ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರಲು: ಸಿಎಂ
ಮಂಡ್ಯ (ಕೆ.ಆರ್.ಪೇಟೆ) ಡಿ4: ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ED ಯವರು ತಮ್ಮ ತನಿಖೆಯ ವಿವರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದರ ಬಗ್ಗೆ ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದರ ಹಿಂದಿನ ಉದ್ದೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ED ಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದರು.
ಈ ವಿಚಾರಕ್ಕೆ ಸಂಬಂಧಪಟ್ಟಂತೆನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ತಿಳಿಸಿದರು.
ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ED ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.
ನಾನು ಹೇಳಿದ್ನಾ?
ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.
ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಷದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷದಿಂದ ಸಮಾವೇಷ ನಡೆಯುತ್ತಿದೆ ಎಂದರು.
ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…