ಮಗುವಿನ ಮೇಲೆ ಅತ್ಯಾಚಾರ ಎಸಗಿದವನಿಗೆ ಸಿಕ್ಕಿತು ಕಠಿಣ ಶಿಕ್ಷೆ
ಬೆಳಗಾವಿ : ಎರಡೂವರೆ ವರ್ಷದ ಕಂದಮ್ಮನಿಗೆ ಅತ್ಯಾಚಾರವೆಸಗಿ ಕೊಲೆಗೆ ಯತ್ನಿಸಿದ್ದ ವ್ಯಕ್ತಿಗೆ ಪೋಕ್ಸೋ ನ್ಯಾಯಾಲಯ ಜೀವಾವಧಿ ಶಿಕ್ಷೆಯೊಂದಿಗೆ ೩೦ ಲಕ್ಷ ದಂಡವಿಧಿಸಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರಿನ ಆರೋಪಿಯಾಗಿರುವ ಮಹಾದೇವ ನಾಯ್ಕನಿಗೆ ಬೆಳಗಾವಿಯ ಪೋಕ್ಸೋ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
೨೦೧೭ರಲ್ಲಿ ಶಾಲಾ ವಠಾರದಲ್ಲಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಪುಟ್ಟ ಕಂದಮ್ಮನನ್ನು ಕೌಪಾಂಡ್ ಬಳಿ ಕರೆದುಕೊಂಡು ಹೋಗಿ ಗುಪ್ತಾನ್ಗಕ್ಕೆ ಹಾನಿಗೊಳಿಸಿದ್ದಾನೆ. ಬಳಿಕ ಕತ್ತು ಹಿಸುಕಿ ಕೊಂದುಹಾಕಲು ಪ್ರಯತ್ನಿಸಿದ್ದಾನೆ. ಫಲಿಸದೇ ಇದ್ದಾಗ ಇಷ್ಟಕ್ಕೆ ಬಿಡದೇ ಮಗುವನ್ನು ಮಣ್ಣಿನಲ್ಲಿ ಹೂತು ಹಾಕಿ ಪ್ರಕರಣ ಮುಚ್ಚು ಹಾಕಲು ಯತ್ನಿಸಿದ್ದಾನೆ. ಈ ವೇಳೆ ಜನರ ಕಣ್ಣಿಗೆ ಸಿಕ್ಕಿ ಬಿದ್ದಿದ್ದಾನೆ. ಘಟನೆ ತಿಳಿದ ಪೋಷಕರು ನೇಸರಗಿ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ. ಎಂ. ಪುಷ್ಪಲತಾರವರು ತಪ್ಪಿತಸ್ಥನಿಗೆ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸಂತ್ರಸ್ತೆಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ೧ ಲಕ್ಷ ಪರಿಹಾರ ಪಡೆಯುವಂತೆ ಆದೇಶಿಸಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…