ಕರಾವಳಿ

ಗ್ರಾಮೀಣ ಪ್ರದೇಶವಾದ ಕಟ್ಟತ್ತಿಲ ಮಠ ಎಂಬ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಿದ ಊರಿನ ಹೆಮ್ಮೆಯ ಶಿಕ್ಷಕಿ ಚಿತ್ರಕಲಾ ಟೀಚರ್‌ಗೆ ಗೌರವಾಭಿನಂದನೆ

ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಗ್ರಾಮೀಣ ಪ್ರದೇಶವಾದ ಕಟ್ಟತ್ತಿಲ ಮಠ ಎಂಬಲ್ಲಿನ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಿ ಶಾಲೆಯ ಚಿತ್ರಣವನ್ನೇ ಬದಲಿಸಿದ ಊರಿನ ಹೆಮ್ಮೆಯ ಶಿಕ್ಷಕಿ ಚಿತ್ರಕಲಾ ಅವರ ಗೌರವಾಭಿನಂದನೆ ಕಾರ್ಯಕ್ರಮದಲ್ಲಿ ಕಟ್ಟತ್ತಿಲ ಮಠ ಶಾಲೆಯಲ್ಲಿ ಅದ್ಧೂರಿಯಾಗಿ ನೆರವೇರಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಶಿವಪ್ರಸಾದ್‌ ಶೆಟ್ಟಿ, ಕಳೆದ 28 ವರ್ಷಗಳಿಂದ ಸಾಲೆತ್ತೂರು ಪರಿಸರದಲ್ಲಿ ಶೈಕ್ಷಣಿಕ ಸೇವೆ ಸಲ್ಲಿಸಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಚಿತ್ರಕಲಾ ಅವರ ಸಾಮಾಜಿಕ ಕಳಕಳಿ ಮಾದರಿಯಾದುದು. ಎಲ್ಲರನ್ನೂ ಒಟ್ಟುಗೂಡಿಸಿಕೊಂಡು ಮುಟ್ಟಿದ ಕಾರ್ಯವನ್ನು ಯಶಸ್ವಿಯಾಗಿ ಪರಿಪೂರ್ಣಗೊಳಿಸುತ್ತಿದ್ದರು. ಸ್ವತಃ ಕೈಯಿಂದ ಹಣ ಖರ್ಚು ಮಾಡಿ ಸರ್ಕಾರಿ ಶಾಲೆಯನ್ನು ಮಾದರಿ ಶಾಲೆಯಾಗಿ ನಿರೂಪಿಸಿದ್ದಾರೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೊಳ್ನಾಡು ಗ್ರಾಮ ಪಂಚಾಯತ್‌ ಅಧ್ಯಕ್ಷ ಅಶ್ರಫ್‌ ಕೆ, ಬಂಟ್ವಾಳ ತಾಲೂಕಿಗೆ ಮಾದರಿಯಾಗಿ ಕೆಲಸ ನಿರ್ವಹಿಸಿದ ಶಿಕ್ಷಕಿ ಚಿತ್ರಕಲಾ ಅವರ ಸೇವೆ ನಮ್ಮ ಊರಿಗೆ ಅತ್ಯಮೂಲ್ಯವಾಗಿದೆ. ಶೈಕ್ಷಣಿಕ ಸೇವೆ ಜತೆಗೆ ಅವರ ಸಾಮಾಜಿಕ ಕಳಕಳಿ ಸ್ಮರಣಿಯ ಎಂದರು.

ಉದ್ಯಮಿ, ದಾನಿ ಮಾದವ ಮಾವೆ ಮಾತನಾಡಿ, ಚಿತ್ರಕಲಾ ಅವರು ಪಕ್ಕದ ರಾಜ್ಯದವರಾದರೂ ಶೈಕ್ಷಣಿಕ ಸೇವೆಗಾಗಿ ಈ ಶಾಲೆಗೆ ಬಂದ ಬಳಿಕ ಸ್ಥಳೀಯರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಸ್ಥಳೀಯರ ಮನಸ್ಸನ್ನು ಗೆದ್ದು ಹಲವಾರು ಸಮಾಜಮುಖಿ ಕಾರ್ಯ ಮಾಡಿದ್ದಾರೆ. ಅವರ ನಿವೃತ್ತಿಯ ನಂತರವೂ ಊರಿಗೆ ಅವರ ಸೇವೆ ಮುಂದುವರಿಯಲಿ ಎಂದು ಶುಭ ಹಾರೈಸಿದರು.

ಅಧ್ಯಾಪಕರ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ರಮೇಶ್‌ ನಾಯಕ್‌ ರಾಯಿ ಮಾತನಾಡಿ, ಚಿತ್ರಕಲಾ ಅವರು ಅಧ್ಯಾಪಕರ ಸಹಕಾರಿ ಸಂಘದ ಪದಾಧಿಕಾರಿಯಾಗಿದ್ದು, ಅವರು ಅನೇಕ ಮಾರ್ಗದರ್ಶನ ಹಾಗೂ ನಿಸ್ವಾರ್ಥ ಸೇವೆ ಮಾಡಿದ್ದಾರೆ. ಈ ಪರಿಸರದ ಜನರ ಒಗ್ಗೂಡಿವಿಕೆಯಿಂದಲೇ ಅವರ ಸೇವೆಯ ಮಹತ್ವ ಅರಿವಾಗುತ್ತದೆ ಎಂದರು.

ಶಿಕ್ಷಣ ಇಲಾಖೆಯಿಂದ ಆಗಮಿಸಿದ್ದ ಪ್ರತಿಮಾ ಪೈ ವಿ., ಊರ ಹಿರಿಯರಾದ ದೇವಿದಾಸ ಶೆಟ್ಟಿ ಪಾಲ್ತಾಜೆ, ವಿಶ್ವನಾಥ ಪೂಜಾರಿ ಕೆ.ಕೆ., ಜಯಂತಿ ಎಸ್‌. ಪೂಜಾರಿ, ಎ.ಬಿ. ಅಬ್ದುಲ್ಲಾ ಅವರು ಚಿತ್ರಕಲಾ ಅವರ ವೃತ್ತಿ ಪಯಣದ ಯಶಸ್ಸುಗಳನ್ನು ಶ್ಲಾಘಿಸಿದರು.

ಗೌರವಾಭಿನಂದನೆ ಸ್ವೀಕರಿಸಿ ಮಾತನಾಡಿದ ಚಿತ್ರಕಲಾ ಕೆ. ಇಲ್ಲಿವರೆಗಿನ ಎಲ್ಲ ಯಶಸ್ಸಿಗೆ ಈ ಊರಿನ ಜನರ ಪ್ರೀತಿ, ಪ್ರೋತ್ಸಾಹ ಕಾರಣವಾಗಿದೆ. ನಿಮ್ಮ ಸಹಕಾರದಿಂದಲೇ ಈ ಕಾರ್ಯ ಯಶಸ್ವಿಯಾಯಿತು. ಈ ಊರಿನ ಪ್ರತಿಯೊಬ್ಬರು ನಾನು ಯೋಚಿಸಿದ ಯೋಜನೆ ಪೂರ್ಣಗೊಳ್ಳಲು ಸಹಕಾರ ನೀಡಿದ್ದೀರಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಅನೇಕ ಸಂಘಗಳು, ಹಿರಿಯ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿ, ಶಿಕ್ಷಕವೃಂದ, ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು, ಪೋಷಕರು, ದಾನಿಗಳು, ಊರ, ಪರವೂರ ವಿದ್ಯಾಭಿಮಾನಿಗಳು ಪಾಲ್ಗೊಂಡು ಶಿಕ್ಷಕಿಯ ನಿವೃತ್ತ ಜೀವನಕ್ಕೆ ಶುಭಹಾರೈಸಿದರು. ಸುಮಾರು 700ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.

ವೇದಿಕೆಯಲ್ಲಿ ವಿಟ್ಲ ಪಡ್ನೂರು ವ್ಯ.ಸ.ಸಂ. ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಸಾಲೆತ್ತೂರು ಗ್ರಾ.ಪಂ. ಅಧ್ಯಕ್ಷೆ ಪ್ರೇಮಾ, ಕೊಳ್ನಾಡು ಗ್ರಾ.ಪಂ. ಮಾಜಿ ಸದಸ್ಯ ಇಬ್ರಾಹಿಂ, ಸಾಲೆತ್ತೂರು ಸ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ಮಲ್ಲೇಶ್‌ ನಾಯಕ್‌, ಬಂಟ್ವಾಳ ಬಿ.ಐ.ಆರ್.ಟಿ. ರವೀಂದ್ರ, ಬಂಟ್ವಾಳ ಪ್ರಾ.ಶಾ. ಶಿ.ಸಂ. ಕಾರ್ಯದರ್ಶಿ ಯತೀಶ್‌, ಕ.ರಾ.ಸ.ನೌ.ಸಂ. ಕಾರ್ಯದರ್ಶಿ, ಎನ್‌.ಪಿ.ಎಸ್. ಸಂಘದ ಅಧ್ಯಕ್ಷ ಸಂತೋಷ್ ಕುಮಾರ್‌ ಉಪಸ್ಥಿತರಿದ್ದರು. ಸಮೂಹ ಸಂಪನ್ಮೂಲ ವ್ಯಕ್ತಿ ರಮೇಶ್‌ ಸ್ವಾಗತಿಸಿ, ಶಾಲಾ ಶಿಕ್ಷಕಿ ಮಮತಾ ಜಿ. ವಂದಿಸಿದರು. ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಸಂಪನ್ಮೂಲ ಅಧಿಕಾರಿ ಸುರೇಖಾ ಯಳವಾರ ನಿರೂಪಿಸಿದರು.

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

1 day ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

1 day ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

3 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

3 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

3 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

4 days ago