ಉಡುಪಿ: ಫೆಂಗಲ್ ಚಂಡಮಾರುತ ಭಾರೀ ಅನಾಹುತಗಳನ್ನು ಉಂಟು ಮಾಡಿದೆ. ಸೋಮವಾರ ಸಂಜೆ ಪ್ರಾರಂಭಗೊಂಡ ಮಳೆ ಉಡುಪಿ ಜಿಲ್ಲೆಯಲ್ಲಿ ಈಗಲೂ ಮುಂದುವರೆದಿದೆ.
ನಿನ್ನೆಯ ಅಬ್ಬರದ ಮಳೆಗೆ ಸಿಡಿಲು ಬಡಿದು ಮನೆಗೆ ಹಾನಿಯುಂಟಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಸಮೀಪದ ಸೊಣಗಾರ ಬೆಟ್ಟು ಎಂಬಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ನೀಲಾವರ ಸಮೀಪದ ಸೊಣಗಾರಬೆಟ್ಟು ರಾಧು ಶೆಡ್ತಿಯವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ಉಪಕರಣಗಳಿಗೆ ಹಾನಿಯುಂಟಾಗಿದ್ದು, ವಿದ್ಯುತ್ ಉಪಕರಣಗಳು ಸುಟ್ಟು ಕರಕಲಾಗಿವೆ. ಇನ್ನು ರಾತ್ರಿಯಿಂದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದು ಜನರು ಪರದಾಡುವಂತಾಗಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…