ಮುಲ್ಕಿ: ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾ ಗಣಪತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ 28ನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದೇವಸ್ಥಾನದ ಹೊರವಲಯದ ವೇದಿಕೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮಂಗಳೂರು ನೆಹರು ಯುವ ಕೇಂದ್ರದ ಆಡಳಿತಾಧಿಕಾರಿ ಜಗದೀಶ್ ಕೆ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರತ್ಕಲ್ ಅಗರಿ ಸಂಸ್ಥೆಯ ಮಾಲಕ ಅಗರಿ ರಾಘವೇಂದ್ರ ರಾವ್ ವಹಿಸಿ ಮಾತನಾಡಿ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸವಲತ್ತುಗಳನ್ನು ಒದಗಿಸಲು ಪ್ರಯತ್ನಿಸುತ್ತಿರುವ ಸಂಸ್ಥೆಯ ಕಾರ್ಯವೈಖರಿ ಶ್ಲಾಘನೀಯವಾಗಿದ್ದು ನಿರಂತರವಾಗಿ ನಡೆಯಲಿ ಎಂದರು
ಮುಖ್ಯ ಅತಿಥಿಗಳಾಗಿ ,ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ, ಉದ್ಯಮಿ ಹರಿಪ್ರಸಾದ್ ಶೆಟ್ಟಿ ತೋಕೂರುಗುತ್ತು ಬೆಂಗಳೂರು, ಗುತ್ತಿಗೆದಾರ ವಿಜಯಕುಮಾರ್ ಮಿತ್ರಪಟ್ನ ಮುಕ್ಕ, ಉದ್ಯಮಿ ಪ್ರವೀಣ್ ಕುಮಾರ್ ಬೊಳ್ಳೂರು, ಸುನಿಲ್ ಡಿ ರೈ ಮಂಗಳೂರು
ಶ್ರೀ ಸುಬ್ರಹ್ಮಣ್ಯ ಮಹಾ ಗಣಪತಿ ಸ್ಪೋರ್ಟ್ಸ್ ಕ್ಲಬ್ ನ ಗೌರವಾಧ್ಯಕ್ಷ ಪ್ರಶಾಂತ್ ಬೇಕಲ್, ಅಧ್ಯಕ್ಷ ದೀಪಕ್ ಸುವರ್ಣ,ಮಹಿಳಾ ಕಾರ್ಯಾಧ್ಯಕ್ಷೆ ಯಶೋದಾ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು
ಸಾಧಕ ವಿದ್ಯಾರ್ಥಿಗಳಾದ ಧ್ರುವ ಶ್ರಿಯಾನ್,ವಿಶಾಲ್ ಕೆ,ತ್ರಿಶಾ ಎಸ್ ಸುವರ್ಣ, ಅತ್ವಿಕ್ ಆರ್ ಶೆಟ್ಟಿ, ವ್ಯಾಸಕೃಷ್ಣ ಎಸ್ ರಾವ್, ರಿಜ್ಮಾ ಫಾತಿಮಾ,ದಿಶಾ, ನಿಧಿ ಯು ಕುಲಾಲ್,ದೀಕ್ಷಾ.ಆರ್, ಸಿರಿನ್ ಕರಿಷ್ಮಾ,ಸ್ನೇಹಾ ಆಚಾರ್ಯ ಪ್ರತಿಭಾ ಪುರಸ್ಕಾರ ಮೂಲಕ ಸನ್ಮಾನಿಸಲಾಯಿತು.ಕರಾಟೆ ಸಾಧಕರನ್ನು,ದಾನಿಗಳನ್ನು ಗೌರವಿಸಲಾಯಿತು ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯು ಅಧ್ಯಕ್ಷ ಗುರುರಾಜ ಎಸ್. ಪೂಜಾರಿ ರವರನ್ನು ಗೌರವಿಸಲಾಯಿತು
ಸಂಸ್ಥೆಯ ಸುರೇಶ್ ಶೆಟ್ಟಿ, ಸಂತೋಷ್ ದೇವಾಡಿಗ ಗೀತಾ ಸದಾನಂದ ನಿರೂಪಿಸಿದರು. ಸಂಪತ್ ದೇವಾಡಿಗ ಧನ್ಯವಾದ ಅರ್ಪಿಸಿದರು ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…