ಕಾರ್ಕಳ : ಕೂಲಿ ಕಾರ್ಮಿಕನೊಬ್ಬ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಘಟನೆ ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬಿಹಾರ ಮೂಲದ ಯುವಕ ಸೌರವ್ ಕುಮಾರ್ (20) ಮೃತ ದುರ್ದೈವಿ. ಕೆಲವು ವರ್ಷಗಳ ಹಿಂದೆ ಕೂಲಿ ಕಾರ್ಮಿಕನಾಗಿ ಬಂದಿದ್ದ ಸೌರವ್ ನಿಟ್ಟೆ ಕಾಲೇಜಿನ ಎದುರುಗಡೆ ಇರುವ ಬಾಡಿಗೆ ಕೊಠಡಿಯಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದರು. ಮಂಗಳಗಳ ಕಾಟ ಹೆಚ್ಚಾಗಿದ್ದು ಮನೆಯಲ್ಲಿದ್ದ ಕೆಲವು ವಸ್ತುಗಳನ್ನು ಕದ್ದೊಯ್ದು ಅಲ್ಲಲ್ಲಿ ಬಿಸಾಡುತ್ತಿದ್ದವು. ಅವುಗಳನ್ನು ಹುಡುಕಲು ಯುವಕ ಸೌರವ್ ಹಾಗೂ ಗೆಳೆಯರು ನಿನ್ನೆಯೂ ಹೊರಟಿದ್ದಾರೆ. ಮನೆಯ ಟೆರೇಸ್ ಗೆ ಹೋಗಲು ಇಟ್ಟ ಏಣಿಗೆ ವಿದ್ಯುತ್ ತಂತಿ ತಗುಲಿದ್ದು ಅದನ್ನು ಹತ್ತಲು ಹೋದ ಸೌರವ್ ಗೆ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…