಊರಿನವರೇ ಆಗಿರುವ ಕುವೈಟ್ ನ ಹೊಟೇಲ್ ಉದ್ಯಮಿ ರಾಜೇಶ್ ಪೂಜಾರಿ ಅವರು ಕೂಡ ನೆರವಾಗಿದ್ದಾರೆ. ವಿರಾಜ್ ಊರಿಗೆ ಮರಳಲು ಅವರು ಉದ್ಯೋಗದಾತಕಂಪೆನಿಹಾಗೂ ಬಿಲ್ಲವ ಸಂಘ ಸದಸ್ಯರು ಹೆಚ್ಚಿನ ಸಹಕಾರ ನೀಡಿದ್ದಾರೆ. ಬಿಲ್ಲವ ಸಂಘದ ಪ್ರಮುಖರು, ಕುವೈಟ್ ನಲ್ಲಿರುವ ಬಂಧುಗಳು, ಶಾಸಕರು, ಅವರ ಆಪ್ತ ಸಹಾಯಕ ಪವನ್ ಶೆಟ್ಟಿ ಅವರ ಸಹಕಾರದಿಂದ ಸಹೋದರ ಊರಿಗೆ ಬರುವಂತಾಗಿದೆ ಎಂದು ವಿನೋದ್ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…