ಕಾರ್ಕಳ : ಕೂಲಿ ಕಾರ್ಮಿಕನೊಬ್ಬ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಘಟನೆ ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬಿಹಾರ ಮೂಲದ ಯುವಕ ಸೌರವ್ ಕುಮಾರ್ (20) ಮೃತ ದುರ್ದೈವಿ. ಕೆಲವು ವರ್ಷಗಳ ಹಿಂದೆ ಕೂಲಿ ಕಾರ್ಮಿಕನಾಗಿ ಬಂದಿದ್ದ ಸೌರವ್ ನಿಟ್ಟೆ ಕಾಲೇಜಿನ ಎದುರುಗಡೆ ಇರುವ ಬಾಡಿಗೆ ಕೊಠಡಿಯಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದರು. ಮಂಗಳಗಳ ಕಾಟ ಹೆಚ್ಚಾಗಿದ್ದು ಮನೆಯಲ್ಲಿದ್ದ ಕೆಲವು ವಸ್ತುಗಳನ್ನು ಕದ್ದೊಯ್ದು ಅಲ್ಲಲ್ಲಿ ಬಿಸಾಡುತ್ತಿದ್ದವು. ಅವುಗಳನ್ನು ಹುಡುಕಲು ಯುವಕ ಸೌರವ್ ಹಾಗೂ ಗೆಳೆಯರು ನಿನ್ನೆಯೂ ಹೊರಟಿದ್ದಾರೆ. ಮನೆಯ ಟೆರೇಸ್ ಗೆ ಹೋಗಲು ಇಟ್ಟ ಏಣಿಗೆ ವಿದ್ಯುತ್ ತಂತಿ ತಗುಲಿದ್ದು ಅದನ್ನು ಹತ್ತಲು ಹೋದ ಸೌರವ್ ಗೆ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…