ಬಂಟ್ವಾಳ: ರಾಜಕೀಯ ಕಾರ್ಯದ ಜೊತೆ ಇಡೀ ದ.ಕ.ಜಿಲ್ಲೆಯ ಜನರಿಗೆ ಆಸ್ಪತ್ರೆ ವಿಚಾರದಲ್ಲಿ ದೊಡ್ಡ ಮಟ್ಟದ ಸ್ಪಂದನೆ ನೀಡುವ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ವಿದೇಶದಲ್ಲಿ ಉದ್ಯೋಗಿಯಾಗಿರುವ ಬಂಟ್ವಾಳದ ಯುವಕನ ಚಿಕಿತ್ಸೆಗೆ ಸ್ಪಂದಿಸಿದ ಬಗ್ಗೆ ವರದಿಯೊಂದು ಇಲ್ಲಿದೆ….
ಮೂರು ತಿಂಗಳ ಹಿಂದಷ್ಟೇ ಉದ್ಯೋಗಕ್ಕಾಗಿ ಕುವೈಟ್ ಗೆ ತೆರಳಿ ಅಲ್ಲಿವಾಹನ ಅಪಘಾತಕ್ಕೊಳಗಾಗಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ವಾಮದಪದವು ಪಿಲಿಮೊಗರಿನ ವಿರಾಜ್ ಈಗ ಗುಣಮುಖರಾಗಿ ಊರಿಗೆ ಮರಳಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನ್ಯಾಕ್ ಅವರ ಮನವಿಗೆ ಸ್ಪಂದಿಸಿದ ಕುವೈಟ್ನಲ್ಲಿರುವ ನಮ್ಮೂರಿನವರು ಯುವಕನನ್ನು ಊರಿಗೆ ಕಳುಹಿಸಿಕೊಟ್ಟಿದ್ದಾರೆ.
ಅಪಘಾತಕ್ಕೀಡಾಗಿದ್ದ ವಿರಾಜ್ನ ಕೈ ಹಾಗೂ ತಲೆಗೆ ಗಂಭೀರ ಗಾಯವಾಗಿತ್ತು. ಅವರು 25 ದಿನಗಳ ಕಾಲ ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಹುತೇಕ ಗುಣಮುಖರಾಗಿದ್ದಾರೆ. ತಲೆಗೆ ಗಾಯವಾಗಿದ್ದ ಕಾರಣ ನೆನಪು ಶಕ್ತಿಯ ತೊಂದರೆ ಇದೆ ಸರಿಯಾದ ಚಿಕಿತ್ಸೆ ನೀಡಿದರೆ ಮೂರು ತಿಂಗಳಲ್ಲಿ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ.
ಬಸ್ಸು ಚಾಲಕರಾಗಿ ಕುವೈಟ್ಗೆ ಉದ್ಯೋಗಕ್ಕೆ ತೆರಳಿದ್ದ ವಿರಾಜ್ ಮೊದಲ ದಿನದ ಕೆಲಸ ಮುಗಿಸಿ 2ನೇ ದಿನದ ಕರ್ತವ್ಯದಲ್ಲಿದ್ದರು. ಈ ವೇಳೆ ಬಸ್ಸಿನ ಟಿಕೆಟ್ ಮೆಷಿನ್ ಹಾಳಾಗಿದೆ ಎಂದು ಕಂಪೆನಿಗೆ ತಿಳಿಸಿ ಬಸ್ಸನ್ನು ನಿಲ್ದಾಣದಲ್ಲಿ ನಿಲ್ಲಿಸಿ ಕೆಳಗಿಳಿದಿದ್ದರು. ಈ ವೇಳೆ ಕಾರೊಂದು ಅವರಿಗೆ ಢಿಕ್ಕಿಯಾಗಿತ್ತು. ಗಂಭೀರ
ಗಾಯಗೊಂಡಿದ್ದ ಅವರನ್ನು ಅಪರಿಚಿತ ವ್ಯಕ್ತಿ ಎಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ವಿಷಯ ಸ್ನೇಹಿತರ ಮೂಲಕ ವಿರಾಜ್ ಸಹೋದರ ವಿನೋದ್ಗೆ ತಿಳಿದರೂ, ಅವರ ಆರೋಗ್ಯದ ವಿವರ ಸಿಗಲಿಲ್ಲ ಬಳಿಕ ವಿನೋದ್ ಅವರು ಈ ಬಗ್ಗೆ ಬಂಟ್ವಾಳ ಶಾಸಕರಿಗೆ ತಿಳಿಸಿದರು. ಶಾಸಕರು ತತ್ಕ್ಷಣ ಕುವೈಟ್ನ ತುಳುಕೂಟದ ಮಾಜಿ ಅಧ್ಯಕ್ಷ ರಾಜ್ ಭಂಡಾರಿ ತಿರುಮಲೆಗುತ್ತು ಹಾಗೂ ಸನತ್ ಶೆಟ್ಟಿ ಅವರಿಗೆ ತಿಳಿಸಿದರು. ಅವರು ಅಲ್ಲಿನ ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ, ವಿರಾಜ್ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲೇ ಉದ್ಯೋಗದಲ್ಲಿರುವ ಪ್ರಶಾಂತ್ ಪೂಜಾರಿಗೆ ತಿಳಿಸಿದರು.
ಆಸ್ಪತ್ರೆಯಲ್ಲಿ ವಿರಾಜ್ ಅವರನ್ನು ಪ್ರಶಾಂತ್ ಚೆನ್ನಾಗಿ ನೋಡಿಕೊಂಡಿದ್ದರು. ವಿರಾಜ್ನ ಊರಿನವರೇ ಆಗಿರುವ ಕುವೈಟ್ ನ ಹೊಟೇಲ್ ಉದ್ಯಮಿ ರಾಜೇಶ್ ಪೂಜಾರಿ ಅವರು ಕೂಡ ನೆರವಾಗಿದ್ದಾರೆ. ವಿರಾಜ್ ಊರಿಗೆ ಮರಳಲು ಅವರು ಉದ್ಯೋಗದಾತಕಂಪೆನಿಹಾಗೂ ಬಿಲ್ಲವ ಸಂಘ ಸದಸ್ಯರು ಹೆಚ್ಚಿನ ಸಹಕಾರ ನೀಡಿದ್ದಾರೆ. ಬಿಲ್ಲವ ಸಂಘದ ಪ್ರಮುಖರು, ಕುವೈಟ್ ನಲ್ಲಿರುವ ಬಂಧುಗಳು, ಶಾಸಕರು, ಅವರ ಆಪ್ತ ಸಹಾಯಕ ಪವನ್ ಶೆಟ್ಟಿ ಅವರ ಸಹಕಾರದಿಂದ ಸಹೋದರ ಊರಿಗೆ ಬರುವಂತಾಗಿದೆ ಎಂದು ವಿನೋದ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…