ರಾಷ್ಟ್ರ

ಬಂಟ್ವಾಳದ  ವಧುವಿಗೆ ಪಂಜಾಬಿನ ವರ,  ಮಿಂಚಿದ ತುಳುನಾಡಿನ ಅಳಿಯ ಕಟ್ಟಿನ ಸಂಪ್ರದಾಯ;  ಅಪರೂಪದ ಮದುವೆಗೆ ಸಾಕ್ಷಿಯಾಯಿತು ಪಂಜಾಬಿನ ಕಲ್ಯಾಣ ಮಂಟಪ

ಬಂಟ್ವಾಳಕ್ಕೂ ಪಂಜಾಬ್ ಗೂ ಎಲ್ಲಿಯ ಸಂಬಂಧ, ಏಳೇಳು ಜನುಮದ ಅನುಬಂಧ. ತುಳುನಾಡಿನ ವಧುವನ್ನು ಪಂಜಾಬಿಯ ವರನಿಗೆ ಕನ್ಯಾದಾನ ಮಾಡಿದ ಅಪರೂಪದ ಪ್ರಸಂಗವೊಂದು ಇತ್ತೀಚೆಗೆ ನಡೆಯಿತು….

 

ತುಳುನಾಡಿನಲ್ಲಿ ನಡೆಯುವ ಅಳಿಯ ಕಟ್ಟಿನ ಮದುವೆಯನ್ನು ಪಂಜಾಬ್ ರಾಜ್ಯದ ಕುಟುಂಬವೊಂದು ಅಪ್ಪಿಕೊಂಡು ಒಪ್ಪಿಕೊಂಡರು ಎಂಬುದು ನಿಜಕ್ಕೂ ತುಳುನಾಡಿಗೆ ಹೆಮ್ಮೆ….

ಮೂಲತ: ಬಡಗಬೆಳ್ಳೂರು ಗ್ರಾಮದ ಪರಿಮೊಗರು ನಿವಾಸಿ ಪ್ರಕಾಶ್ ಶೆಟ್ಟಿ ಅವರ ಪ್ರಥಮ ಪುತ್ರಿ ಪುಣ್ಯ ಅವರ ವಿವಾಹವು ಪಂಜಾಬ್ ರಾಜ್ಯದ ಸಂಜೀವ ಶರ್ಮ ಅವರ ಮಗ ಉತ್ಕರ್ಷ ಅವರ ಜೊತೆ ನ.27 ರಂದು ಪಂಜಾಬ್ ಲುದಿನಾದ ಅಂಬ್ರೋಸಿಯಾ ಗ್ರ್ಯಾಂಡ್ ರೆಸಾರ್ಟ್ ನಲ್ಲಿ ಸಂಭ್ರಮದಿಂದ ನಡೆಯಿತು.

ಬಂಟ್ವಾಳದ ಪುಣ್ಯ ಅವರು ಉನ್ನತ ವ್ಯಾಸಂಗಕ್ಕೆ ಅಮೇರಿಕಾಕ್ಕೆ ತೆರಳಿದ್ದರು.ಉತ್ಕರ್ಷ ಕೂಡ ಅಮೇರಿಕಾದಲ್ಲಿ ಶಿಕ್ಷಣ ಪಡೆಯುತ್ತಿದ್ದರು.ಉನ್ನತ ವಿದ್ಯಾಭ್ಯಾದ ಉದ್ದೇಶದಿಂದ ಅಮೇರಿಕಾದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವೇಳೆ ಪರಿಚಯವಾದ ಇವರಿಬ್ಬರ ಸ್ನೇಹ ಮುಂದೆ ಸಾಗಿ ಮದುವೆ ಎಂಬ ಮೂರಕ್ಷದ ಗಂಟು ಕಟ್ಟುವರೆಗೂ ತಲುಪಿತು. ಅಮೇರಿಕಾದ ವರನಿಗೆ ಅಥವಾ ವಧುವಿಗೆ ತುಳುನಾಡಿನ ವರ ಅಥವಾ ವಧು ಎಂಬ ಸಂಬಂಧಗಳು ಅನೇಕ ನಡೆದಿವೆ, ಅದು ದೊಡ್ಡ ಸಂಗತಿಯಾಗದೆ ಇರಬಹುದು. ಆದರೆ ಹೊರರಾಜ್ಯವಾದ ಪಂಜಾಬ್ ನ ವರ ಬಂಟ್ವಾಳದ ಬಂಟ ಸಮುದಾಯದ ವಧುವನ್ನು ತುಳುನಾಡಿನ ಅಳಿಯ ಕಟ್ಟು ಪ್ರಕಾರದ ಮದುವೆ ಮೂಲಕ ವರಿಸಿದ್ದಾನೆ ಎಂಬುದು ಉಲ್ಲೇಖನೀಯ ಅಂಶವಾಗಿದೆ. ಅತ್ಯಂತ ಪುರಾತನ‌ವಾದ ತುಳುನಾಡಿನ ಅಳಿಯ ಕಟ್ಟಿನ ಸಂಪ್ರದಾಯ ಬದ್ದವಾದ ಮದುವೆಗೆ ಸಾಕ್ಷಿಯಾಗಿ, ಭೂಮಿ ಸಾಕ್ಷಿಯಾದ ಮದುವೆಯನ್ನು ಪಿ.ಕಿಶೋರ್ ಭಂಡಾರಿ ಬಡಗಬೆಳ್ಳೂರು ಇವರ ಮಾರ್ಗದರ್ಶನದಲ್ಲಿ ಮಂಗಳೂರಿನ ರಾಕೇಶ್ ಸಾಲಿಯಾನ್ ಪಚ್ಚನಾಡಿ ಅವರು ನೆರವೇರಸಿಕೊಟ್ಟರು.

ತುಳುನಾಡ ಶಾಲು : ರಾಕೇಶ್ ಪಚ್ಚನಾಡಿ

ತುಳುನಾಡಿನ‌ ವಿಶೇಷವಾದ ಸಂಪ್ರದಾಯಬದ್ದವಾದ ಮದುವೆಯ ಕ್ರಮವನ್ನು ವಿದೇಶದಲ್ಲಿ ಉದ್ಯೋಗದಲ್ಲಿರುವ ವಿದ್ಯಾವಂತ ಶ್ರೀಮಂತ ಕುಟುಂಬಗಳು ಒಪ್ಪಿಕೊಂಡು ಸಂಭ್ರಮಿಸಿದ್ದಾರೆ ಎಂದರೆ ಇದು ವಿಶೇಷವಾಗಿದೆ ಎಂದು ಅಳಿಯಕಟ್ಟಿನ ಸಂಪ್ರದಾಯ ಬದ್ದವಾದ ಮದುವೆಯನ್ನು ನೆರವೇರಿಸಿದ ರಾಕೇಶ್ ಅವರು ತಿಳಿಸಿದರು.ಎರಡು ಕುಟುಂಬಗಳು‌ ಮನಸ್ಸು ಮಾಡಿದರೆ ಪಂಜಾಬ್ ನ ಮಂಟಪದಲ್ಲಿ ವೈಭವದಿಂದ ಮದುವೆ ಮಾಡಬಹುದಿತ್ತು.ದರೆ ಮೂಲತ: ಬಂಟ್ವಾಳದವರಾದ ವಧುವಿನ ಕುಟುಂಬ ತುಳುನಾಡಿನ ಮೂಲ ಸಂಪ್ರದಾಯ ಮರೆಯದೆ ಮದುವೆ ಮಾಡಿರುವುದು ವಿಶೇಷವೆನಿಸಿದೆ. ಅದಕ್ಕೆ ಆಸ್ಪದ ಕೊಟ್ಟ ವರನ ಕುಟುಂಬಕ್ಕೂ ಇದರ ಪಾಲು ಸಲ್ಲಬೇಕಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ವಿದೇಶದಲ್ಲಿರುವ ಕುಟುಂಬಗಳು

ತುಳುನಾಡಿನ‌ ಕಟ್ಟಲೆಯನ್ನು ಸ್ವೀಕರಿಸಿದ್ದಾರೆ ಎಂದಾಗ ಖುಷಿಯಿಂದ ಮದುವೆಯ ಬಳಿಕ ವರ ಹಾಗೂ ವಧುವಿಗೆ ತುಳುನಾಡ ಶಾಲು ಹಾಕಿ ಗೌರವ ನೀಡಿದ್ದೇ‌ನೆ.
ಕೇಪುಳ ರಂಗಿನ ತುಳುನಾಡಿನ‌ ಶಾಲು ಇದರಲ್ಲಿ ಸೂರ್ಯ ಚಂದ್ರನ ಚಿತ್ರವಿದೆ. ಇದರ ವಿಶೇಷವೇನಂದರೆ ಸೂರ್ಯಚಂದ್ರ ಇರುವವರೆಗೆ ಚೆನ್ನಾಗಿ ‌ಬಾಳುವ ಸಂಕೇತವಿದೆ ಎಂಬುದನ್ನು ಸೂಚಿಸುತ್ತದೆ ಎಂದು ಅವರು ತಿಳಿಸಿದರು.

ಪಂಜಾಬ್ ನ ಮದುವೆಗೆ ಬಂಟ್ವಾಳದಿಂದ ಸಾಮಾಗ್ರಿ: ಕಿಶೋರ್ ಭಂಡಾರಿ
ಬಡಗಬೆಳ್ಳೂರಿನ ಪ್ರಕಾಶ್ ಶೆಟ್ಟಿ ಹಾಗೂ ಕಿಶೋರ್ ಭಂಡಾರಿ ಅವರು ಸಂಬಂಧಿಕರಾಗಿದ್ದು, ಪಂಜಾಬ್ ನಲ್ಲಿ ಅಳಿಯ ಕಟ್ಟು ಪ್ರಕಾರ ಮದುವೆ ನೆರವೇರಿಸಲು ಇವರನ್ನು ಆಮಂತ್ರಣ ನೀಡಿದ್ದರು. ವೈಯಕ್ತಿಕ ಕಾರಣಗಳಿಂದ ಕಿಶೋರ್ ಭಂಡಾರಿ ಅವರು ಪಂಜಾಬ್ ಗೆ ಹೋಗಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಮಂಗಳೂರಿನ ರಾಕೇಶ್ ಅವರನ್ನು ಕಳುಹಿಸಿಕೊಟ್ಟಿದ್ದರು. ಇಲ್ಲಿನ ಅಳಿಯ ಕಟ್ಟು ಪ್ರಕಾರ ಮದುವೆ ನಡೆಸಲು ಮದುವೆಗೆ ಬೇಕಾದ ವಸ್ತುಗಳು ಧಾರೆಗಿಂಡಿ,ದೀಪ, ಹರಿವಾಣಗಳು, ವೀಳ್ಯದೆಲೆ, ಅಡಿಕೆ, ತೆಂಗಿನಕಾಯಿ, ಬೆಳ್ತಿಗೆ ಅಕ್ಕಿ,ಹಲಸಿನ ತುದಿ,ಮಾವಿನ ತುದಿ,ಸೀಯಾಳ ಹೀಗೆ ಬಾಳೆ ಎಲೆಯಿಂದ ಹಿಡಿದು ತೆಂಗಿನ‌ ಹಿಂಗಾರದವರೆಗೆ ಎಲ್ಲವನ್ನು ತಯಾರು ಮಾಡಿ ಭಂಡಾರಿಯವರು ಬಂಟ್ವಾಳದಿಂದ ಪಂಜಾಬ್ ಗೆ ಕಳುಹಿಸಿಕೊಟ್ಟಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

2 days ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

2 days ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

2 days ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

2 days ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

3 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

3 days ago