ಪಂಜಾಬ್ ಡಿಸಿಎಂ ಕೊಲೆಗೆ ಯತ್ನ, ಆರೋಪಿಯನ್ನು ಸೆರೆ ಹಿಡಿದ ಸಾರ್ವಜನಿಕರು

ಅಮೃತಸರ: ಪಂಜಾಬ್ ನ ಪ್ರಸಿದ್ಧ ಕ್ಷೇತ್ರ ಅಮೃತಸರದ ಗೋಲ್ಡನ್ ಟೆಂಪಲ್ ನಲ್ಲಿ ಕಾವಲು ಸೇವೆಯಲ್ಲಿ ನಿರತರಾಗಿದ್ದ ಪಂಜಾಬ್ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿ ನಡೆದಿದೆ.
ಉಪಮುಖ್ಯಮಂತ್ರಿ ಧಾರ್ಮಿಕ ಶಿಕ್ಷೆಯ ಭಾಗವಾಗಿ ಗೋಲ್ಡನ್ ಟೆಂಪಲ್ನ ಪ್ರವೇಶದ್ವಾರದ ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಬೆಳಿಗ್ಗೆ ತಪಸ್ಸಿಗೆ ಕುಳಿತಾಗ ಓರ್ವ ವ್ಯಕ್ತಿ ಗುಂಡಿನ ದಾಳಿ ಮೂಲಕ ಕೊಲೆಗೆ ಪ್ರಯತ್ನ ಪಟ್ಟಿದ್ದಾನೆ. ಈ ವೇಳೆ ಸಮಯಪ್ರಜ್ಞೆ ತೋರಿದ ಜನರು, ಆರೋಪಿ ಗನ್ ಹೊರತೆಗೆಯುವುದನ್ನು ಗಮನಿಸಿ ತಡೆದಿದ್ದಾರೆ. ಈ ವೇಳೆ ಗುಂಡು ಹೊರ ಬಂದು ಕ್ಷೇತ್ರದ ಕಟ್ಟಡಕ್ಕೆ ಬಡಿದಿದೆ. ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.



