ಬಂಟ್ವಾಳ: ಆರ್ಥಿಕವಾಗಿ ಹಿಂದುಳಿದ ಅರ್ಹ ಫಲಾನುಭವಿಗಳಿಗೆ ಸರಕಾರವು ವಿವಿಧ ಸಲಕರಣೆಗಳನ್ನು ನೀಡುತ್ತಿದ್ದು, ಅದನ್ನು ಪಡೆದುಕೊಂಡವರು ತಮ್ಮ ಆದಾಯಕ್ಕೆ ಪೂರಕವಾಗಿ ಬಳಸಿಕೊಂಡು ಸ್ವಾಭಿಮಾನದ ಜೀವನ ನಡೆಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಅವರು ತಮ್ಮ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಿವಿಧ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು. ಪ್ರಸ್ತುತ ಅರ್ಜಿ ಹಾಕಿರುವ ೧೨೬ ಮಂದಿಯ ಪೈಕಿ ಸರಕಾರದ ಗುರಿಯಂತೆ ೩೬ ಮಂದಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಟೈಲರಿಂಗ್ ಯಂತ್ರ ನೀಡಲಾಗಿದ್ದು, ಮುಂದೆ ಮತ್ತೆ ಯಂತ್ರ ಮಂಜೂರಾದಾಗ ಉಳಿದ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.
ಕಾರ್ಮಿಕ ಇಲಾಖೆಯ ಮೂಲಕ ಬಂಟ್ವಾಳ ಕ್ಷೇತ್ರದಲ್ಲಿ ಪ್ರಸ್ತುತ ೩೧೮ ಮಂದಿ ಮೇಸ್ತ್ರಿ ಗಳಿಗೆ ಕಿಟ್, ೧೦೧ ಮಂದಿ ವೆಲ್ಡರ್ಗಳಿಗೆ ಕಿಟ್ ಹಾಗೂ ೬೩ ಮಂದಿ ಎಲೆಕ್ಟ್ರೀಷಿಯನ್ ಗಳಿಗೆ ಸೇರಿ ಒಟ್ಟು ೪೮೨ ಮಂದಿಗೆ ಕಿಟ್ ಮಂಜೂರಾಗಿದ್ದು, ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಲಾಯಿತು. ಜತೆಗೆ ೩೬ ಮಂದಿ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ನೀಡಲಾಯಿತು.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ್, ಬಂಟ್ವಾಳ ಕಾರ್ಮಿಕ ನಿರೀಕ್ಷಕಿ ಲವಿನಾ ಡಿಸೋಜ, ಕಚೇರಿ ಸಹಾಯಕರಾದ ಶಶಿಧರ, ಮುರಳಿ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…